Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಿಸಾರ್ ಕಾವ್ಯದಲ್ಲಿ ಸಾಮಾಜಿಕ ಸಮನ್ವಯತೆಯ ಸೂತ್ರವಿದೆ: ಡಾ.ಪಾರ್ವತಿ ಐತಾಳ್
    ಊರ್ಮನೆ ಸಮಾಚಾರ

    ನಿಸಾರ್ ಕಾವ್ಯದಲ್ಲಿ ಸಾಮಾಜಿಕ ಸಮನ್ವಯತೆಯ ಸೂತ್ರವಿದೆ: ಡಾ.ಪಾರ್ವತಿ ಐತಾಳ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಸಾಮಾಜಿಕ ಬದುಕಿನ ಸಮನ್ವಯತೆಯ ಸೂತ್ರವನ್ನು ತಮ್ಮ ಕಾವ್ಯದ ಮೂಲಕ ಸಾಧಿಸಿ ತೋರಿಸಿದವರು ಕವಿ ನಿಸಾರ್ ಅಹಮ್ಮದ್ ಅವರು. ಜೀವನದಲ್ಲಿ ಕಾಣುವ ಒಳಿತು-ಕೆಡುಕುಗಳನ್ನು ತಮ್ಮದೇ ಆದ ಕಾವ್ಯಭಾಷೆಯ ಮೂಲP, ಮಾಂತ್ರಿಕ ಶಕ್ತಿಯುಳ್ಳ ಸುಂದರ ಪದಪುಂಜಗಳ ಮೂಲಕ, ಪ್ರಾಸಾನುಪ್ರಾಸಯುಕ್ತ ಪದವಿನ್ಯಾಸದ ಮೂಲಕ, ಹೊಸ ಹೊಸ ಪದಗಳನ್ನು ಟಂಕಿಸಿ ಕನ್ನಡ ಸಾಹಿತ್ಯಕ್ಕೆ ಕೊಡುವ ಮೂಲಕ ಒದಗಿಸಿ ಕೊಟ್ಟವರು ಎಂದು ಡಾ. ಪಾರ್ವತಿ ಜಿ.ಐತಾಳ ಹೇಳಿದರು.

    Click Here

    Call us

    Click Here

    ಅವರು ಹೈದರಾಬಾದಿನ ಕರ್ನಾಟಕ ಸಾಹಿತ್ಯ ಮಂದಿರದಲಿ ನಡೆದ ನಿಸಾರ್ ಅಹಮದ್-ಬದುಕು ಬರಹದ ಕುರಿತು ನಡೆದ ಒಂದು ದಿನದ ವಿಚಾರ ಸಂಕಿರಣzಲ್ಲಿ ’ನಿಸಾರ್ ಕಾವ್ಯದಲಿ ವ್ಯಕ್ತವಾಗುವ ಜೀವನ ದರ್ಶನ’ ಎಂಬ ವಿಷಯದ ಕುರಿತು ಮಾತನಾಡಿದರು.

    ಮನುಷ್ಯನ ಹುಟ್ಟಿನಿಂದ ಸಾವಿನವರೆಗೂ ಅವನ ಬದುಕು ಒಳಗೊಳ್ಳುವ ನೂರಾರು ಸನ್ನಿವೇಶಗಳನ್ನು ನೆಪವಾಗಿಸಿಕೊಂಡು ಅಲ್ಲಿ ಕಾಣುವ ಸೌಖ್ಯ ಸೌಂದರ್ಯಗಳಿಗೆ, ಲೋ-ದೋಷಗಳಿಗೆ ಪ್ರತಿಮೆ ರೂಪಕಗಳ ಮೂಲಕ ಸಮಾಂತರಗಳನ್ನು ಸೃಷ್ಟಿಸಿ ಜೀವನದ ಸಮಗ್ರ ದರ್ಶನವನ್ನು ನಿಸಾರರು ತಮ್ಮ ಕವಿತೆಗಳಲ್ಲಿ ಒಂದಿಲ್ಲೊಂದು ರೀತಿಯಲ್ಲಿ ನೆಯ್ದು ಕೊಟ್ಟಿದ್ದಾರೆ. ಪ್ರೀತಿ-ವಂಚನೆ, ಸ್ನೇಹ-ಅಸೂಯೆ, ಪ್ರಾಮಾಣಿಕತೆ-ಬೂಟಾಟಿಕೆ, ಶೋಷಣೆ-ಪ್ರೋತ್ಸಾಹ, ನ್ಯಾಯ-ಅನ್ಯಾಯಗಳ ದ್ವಂದ್ವಗಳು ಅವರ ಕವಿತೆಗಳಲ್ಲಿ ಸದಾ ಅನುರಣಿಸುತ್ತದೆ. ವೋದಯಮತ್ತು ನವ್ಯ ಶೈಲಿಗಳಲ್ಲಿ ಕಾವ್ಯ ನಿರ್ಮಿತಿ ನಡೆಸಿದ ನಿಸಾgರು ತಮ್ಮ ಸುತ್ತಲ ಜಗತ್ತನ್ನು ಬಗೆದು ಶೋಧಿಸಿ, ಒಂದು ಬೃಹತ್ ಕಾವ್ಯ ಲೋಕವನ್ನು ಸೃಷ್ಟಿಸಿದ್ದಾರೆ. ಅವರ ಕಾವ್ಯದಲ್ಲಿ ವ್ಯಕ್ತವಾಗುವ ಜೀವನ ದರ್ಶನದ ಹರಹು ಬಹಳ ದೊಡ್ಡದು ಎಂದರು.

    ಸಾಹಿತಿ ಡಾ.ಸಂಧ್ಯಾ ರೆಡ್ಡಿ ಮತ್ತು ಬೈರಮಂಗಲ ರಾಮೇಗೌಡರು ಉಪಸ್ಥಿತರಿದ್ದು ನಿಸಾರ್ ಕಾವ್ಯದ ವಿಭಿನ್ನ ಮುಖಗಳ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತ ಪಡಿಸಿದರು. ಕನ್ನಡದ ಹಿರಿಯ ಕವಿ ಪ್ರೊ. ಕೆ.ವಿ.ತಿರುಮಲೇಶ್ ಗೋಷ್ಠಿಯ ಅಧ್ಯಕ್ಷ ಸ್ಥಾನದಿಂದ ನಿಸಾರ್ ಜೊತೆಗಿನ ತಮ್ಮ ಅನುಭವಗಳನ್ನು ಹಂಚಿಕೊಂಡರು. ಉಪನ್ಯಾಸ ನೀಡಿದವರಿಗೆ ಸಂಘಟನೆಯ ಪದಾಧಿಕಾರಿಗಳು ಒಟ್ಟುಸೇರಿ ಶಾಲು ಫಲಕಗಳನ್ನು ನೀಡಿ ಸಮ್ಮಾನಿಸಿದರು.ಕರ್ನಾಟಕ ಸಾಹಿತ್ಯ ಮಂದಿರದ ಅಧ್ಯಕ್ಷರಾದ ವಿಟ್ಠಲ್ ಜೋಷಿಯವರು ವಂದಿಸಸಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    fourteen − twelve =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.