Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರಿನಲ್ಲಿ ಪ್ರಾಚ್ಯವಸ್ತು ಪ್ರದರ್ಶನ ಉದ್ಘಾಟನೆ
    ಊರ್ಮನೆ ಸಮಾಚಾರ

    ಬೈಂದೂರಿನಲ್ಲಿ ಪ್ರಾಚ್ಯವಸ್ತು ಪ್ರದರ್ಶನ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಪ್ರಾಚ್ಯವಸ್ತುಗಳು ಇತಿಹಾಸದ ಆಕರಗಳು. ಅವು ಸಮುದಾಯದ ಪ್ರಾಚೀನ ಜೀವನ ವಿಧಾನ, ಸಾಂಸ್ಕೃತಿಕ ಬೆಳವಣಿಗೆ ಮತ್ತು ಬದಲಾವಣೆಗಳ ಮೇಲೆ ಬೆಳಕು ಚೆಲ್ಲುತ್ತವೆ. ಅಧ್ಯಯನದ ದೃಷ್ಟಿಯಿಂದ ಮಹತ್ವ ಪಡೆದಿರುವ ಅಂತಹ ವಸ್ತುಗಳನ್ನು ಸಂಗ್ರಹಿಸಿ ರಕ್ಷಿಸುವ ಕೆಲಸವನ್ನು ಶಿಕ್ಷಣ ಸಂಸ್ಥೆಗಳು ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಮೂಲಕ ಮಾಡಬಹುದು ಎಂದು ನಿವೃತ್ತ ಬ್ಯಾಂಕ್ ಅಧಿಕಾರಿ ಎಂ. ಗೋವಿಂದ ಹೇಳಿದರು.

    Click Here

    Call us

    Click Here

    ಪ್ರಾಚ್ಯ ವಸ್ತು ಸಂಗ್ರಹಾಲಯಗಳ ಮತ್ತು ಪರಂಪರೆಯ ಇಲಾಖೆಯು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಸ್ಮಾರಕಗಳ ಮೂರ್ತ ಮತ್ತು ಅಮೂರ್ತ ಪರಂಪರೆಯ ಸಂಪತ್ತಿನ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಇಲ್ಲಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಆಯೋಜಿಸಿದ್ದ ಸ್ಪರ್ಧೆಗಳ ಭಾಗವಾಗಿ ನಡೆದ ನಿತ್ಯಬಳಕೆಯ ಪ್ರಾಚ್ಯವಸ್ತುಗಳ ಪ್ರದರ್ಶನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಪ್ರದರ್ಶನವನ್ನು ಉದ್ಘಾಟಿಸಿದ ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ವಸ್ತುಗಳ ಸಂಗ್ರಹಕ್ಕೆ ಶ್ರಮಿಸಿದ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಅಭಿನಂದಿಸಿ, ಶಿಕ್ಷಣ ಸಂಸ್ಥೆಗಳಲ್ಲಿ ಇಂತಹ ವಸ್ತುಗಳ ಕಿರು ಸಂಗ್ರಹಾಲಯವನ್ನು ಹೊಂದುವ ಮೂಲಕ ಮಕ್ಕಳಲ್ಲಿ ಇತಿಹಾಸದ ಪ್ರಜ್ಞೆ ಮೂಡಿಸಬಹುದು ಎಂದರು.

    ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವೀಂದ್ರ ಶ್ಯಾನುಭಾಗ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಸಂಯೋಜಿಸಿದ್ದ ಶಿಕ್ಷಕ ಗಣಪತಿ ಹೋಬಳಿದಾರ್ ಸ್ವಾಗತಿಸಿ, ವಂದಿಸಿದರು. ಪ್ರಭಾರ ಮುಖ್ಯೋಪಾಧ್ಯಾಯಿನಿ ಮುಕ್ತಾ, ವಿದ್ಯಾರ್ಥಿ ನಾಯಕ ಡಿ. ನಾಗರಾಜ, ಉಪ ನಾಯಕ ಶಿವದರ್ಶನ, ನಾಯಕಿ ಜಾನ್ಸಿ ಇದ್ದರು. ಪ್ರದರ್ಶನದಲ್ಲಿ ಇದ್ದ, ಹಿಂದೆ ಬಳಕೆಯಲ್ಲಿದ್ದು ಈಗ ಮೂಲೆಗುಂಪಾಗಿರುವ ಕೃಷಿ ಉಪಕರಣಗಳು, ಗೃಹೋಪಯೋಗಿ ವಸ್ತುಗಳು, ಆಹಾರ ಸಿದ್ಧತಾ ಪರಿಕರಗಳು, ಅಳತೆ ಪಾತ್ರೆಗಳು, ಸಾಮಗ್ರಿ ಸಂಗ್ರಾಹಕಗಳು, ಪೂಜಾ ಉಪಕರಣಗಳು, ಆಯುಧಗಳು, ಆಟದ ಸಾಮಗ್ರಿಗಳು ಮತ್ತು ಹಳೆಯ ನಾಣ್ಯಗಳು ಗಮನ ಸೆಳೆದುವಲ್ಲದೆ ಅವುಗಳ ಸಂಗ್ರಹದ ಹಿಂದೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ತೋರಿದ ಆಸಕ್ತಿ ಮತ್ತು ವಹಿಸಿದ ಶ್ರಮ ಮೆಚ್ಚುಗೆ ಗಳಿಸಿದುವು.

     

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    2 × 2 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.