Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ತಾಲೂಕು ಆಟೋರಿಕ್ಷಾ ಮತ್ತು ವಾಹನ ಚಾಲಕರ ಸಂಘ 41ನೇ ವಾರ್ಷಿಕ ಮಹಾಸಭೆ
    ಕುಂದಾಪುರ

    ಕುಂದಾಪುರ ತಾಲೂಕು ಆಟೋರಿಕ್ಷಾ ಮತ್ತು ವಾಹನ ಚಾಲಕರ ಸಂಘ 41ನೇ ವಾರ್ಷಿಕ ಮಹಾಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕುಂದಾಪುರ ತಾಲೂಕು ಆಟೋರಿಕ್ಷಾ ಮತ್ತು ವಾಹನ ಚಾಲಕರ ಸಂಘ (ಸಿಐಟಿಯು) ಇದರ ೪೧ನೇ ವಾರ್ಷಿಕ ಮಹಾಸಭೆಯು ದಿನಾಂಕ ೨೩-೦೭-೨೦೧೭ ರಂದು ಹಂಚು ಕಾರ್ಮಿಕರ ಭವನದಲ್ಲಿ ನಡೆಸಲಾಯಿತು.

    Click Here

    Call us

    Click Here

    ಮಹಾಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಕೆ. ಲಕ್ಷ್ಮಣ ಬರೆಕಟ್ಟುರವರು ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಿಐಟಿಯುನ ರಾಜ್ಯ ಸಮಿತಿ ಅಧ್ಯಕ್ಷರಾದ ಕಾಮ್ರೆಡ್ ಎಸ್. ವರಲಕ್ಷ್ಮೀಯವರು “ಕೇಂದ್ರ ಸರಕಾರವು ತಂದಿರುವ ರಸ್ತೆ ಸುರಕ್ಷತಾ ಮಸೂದೆಯಲ್ಲಿ ಸುರಕ್ಷತೆಗಿಂತ ಚಾಲಕರನ್ನು ಶಿಕ್ಷಿಸುವ ಕಾಯಿದೆಗಳು ಅಡಕವಾಗಿವೆಯೆಂದು, ಸ್ವಂತ ಹಣದಿಂದ ಆಟೋ ತೆಗೆದುಕೊಂಡು ಸ್ವಂತ ಉದ್ಯೋಗ ಮಾಡುವ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಆಟೋ ಚಾಲಕರಿಗೆ ಸರಕಾರದಿಂದ ಯಾವುದೇ ಸೌಲಭ್ಯವನ್ನು ನೀಡದೆ ಇಂದು ಬೇರೆ ಬೇರೆ ತೆರಿಗೆಗಳನ್ನು ವಿಧಿಸಿ ಅವರ ಬದುಕಿನಲ್ಲಿ ಅತಂತ್ರ ಪರಿಸ್ಥಿತಿಯನ್ನು ತಂದಿಟ್ಟಿದೆ. ಇವತ್ತು ೪೦ ವರ್ಷ ಮೇಲ್ಪಟ್ಟ ಚಾಲಕರು ಅಧಿಕ ಸಂಖ್ಯೆಯಲ್ಲಿದ್ದು ಅಂತವರಿಗೆ ಬ್ಯಾಡ್ಜ್ ನೀಡಲು ಸರಕಾರವು ೧೦ನೇ ತರಗತಿ ತೇರ್ಗಡೆ ಹೊಂದಿರುವ ಪ್ರಮಾಣಪತ್ರ ಕೇಳುತ್ತಿರುವುದು ಸರಿಯಾದ ಕ್ರಮವಲ್ಲ. ಅಂತಹ ಚಾಲಕರು ಈ ಸಮಯದಲ್ಲಿ ಪರೀಕ್ಷೆ ಬರೆದು ಪ್ರಮಾಣಪತ್ರ ಪಡೆಯುವುದು ಕಷ್ಟಸಾಧ್ಯ. ಇಂತಹ ಕಾನೂನನ್ನು ಹಿಂಪಡೆಯಬೇಕು ಮತ್ತು ಕಟ್ಟಡ ಕಾರ್ಮಿಕರಿಗೆ ಸಿಗುವಂತಹ ಸೌಲಭ್ಯಗಳು ರಾತ್ರಿ ಹಗಲೆನ್ನದೆ ದುಡಿಯುವ ಆಟೋಚಾಲಕರಿಗೆ ಸಿಗಬೇಕು. ಇಂದಿನ ಕಾಲದಲ್ಲಿ ಒಬ್ಬ ಆಟೋಚಾಲಕ ತಾನು ದುಡಿದು ಬಂದ ಹಣದಲ್ಲಿ ಮಕ್ಕಳ ವಿದ್ಯಾಭ್ಯಾಸ, ಆರೋಗ್ಯ, ಮನೆ ಅಡುಗೆ ಸಾಮಾಗ್ರಿಗಳನ್ನು ತಂದುಕೊಂಡು ಜೀವನ ನಡೆಸುವುದು ಕಷ್ಟಕರವಾಗಿದೆ. ಸರಕಾರವು ಆಟೋಚಾಲಕರಿಗೆ ಪಿ.ಎಫ್., ಇ.ಎಸ್.ಐ. ಮುಂತಾದ ಸೌಲಭ್ಗಳನ್ನು ನೀಡಬೇಕು” ಎಂದು ನುಡಿದರು.

    ಸಭೆಯಲ್ಲಿ ಸಿಐಟಿಯುನ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ. ಶಂಕರ, ಕುಂದಾಪುರ ತಾಲೂಕು ಸಮಿತಿಯ ಅಧ್ಯಕ್ಷರಾದ ಎಚ್. ನರಸಿಂಹ, ಸಂಘದ ಗೌರವಾಧ್ಯಕ್ಷರಾದ ಎಚ್. ಕರುಣಾಕರ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಸಂಘದ ವಾರ್ಷಿಕ ಚಟುವಟಿಕೆಯ ವರದಿಯನ್ನು ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ ಮಂಡಿಸಿದರು. ಕೋಶಾಧಿಕಾರಿ ಸಂತೋಷ ಕಲ್ಲಾಗರ ಲೆಕ್ಕಪತ್ರವನ್ನು ನೀಡಿದರು.

    ನಂತರ ನಡೆದ ನೂತನ ಪದಾಧಿಕಾರಿಗಳ ಆಯ್ಕೆಯಲ್ಲಿ ಅಧ್ಯಕ್ಷರಾಗಿ ಕೆ. ಲಕ್ಷ್ಮಣ ಬರೆಕಟ್ಟು, ಗೌರವಾಧ್ಯಕ್ಷರಾಗಿ ಎಚ್. ಕರುಣಾಕರ, ಪ್ರಧಾನ ಕಾರ್ಯದರ್ಶಿಯಾಗಿ ರಮೇಶ, ಸಂಘಟನಾ ಕಾರ್ಯದರ್ಶಿಯಾಗಿ ರಾಜು ದೇವಾಡಿಗ, ಕೋಶಾಧಿಕಾರಿಯಾಗಿ ಸಂತೋಷ ಕಲ್ಲಾಗಾರ, ಸಂಘದ ಸಲಹೆಗಾರರಾಗಿ ವಿ. ಚಂದ್ರರವರು ಆಯ್ಕೆಗೊಂಡರು. ರಾಜು ದೇವಾಡಿಗರವರು ಸ್ವಾಗತಿಸಿ, ರವಿ ವಿ. ಎಮ್. ಧನ್ಯವಾದ ಸಮರ್ಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    4 × 2 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.