Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಮ ಸಾಮರಸ್ಯ ಕೆಡಿಸುವ ಸಂಸದೆ ಕರಂದ್ಲಾಜೆ ರಾಜೀನಾಮೆ ನೀಡಲಿ : ಶ್ಯಾಮಲಾ ಭಂಡಾರಿ ಆಗ್ರಹ
    ಊರ್ಮನೆ ಸಮಾಚಾರ

    ಕೋಮ ಸಾಮರಸ್ಯ ಕೆಡಿಸುವ ಸಂಸದೆ ಕರಂದ್ಲಾಜೆ ರಾಜೀನಾಮೆ ನೀಡಲಿ : ಶ್ಯಾಮಲಾ ಭಂಡಾರಿ ಆಗ್ರಹ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಮಾನ್ಯ ಸಂಸದೆ ಶೋಭಾ ಕರಂದ್ಲಾಜೆಯವರು ಸಂವಿಧಾನದ ರಕ್ಷಣೆಯಂತಹ ಜವಾಬ್ದಾರಿಯುತ ಹುದ್ದೆಯಾದ ಸಂಸದೆಯಾಗಿದ್ದು ಕೋಮು ಸಾಮರಸ್ಯ ಕೆಡುವಂತಹ ರೀತಿಯಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿ ಗಲಭೆ ಪೀಡಿತ ಪ್ರದೇಶದಲ್ಲಿ ಒಂದು ಸಮುದಾಯದ ವಿರುದ್ಧ ಮತ್ತೊಂದು ಸಮುದಾಯದವರನ್ನು ಎತ್ತಿಕಟ್ಟುತ್ತಿರುವುದು ಖಂಡನೀಯವಾಗಿದೆ. ಇವರು ಹಿಂದೂ ಧರ್ಮವನ್ನು ಗುತ್ತಿಗೆ ಪಡೆದಂತೆ ವರ್ತಿಸುತ್ತಿದ್ದಾರೆ. ಗಲಭೆಯನ್ನು ತನ್ನ ಭಾಷಣದ ಮೂಲಕ ರಾಜ್ಯಾದ್ಯಂತ ಹಬ್ಬಿಸಲು ಪ್ರಯತ್ನಿಸಿರುವುದು ಹೊಣೆಗೇಡಿ ಮತ್ತು ಅಘಾತಕಾರಿ ವರ್ತನೆಯಾಗಿದೆ. ಸಂವಿಧಾನದ ಆಶಯದಂತೆ ಎಲ್ಲಾ ಧರ್ಮ ಮತ್ತು ಸಮುದಾಯದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರು ಸಂಸದರಾಗಿ ಕಾರ್ಯನಿರ್ವಹಿಸುತ್ತಿಲ್ಲ. ಆ ಕಾರಣಕ್ಕಾಗಿ ಅವರು ಈಗಿಂದೀಗಲೇ ರಾಜೀನಾಮೆ ನೀಡಬೇಕೆಂದು ರಾಜ್ಯ ಕಾಂಗ್ರೆಸ್ ಕಾರ್ಯದರ್ಶಿ, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಶ್ಯಾಮಲಾ ಭಂಡಾರಿ ಆಗ್ರಹಿಸಿದ್ದಾರೆ.

    Click Here

    Call us

    Click Here

    ಎಲ್ಲಾ ಧರ್ಮಗಲ್ಲಿಯೂ ಒಳ್ಳೆಯವರು ಇರುವಂತೆ, ಕೆಟ್ಟವರೂ ಇದ್ದಾರೆ. ಯಾರೋ ಬೆರೆಳೆಣಿಕೆಯಷ್ಟು ಕಿಡಿಗೇಡಿಗಳು ಯಾವುದೋ ಆಮಿಷಕ್ಕೆ ಒಳಗಾಗಿ ಎಸಗುವ ದುಷ್ಕೃತ್ಯಗಳಿಗೊಸ್ಕರ ಇಡೀ ಒಂದು ಸಮುದಾಯವನ್ನೇ ದೂಷಿಸುವುದು ಸರಿಯಲ್ಲ. ದೇಶದ ಸಂವಿಧಾನದ ಪ್ರಕಾರ ಯಾರೇ ತಪ್ಪು ಮಾಡಿದರೂ ಅವರಿಗೆ ಕಾನೂನು ಪ್ರಕಾರ ಶಿಕ್ಷೆಯನ್ನು ನೀಡಲಾಗುತ್ತದೆ. ಆದರೆ ಮಾನ್ಯ ಕರಂದ್ಲಾಜೆಯವರು ರಾಜ್ಯದ ಯಾವುದೇ ಭಾಗದಲ್ಲಿ, ಯಾವುದೇ ಘಟನೆ ಘಟಿಸಿದರೂ ಅದಕ್ಕೆ ಕಾಂಗ್ರೇಸ್ ಪಕ್ಷವೇ ಕಾರಣವೆಂದು ಹೇಳಿಕೆ ನೀಡುತ್ತಾರೆ. ಪದೇ ಪದೇ ಮುಖ್ಯ ಮುಂತ್ರಿಗಳ ರಾಜೀನಾಮೆಗೆ ಆಗ್ರಹಿಸುತ್ತಾರೆ. ಆದರೆ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಮಾನ್ಯ ಕರಂದ್ಲಾಜೆಯವರು ಸಂಸದೆಯಾಗಿ ಮುಂದುವರೆಯುವ ಯಾವುದೇ ನೈತಿಕತೆಯನ್ನು ಉಳಿಸಿಕೊಂಡಿಲ್ಲ. ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆಯಾಗಿರುವ ಮಾನ್ಯ ಕರಂದ್ಲಾಜೆಯವರು ದಕ್ಷಿಣಕನ್ನಡ ಮೂಲದವರಾಗಿದ್ದು ರಾಜಕೀಯ ಕಾರಣಗಳಿಗೋಸ್ಕರ ತನ್ನದೇ ಜಿಲ್ಲೆಯ ಸೌಹಾರ್ದತೆಯನ್ನು ಕೆಡಿಸುತ್ತಿರುವುದು ಖಂಡನೀಯ ವಿಚಾರ. ಮತ್ತು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಉದ್ಭವಿಸಿರುವ ಗಲಭೆಯನ್ನು ತನ್ನ ಭಾಷಣದ ಮೂಲಕ ರಾಜ್ಯಾದ್ಯಂತ ಹಬ್ಬಿಸಲು ಪ್ರಯತ್ನಿಸಿರುವುದು ಹೊಣೆಗೇಡಿ ಮತ್ತು ಅಘಾತಕಾರಿ ವರ್ತನೆಯಾಗಿದೆ. ಸಂವಿಧಾನದ ಆಶಯದಂತೆ ಎಲ್ಲಾ ಧರ್ಮ ಮತ್ತು ಸಮುದಾಯದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರು ಸಂಸದರಾಗಿ ಕಾರ್ಯನಿರ್ವಹಿಸುತ್ತಿಲ್ಲ. ಆ ಕಾರಣಕ್ಕಾಗಿ ಅವರು ಈಗಿಂದೀಗಲೇ ರಾಜೀನಾಮೆ ನೀಡಬೇಕೆಂದು ರಾಜ್ಯ ಕಾಂಗ್ರೆಸ್ ಕಾರ್ಯದರ್ಶಿ, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಶ್ಯಾಮಲಾ ಭಂಡಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025

    ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.