Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಲ್ಲೂರು ಯಾತ್ರಿಕರ ದರೋಡೆ ಗ್ಯಾಂಗ್‌ಗೆ 8ವರ್ಷ ಸಜೆ
    ಅಪಘಾತ-ಅಪರಾಧ ಸುದ್ದಿ

    ಕೊಲ್ಲೂರು ಯಾತ್ರಿಕರ ದರೋಡೆ ಗ್ಯಾಂಗ್‌ಗೆ 8ವರ್ಷ ಸಜೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕೊಲ್ಲೂರು ದೇವಳಕ್ಕೆ ತೆರಳುತ್ತಿದ್ದ ಕೇರಳದ ಯಾತ್ರಿಕರ ಕಾರನ್ನು ಅಡ್ಡಗಟ್ಟಿ ಪುಡಿಗೈದು ದರೋಡೆಗೆ ಯತ್ನಿಸಿದ ಪ್ರಕರಣದ ಐವರು ಆರೋಪಿಗಳಾದ ವಾಮಂಜೂರು ಮೂಡುಶೆಡ್ಡೆ ನಿವಾಸಿಗಳಾದ ಫೈಝಲ್ (24), ಮಹಮ್ಮದ್ ರಿಜ್ವಾನ್ (28), ಮಹಮ್ಮದ್ ಅಲಿ (25), ಸೈಪುದ್ಧಿನ್ (23) ಹಾಗೂ ಕುಲಶೇಖರ ನಿವಾಸಿ ಹರ್ಷಿತ್ ಶೆಟ್ಟಿ(25)ಗೆ ಕುಂದಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಂಟು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ, ತಲಾ ರೂ. 40,000 ದಂಡ ವಿಧಿಸಿರುವುದಲ್ಲದೇ ದೂರುದಾರ ಶ್ಯಾಮಕುಮಾರ್ ಅವರಿಗೆ ತಲಾ 3.000ರೂ ಹಣವನ್ನು ಪರಿಹಾರ ರೂಪದಲ್ಲಿ ನೀಡಬೇಕು ಎಂದು ತೀರ್ಪು ನೀಡಿದೆ.

    Click Here

    Call us

    Click Here

    2013ರ ಡಿಸೆಂಬರ್ 15ರಂದು ಕೇರಳದ ಏಷ್ಯಾನೆಟ್ ಸುದ್ಧಿವಾಹಿಯಲ್ಲಿ ಕ್ಯಾಮರಾಮನ್ ಶ್ಯಾಮಕುಮಾರ್ ಹಾಗೂ ಅದೇ ವಾಹಿನಿಯ ಇನ್ನೋರ್ವ ಸಿಬ್ಬಂಧಿ ಹಾಗೂ ಅವರ ಕುಟುಂಬಿಕರು ಸ್ವಿಫ್ಟ್ ಕಾರಿನಲ್ಲಿ ರಾತ್ರಿ ಕೊಲ್ಲೂರಿಗೆ ತೆರಳುತ್ತಿದ್ದ ವೇಳೆ ಕಾರೊಂದರಲ್ಲಿ ಹಿಂಬಾಲಿಸಿ ಬಂದಿದ್ದ ದರೋಡೆಕೋರರು ಇಡೂರು ಕುಂಜ್ಞಾಡಿ ಬಳಿ ಯಾತ್ರಿಕರ ಕಾರನ್ನು ಅಡ್ಡಗಟ್ಟಿ ರಾಡಿನಿಂದ ಕಾರಿನ ಹಿಂಬದಿಯ ಗಾಜು ಪುಡಿಗೈದಿದ್ದರು. ದುಷ್ಕರ್ಮಿಗಳಿಂದ ಅಪಾಯದ ಮುನ್ಸೂಚನೆಯನ್ನರಿತು ಕಾರನ್ನು ಹಾಗೆಯೇ ಚಲಾಯಿಸಿದ ಶ್ಯಾಮಕುಮಾರ್ ಸೀದಾ ಕೊಲ್ಲೂರಿಗೆ ತೆರಳಿ ಅಲ್ಲಿ ಠಾಣೆಗೆ ದೂರು ನೀಡಿದ್ದರು. ತಕ್ಷಣವೇ ಕಾರ್ಯಾಚರಣೆಗಿಳಿದಿದ್ದ ಪೊಲೀಸರು ಚಿತ್ತೂರು ಜಂಕ್ಷನ್ ಬಳಿ ಆರೋಪಿಗಳನ್ನು ಬಂಧಿಸಿದ್ದರು.

    ಪ್ರಕರಣದ ತನಿಕೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಪ್ರಕಾಶ್ ಖಂಡೇರಿ ಈ ಐವರು ಆರೋಪಿಗಳನ್ನು ಸಾಕ್ಷಾಧಾರಗಳ ಆಧಾರದಲ್ಲಿ ತಪ್ಪಿತಸ್ಥರು ಎಂದು ಪರಿಗಣಿಸಿ ಎಂಟು ವರ್ಷಗಳ ಶಿಕ್ಷೆ ವಿಧಿಸಿದೆ. ಈ ಹಿಂದೆ ಆರೋಪಿಗಳನ್ನು ಬಂಧಿಸಿದ್ದ ಸಂದರ್ಭದಲ್ಲಿ ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ನಿರಾಕರಿಸಲಾಗಿತ್ತು. ಬಳಿಕ ಹೈಕೋರ್ಟ್‌ನಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದರು. ಈ ಪೈಕಿ ರಿಜ್ವಾನ್ ಹಾಗೂ ಸೈಪುದ್ಧಿನ್ ಬೇರೊಂದು ಪ್ರಕರಣದಲ್ಲಿ ಆರೋಪಿಯಾಗಿದ್ದ ಜೈಲುವಾಸ ಅನುಭವಿಸುತ್ತಿದ್ದರು.

    ನಾಲ್ಕು ವರ್ಷದಲ್ಲಿ ಒಂಬತ್ತು ಸಾಕ್ಷಿಗಳ ವಿಚಾರಣೆ ನಡೆಸಲಾಗಿತ್ತು. ದೂರುದಾರ ಕೇರಳದ ಶ್ಯಾಮಕುಮಾರ್ ಅವರ ಪರವಾಗಿ ಸರಕಾರಿ ಅಭಿಯೋಜಕ ಶ್ರೀನಿವಾಸ ಹೆಗ್ಡೆ ಮೊದಲು ವಾದಿಸಿದ್ದರೆ ಬಳಿಕ ಸರಕಾರಿ ಅಭಿಯೋಜಕ ಹರಿಶ್ಚಂದ್ರ ಉದ್ಯಾವರ ವಾಸಿದಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

    28/04/2026

    ರೌಡಿಶೀಟರ್ ಇಡೂರು ಕುಂಜ್ಞಾಡಿಯ ಕಾರ್ತಿಕ್ ಆಚಾರ್ ಗಡಿಪಾರು

    11/04/2026

    ಬೈಕ್‌ಗೆ ಮಿನಿಲಾರಿ ಡಿಕ್ಕಿಯಾಗಿ ಮೂವರಿಗೆ ಗಂಭೀರ ಗಾಯ

    02/04/2026
    Leave A Reply Cancel Reply

    five + 19 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.