Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತೆಂಕುತಿಟ್ಟಿನ ಯಕ್ಷಗಾನ ಪದ್ಯಗಳ ಛಂದಸ್ಸಿನ ದಾಖಲೀಕರಣದ ಕಾರ‍್ಯಾಗಾರ
    ಕರಾವಳಿ

    ತೆಂಕುತಿಟ್ಟಿನ ಯಕ್ಷಗಾನ ಪದ್ಯಗಳ ಛಂದಸ್ಸಿನ ದಾಖಲೀಕರಣದ ಕಾರ‍್ಯಾಗಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡಬಿದಿರೆ: ಮಣಿ ಕೃಷ್ಣಸ್ವಾಮಿ ಅಕಾಡೆಮಿ(ರಿ) ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ತೆಂಕುತಿಟ್ಟಿನ ಆಯ್ದ ೧೫೦ ಯಕ್ಷಗಾನ ಪದ್ಯಗಳ ಛಂದಸ್ಸಿನ ದಾಖಲೀಕರಣದ ಕಾರ‍್ಯಾಗಾರವನ್ನು ಆಳ್ವಾಸ್ ಕಾಲೇಜಿನ ಕುವೆಂಪು ಸಭಾಭವನದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿತ್ತು.

    Click Here

    Call us

    Click Here

    ವಿದಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾ. ಗಣೇಶ್ ಕಾರ್ಣಿಕ್ ಕಾರ‍್ಯಗಾರವನ್ನು ಉದ್ಘಾಟಿಸಿ, ನಮ್ಮ ಜೀವನದಲ್ಲಿ ಎದುರಾಗುವ ಪ್ರತಿ ಕ್ಷಣವು ಕಲಿಕೆಗೆ ಅವಕಾಶ ಮಾಡಿಕೊಡುತ್ತದೆ, ಅದರ ಸಂಪೂರ್ಣ ಲಾಭವನ್ನು ಪಡೆದುಕೊಂಡಾಗ ಬದುಕಿನಲ್ಲಿ ಉನ್ನತ ಸ್ಥಾನಕ್ಕೆರಲು ಸಾಧ್ಯ ಎಲ್ಲಾ ಒಳ್ಳೆಯ ವಿಚಾರಗಳೂ ನನ್ನ ಬಳಿಗೆ ಹರಿದು ಬರಲಿ ಎಂಬ ಮುಕ್ತ ಮನಸ್ಸು ನಮ್ಮಲ್ಲಿರಬೇಕು ಎಂದು ತಿಳಿಸಿದರು. ಭಗವಂತನಲ್ಲಿ ಪ್ರತಿ ಕ್ಷಣವೂ ತನ್ನ ಅಂತರಂಗ ಸೌಂದರ‍್ಯವನ್ನು ಇಮ್ಮಡಿಗೊಳಿಸುವ ಶಕ್ತಿಯನ್ನು ನೀಡು ಎಂದು ಪ್ರಾರ್ಥಿಸಬೇಕು. ಸೌಂದರ‍್ಯ ಪ್ರಜ್ಞೆ ಇರುವ ವ್ಯಕ್ತಿ ತನ್ನ ಜೀವನದ ಪ್ರತಿ ಕ್ಷಣವನ್ನೂ ಸಂತೋಷದಿಂದ ಕಳೆಯಲು ಸಾಧ್ಯ ಸಾಂಸ್ಕೃತಿಕವಾದ ಎಲ್ಲಾ ಆಯಾಮಗಳಲ್ಲಿಯೂ ದಾಖಲೀಕರಿಸುವ ಪ್ರವೃತ್ತಿ ಬೆಳೆಯಬೇಕು, ಹೆಚ್ಚು ಹೆಚ್ಚು ಯುವಕರನ್ನು ಈ ನಾಡಿನ ಶಾಸ್ತ್ರೀಯ ಕಲೆಗಳಿಗೆ ಪರಿಚಯಿಸುವ ಕೆಲಸವಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.

    ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಮೋಹನ್ ಆಳ್ವ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಈಗಿನ ಕಾಲಕ್ಕೆ ಹೊಂದುವ ಶಿಕ್ಷಣದೊಂದಿಗೆ ಕಲೆ, ಸಾಹಿತ್ಯ, ಸಂಸ್ಕೃತಿ, ಕ್ರೀಡೆಗೆ ಹೆಚ್ಚಿನ ಒತ್ತು ಕೊಡಲಾಗಿದ್ದು, ಇದರ ಪ್ರತಿಫಲವಾಗಿ ವಿಧ್ಯಾರ್ಥಿಗಳು ತಮ್ಮ ಸಾಧನೆಯ ಮೂಲಕ ಸಂಸ್ಥೆಯ ಕೀರ್ತಿಯನ್ನು ಇನ್ನಷ್ಟು ಹೆಚ್ಚಿಸಿದ್ದಾರೆ ಎಂದರು. ಕಲೆಯ ಅಭಿವೃದ್ಧಿಗೋಸ್ಕರ ದತ್ತು ಸ್ವೀಕಾರ, ಉತ್ತಮ ತರಬೇತುದಾರರಿಂದ ವಿದ್ಯಾರ್ಥಿ ಕಲಾವಿದರಿಗೆ ತರಬೇತಿ, ವಿದ್ಯಾರ್ಥಿ ಸಮೂಹದಿಂದ ನಾಡಿನಾದ್ಯಂತ ಕಲೆಯ ಪ್ರಸ್ತುತ ಪಡಿಸುವಿಕೆಯ ಕಾರ‍್ಯಕ್ರಮಗಳು ಯಶಸ್ವಿಯಾಗಿವೆ ಎಂದು ಹರ್ಷ ವ್ಯಕ್ತ ಪಡಿಸಿದರು. ತೆಂಕುತಿಟ್ಟಿನ ಯಕ್ಷಗಾನ ಪದ್ಯಗಳ ಛಂದಸ್ಸಿನ ದಾಖಲೀಕರಣದ ಕಾರ‍್ಯ ಕನ್ನಡ ಸಾಹಿತ್ಯ ಲೋಕದ ಪರಿಧಿಯನ್ನು ಇನ್ನಷ್ಟು ವಿಸ್ತಾರಗೊಳಿಸಿದೆ. ಈ ನಿಟ್ಟಿನಲ್ಲಿ ಮಣಿಕೃಷ್ಣ ಅಕಾಡೆಮಿ ಹೆಚ್ಚಿನ ಚಿಂತನೆ ಹಾಗೂ ಅದ್ಯಯನ ನಡೆಸುತ್ತಾ ಬಂದಿರುವುದು ರಚನಾತ್ಮಕ ಹಿನ್ನಲೆಯಲ್ಲಿ ಕಲೆಯನ್ನು ಕಟ್ಟಲು ಸಾಧ್ಯವಾಗಿದೆ ಎಂದರು.

    ಕಿನ್ನಿಗೋಳಿ ಡಿ.ಎಸ್ ಶ್ರೀಧರ್ ರವರ ಮಾರ್ಗದರ್ಶನದಲ್ಲಿ, ಬಲಿಪ ಶಿವಪ್ರಕಾಶ್ ಹಾಗೂ ಪಿ.ನಿತ್ಯಾನಂದ ರಾವ್ ಭಾಗವತರಾಗಿ, ಕಟೀಲು ಮುರುಳೀಧರ್ ಭಟ್ ಮದ್ದಳೆಯಲ್ಲಿ ಸಹಕರಿಸದ್ದಾರೆ. ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದ ಸಂಚಾಲಕ ದೀವಿತ್ ಶ್ರೀಧರ್ ಕೋಟ್ಯಾನ್ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    2 + sixteen =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.