Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಂಡ್ಸೆ ಪ್ರಗತಿಬಂಧು ಒಕ್ಕೂಟದ 10ನೇ ವರ್ಷದ ವಾರ್ಷಿಕೋತ್ಸವ
    ಊರ್ಮನೆ ಸಮಾಚಾರ

    ವಂಡ್ಸೆ ಪ್ರಗತಿಬಂಧು ಒಕ್ಕೂಟದ 10ನೇ ವರ್ಷದ ವಾರ್ಷಿಕೋತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ವಂಡ್ಸೆ: ಕರಾವಳಿ ಭಾಗದಲ್ಲಿ ಅಗಾಧವಾದ ಸಂಪನ್ಮೂಲವಿದೆ. ಸ್ವ ಉದ್ಯೋಗ, ಕೃಷಿಗೆ ಪೂರಕವಾದ ಅವಕಾಶಗಳಿವೆ. ಅದನ್ನು ಸಮರ್ಪಕವಾಗಿ ಬಳಸಿಕೊಂಡು ಸ್ವಾವಲಂಬನೆ ಸಾಧಿಸುವುದು ನಮ್ಮ ಆದ್ಯತೆ ಆಗಬೇಕು. ಆ ನಿಟ್ಟಿನಲ್ಲಿ ಧ.ಗ್ರಾ. ಯೋಜನೆ ಸದಾ ಸಹಕಾರ ನೀಡುತ್ತದೆ ಎಂದು ಶ್ರೀ ಕ್ಷೇ.ಧ.ಗ್ರಾ ಯೋಜನೆಯ ಕರಾವಳಿ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ನಿರ್ದೇಶಕರಾದ ಮಹಾವೀರ ಆಜ್ರಿ ಅಭಿಪ್ರಾಯಪಟ್ಟರು.

    Click Here

    Call us

    Click Here

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಂಡ್ಸೆ ವಲಯದ ಮಾರ್ಗ ದರ್ಶನದಲ್ಲಿ ವಂಡ್ಸೆ ತಿರುಮಲ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಎದುರುಗಡೆ ನಡೆದ ವಂಡ್ಸೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ 10ನೇ ವರ್ಷದ ವಾರ್ಷಿಕೋತ್ಸವ ವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

    ಧ.ಗ್ರಾ. ಯೋಜನೆಯ ಮೂಲ ಆಶಯ ಪ್ರಗತಿ. ಆಸಕ್ತಿಯಿಂದ ಕೆಲಸ ಮಾಡಿದರೆ ಸಾಧನೆ ಸಾಧ್ಯವಿದೆ. ಸಾಧಿಸುವ ಮನೋಭಾವ ನಮ್ಮಲ್ಲಿ ಜಾಗೃತವಾ ಗಬೇಕು ಎಂದರು.

    ವಂಡ್ಸೆ ಒಕ್ಕೂಟದ ಅಧ್ಯಕ್ಷೆ ಜಯಂತಿ ಪಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಂಡ್ಸೆ ಗ್ರಾಮ ಪಂಚಾಯತ್‌ ಅಧ್ಯಕ್ಷ ಉದಯಕುಮಾರ್‌ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಅಧ್ಯಕ್ಷೆ ಸುಪ್ರೀತಾ ಶೆಟ್ಟಿ, ಕೋಟೇಶ್ವರ ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷ ಸುಬ್ರಹ್ಮಣ್ಯ ಶೆಟ್ಟಿ, ವಂಡ್ಸೆ ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷ ಸೋಮಶೇಖರ ಶೆಟ್ಟಿ, ಸದಸ್ಯ ರಾದ ತ್ಯಾಂಪಣ್ಣ ಶೆಟ್ಟಿ, ತಿರುಮಲ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ವಿ.ಕೆ. ಶಿವರಾಮ ಶೆಟ್ಟಿ, ಭಾರತ್‌ ಸಂಚಾರ್‌ ನಿಗಮ್‌ ಇದರ ನಿವೃತ್ತ ಅಭಿಯಂತರ ಶ್ರೀಧರ ಶೆಟ್ಟಿ ಕೊರಾಡಿಮನೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಶಶಿಧರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

    ಧ.ಗ್ರಾ. ಯೋಜನೆಯ ತಾಲೂಕು ಯೋಜನಾಧಿಧಿಕಾರಿ ಅಮರಪ್ರಸಾದ್‌ ಶೆಟ್ಟಿ, ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಶ್ರೀ ಚಕ್ರ ಯುವಕ ಮಂಡಲದ ಅಧ್ಯಕ್ಷ ಕರುಣಾಕರ ಶೆಟ್ಟಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಎಲ್‌.ಎನ್‌. ಆಚಾರ್ಯ, ಎಚ್‌.ಎಂ.ಸಿ. ಫ್ರೆಂಡ್ಸ್‌ ಅಧ್ಯಕ್ಷ ರಫೀಕ್‌ ಸಾಹೇಬ್‌, ಸಿ.ಎ. ಬ್ಯಾಂಕ್‌ ಮಾಜಿ ನಿರ್ದೇಶಕ ಗೋಪಾಲ ಶೆಟ್ಟಿ ಕೊಳ್ತಾ, ಶ್ರೀ ಮಹಾಗಣಪತಿ ರಿûಾ ಚಾಲಕ, ಮಾಲಕರ ಸಂಘದ ಅಧ್ಯಕ್ಷ ಆನಂದ ನಾಯ್ಕ ಸೀತಾ-ಗೀತಾ, ವಲಯ ಮೇಲ್ವಿಚಾರಕ ನಾಗರಾಜ, ಸೇವಾ ಪ್ರತಿ ನಿಧಿ ಲಾಲಿ ಸೋಜನ್‌ ಮೊದಲಾದವರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಈ ಸಂದರ್ಭದಲ್ಲಿ ಒಕ್ಕೂಟದ ಮಾಜಿ ಅಧ್ಯಕ್ಷರಾದ ಸುರೇಶ ಗಾಣಿಗ, ವಾಸು ಜಿ.ನಾಯ್ಕ, ಆನಂದ ನಾಯ್ಕ, ಗಿರೀಶ್‌ ನಾಯ್ಕ, ಶಂಕರ ಆಚಾರ್ಯ ಹಾಗೂ ಹಾಲಿ ಅಧ್ಯಕ್ಷರಾದ ಜಯಂತಿ ಪಿ. ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

    ರಾಘವೇಂದ್ರ ಸ್ವಾಗತಿಸಿದರು. ವಂಡ್ಸೆ ವಲಯ ಮೇಲ್ವಿಚಾರಕ ನಾಗರಾಜ ವರದಿ ಮಂಡಿಸಿದರು. ಮಾಜಿ ಅಧ್ಯಕ್ಷ ವಾಸು ಜಿ. ನಾಯ್ಕ ಕಾರ್ಯಕ್ರಮ ನಿರ್ವಹಿಸಿ, ಸಲ್ಮಾ ವಂದಿಸಿದರು. ಅನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    fourteen + six =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.