Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಿರಿಯರೆಡೆಗೆ ನಮ್ಮ ನಡಿಗೆ: ಸನದಿಯವರಿಗೆ ದಶಮನೋತ್ಸವ ಗೌರವ
    ಕರಾವಳಿ

    ಹಿರಿಯರೆಡೆಗೆ ನಮ್ಮ ನಡಿಗೆ: ಸನದಿಯವರಿಗೆ ದಶಮನೋತ್ಸವ ಗೌರವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಪ್ರೀತಿ ಎಂಬದೇ ಚುಂಬಕ ಗಾಳಿ: ಬಿ.ಎ.ಸನದಿ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಪ್ರೀತಿಯೆಂಬುದೇ ಒಂದು ಪ್ರಶಸ್ತ ಚುಂಬಕ ಶಕ್ತಿ. ವ್ಯಕ್ತಿಯ ವ್ಯಕ್ತಿತ್ವದ ಮೇಲೆ ಅವನ ಕೆಲಸ ಸಾಧನೆಗಳ ಮೇಲೆ ಇಂತಹ ಪ್ರೀತಿ ಗೌರವವೇ ನಮ್ಮನ್ನು ಪರಸ್ಪರ ಸೆಳೆಯುತ್ತದೆ ಎಂದು ಪಂಪ ಪ್ರಶಸ್ತಿ ಪುರಸ್ಕೃತ ಸಾಹಿತಿ, ಆಕಾಶವಾಣಿ ಮಾಧ್ಯಮದ ಹಿರಿಯ ಚೇತನ ಬಿ.ಎ ಸನದಿ ಹೇಳಿದರು.

    ಅವರು ಪತ್ರಕರ್ತರ ವೇದಿಕೆ( ರಿ) ಬೆಂಗಳೂರು ಉಡುಪಿ ಜಿಲ್ಲಾ ಘಟಕದ ಹಿರಿಯರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದ ದಶಮಾನೋತ್ಸವ ಪ್ರಯುಕ್ತ ನೀಡಲಾದ ಗೌರವವನ್ನು ಗುರುವಾರ ಸ್ವೀಕರಿಸಿ ಮಾತನಾಡುತ್ತಿದ್ದರು. ನನಗೆ ಭಾಷೆಯ ಮೇಲೆ ಪ್ರೀತಿಇದೆ. ಭಾಷಾ ವ್ಯಾಮೋಹವಿರಲಿಲ್ಲ ಆಯಾ ಭಾಷೆಯ ಜನರೊಡನೆ ಅವರ ಭಾಷೆಯಲ್ಲಿ ಪ್ರೀತಿ ವಿಶ್ವಾಸ ಹಂಚಿ ಕೊಳ್ಳುವುದು ಸಾಧ್ಯವಾಯಿತು. ಸಾಮರಸ್ಯದ ಬದುಕೇ ಶ್ರೇಷ್ಠ ಎಂದು ಅವರು ಹೇಳಿದರು.

    ಗೌರವ ಪ್ರಧಾನಿಸಿದ ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರು ಸಾಹಿತ್ಯದಲ್ಲಿ ಕೀರ್ತಿಗಳಿಸಿದ ಸನದಿ ಅವರು ಜನರ ಮನಸ್ಸಿನಲ್ಲಿ ಉಳಿಯುವ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಇಂತಹ ವ್ಯಕ್ತಿಗಳನ್ನು ಗೌರವಿಸುವುದೇ ಒಂದು ಸಾರ್ಥಕದ ಕ್ಷಣ. ಅವರು ನೂರ್ಕಾಲ ಬಾಳಲಿ ಬದುಕಲಿ ಎಂದು ಹಾರೈಸಿದರು.

    ಪ್ರಾದೇಶಿಕ ಭಾಷೆಗಳ ಬಗೆಗಿನ ಕೀಳರಿಮೆ ಸಲ್ಲದು. ನೆಲದ ಭಾಷೆ, ಜಲದ ಭಾಷೆ, ಮನಸ್ಸಿನ ಭಾಷೆಗೆ ಹೆಚ್ಚಿನ ಗೌರವ ಸಿಗ ಬೇಕು. ಸನದಿ ಈ ನಿಟ್ಟಿನಲ್ಲಿ ವಿಶಿಷ್ಟವಾಗಿ ಆಲೋಚಿಸಿದವರು ಎಂದು ಅತಿಥಿಗಳಾಗಿದ್ದ ಪಂಚನಬೆಟ್ಟು ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎ.ನರಸಿಂಹ ಹೇಳಿದರು.

    Click here

    Click here

    Click here

    Click Here

    Call us

    Call us

    ಸನದಿ ಮಾನವ್ಯ ಕವಿ, ಅವರು ತಾವು ಹೇಳಿದ್ದನ್ನು ಮತ್ತು ವಿಶ್ವ ಮಾನದ ವಿಚಾರ- ತತ್ವಗಳನ್ನು ತಮ್ಮ ಬದುಕಲ್ಲಿ ಬದುಕಿ ತೋರಿದ್ದಾರೆ. ಆಕಾಶವಾಣಿ ಮತ್ತು ಪಂಚಾಯತ್ ರಾಜ್ ಪತ್ರಿಕೆ ಮೊದಲ ಎರಡು ವರ್ಷ ಮಾಧ್ಯಮದಲ್ಲಿ ಸಲ್ಲಿಸಿದ ಸೇವೆಗಾಗಿ ಈ ಗೌರವ ಎಂದು ಸಂಘಟಕ, ವೇದಿಕೆಯ ಜಿಲ್ಲಾಧ್ಯಕ್ಷ ಶೇಖರ ಅಜೆಕಾರು ಅಭಿಪ್ರಾಯಿಸಿದರು. ಪತ್ರಿಕೋದ್ಯಮ ಪ್ರಾಧ್ಯಾಪಕ ಮಂಜಪ್ಪ ದ್ಯಾ ಗೋಣಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ಸಾಹಿತ್ಯಕವಾಗಿ ಕಾರ್ಯಕ್ರಮ ನಿರೂಪಿಸಿದರು. ಕುಂದಾಪ್ರ ಡಾಟ್ ಕಾಮ್ ಸಂಪಾದಕ ಸುನೀಲ್ ಬೈಂದೂರು, ಶ್ರಿಮತಿ ನಜಿರಾ ಸನದಿ ಮೊದಲಾದವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026
    Leave A Reply Cancel Reply

    7 + 6 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.