Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » 40 ಸಾವಿರ ಮಂದಿಯಿಂದ ಆಳ್ವಾಸ್‍ನಲ್ಲಿ 71ನೇ ಸ್ವಾತಂತ್ರ್ಯ ಸಂಭ್ರಮ
    ಕರಾವಳಿ

    40 ಸಾವಿರ ಮಂದಿಯಿಂದ ಆಳ್ವಾಸ್‍ನಲ್ಲಿ 71ನೇ ಸ್ವಾತಂತ್ರ್ಯ ಸಂಭ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ : ಸತ್ಯ ಪ್ರಾಮಾಣಿಕತೆಗಳು ಎಂದಿಗೂ ತಮ್ಮ ಬೆಲೆ ಕಳೆದುಕೊಳ್ಳುವುದಿಲ್ಲ. ಅವು ಹೆಚ್ಚು ಮೌಲ್ಯಯುತ ಸಂಗತಿಗಳಾಗಿವೆ. ಎಂದಿಗೂ ಸತ್ಯವೇ ಜಯಿಸುತ್ತದೆ. ವಿದ್ಯಾರ್ಥಿಗಳು ತಮ್ಮ ವೈಯುಕ್ತಿಕ ಜೀವನದಲ್ಲಿ ಅಳವಡಿಸಿಕೊಳ್ಳಬಹುದಾದ ಗರಿಷ್ಠ ಮೌಲ್ಯವೆಂದರೆ ಅದು ಸತ್ಯನಿಷ್ಠೆಯಾಗಿದೆ. ನಮ್ಮ ದೇಶ ನಮಗೆ ಪೂಜನೀಯ, ಮಾತೃ ಸಮಾನ. ಸರ್ವ ಜನಾಂಗಕ್ಕೂ ಇಲ್ಲಿ ಬಾಳ್ವೆಗೆ ಸಮಾನ ಹಕ್ಕುಗಳಿವೆ. ಸಂವಿಧಾನವು ಮೂಲಭೂತವಾಗಿ ನಾಲ್ಕು ಪ್ರಧಾನ ಸ್ಥಂಭಗಳನ್ನು ಹೊಂದಿದ್ದು, ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ ಮತ್ತು ಪತ್ರಿಕಾರಂಗಗಳು ದೇಶದ ಅಭಿವೃದ್ಧಿಯಲ್ಲಿ ತಮ್ಮದೇ ಪ್ರಾಮುಖ್ಯತೆಯನ್ನು ಹೊಂದಿವೆ. ವಿದ್ಯಾರ್ಥಿಗಳು ದೇಶ ಹಾಗೂ ಸಮಾಜದಿಂದ ಪಡೆದುಕೊಂಡದ್ದನ್ನು ಮತ್ತೆ ಸಮಾಜಕ್ಕಾಗಿ ಧಾರೆಯೆರೆಯಬೇಕು ಹಾಗೂ ಇನ್ನೊಬ್ಬರೊಂದಿಗೆ ಹಂಚಿಕೊಳ್ಳಬೇಕು ಎಂದು ನಿಟ್ಟೆ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಎನ್. ವಿನಯ ಹೆಗ್ಡೆ ಹೇಳಿದರು.

    Click Here

    Call us

    Click Here

    ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಪುತ್ತಿಗೆ ಪದವಿನಲ್ಲಿರುವ ಶ್ರೀಮತಿ ವನಜಾಕ್ಷಿ ಕೆ.ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ 71ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ವಿದ್ಯೆಯೆಂಬುದು ಕಠಿಣ ಪರಿಶ್ರಮದಿಂದ ಸಾಧಿಸಬಹುದಾದ ವ್ಯಕ್ತಿಯೊಬ್ಬನ ಜೀವನದ ಬಹುದೊಡ್ಡ ಯಶಸ್ಸು. ಶಿಕ್ಷಿತ ವರ್ಗದಿಂದ ದೇಶದ ಸಾಮಾಜಿಕ ವ್ಯವಸ್ಥೆಯಲ್ಲಿ ಸದಭಿರುಚಿಯ ಬೆಳವಣಿಗೆಯನ್ನು ನಿರೀಕ್ಷಿಸಬಹುದು. ವಿದ್ಯಾರ್ಥಿಗಳು ಒಳ್ಳೆಯ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು. ದೇಶದ ಸ್ವಾತಂತ್ರ್ಯಕ್ಕಾಗಿ ನಡೆದ ಸಂಗ್ರಾಮದ ಉದ್ದೇಶಗಳನ್ನು ನೈಜ ದಿಶೆಯಲ್ಲಿ ಸಾರ್ಥಕಗೊಳಿಸುತ್ತಾ, ದೇಶ ಭಕ್ತಿಯನ್ನು ನಾವು ಅಳವಡಿಸಿಕೊಳ್ಳುವ ಜೊತೆಗೆ ಮುಂದಿನ ಜನಾಂಗಕ್ಕೆ ಅದರ ಮಹತ್ವವನ್ನು ತಿಳಿಸಿಕೊಡಬೇಕು ಎಂದರು.

    ಯುಪಿಎಸ್‍ಸಿ ಪರೀಕ್ಷೆಯಲ್ಲಿ ಮೊದಲ ರ್ಯಾಂಕ್ ಪಡೆದ ನಂದಿನಿ ಕೆ.ಆರ್, ಪಿಯುಸಿ ವಾಣಿಜ್ಯ ವಿಭಾಗದ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ವಿ. ಸ್ಪಂದನ, ಸಿಎ-ಸಿಪಿಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ, ದೇಶಕ್ಕೆ ದ್ವಿತೀಯ ಸ್ಥಾನ ಪಡೆದ ತವಿಷಿ ದೇಚಮ್ಮ ಅವರನ್ನು ಈ ಸಂದರ್ಭ ಸನ್ಮಾನಿಸಲಾಯಿತು.

    ಯುಪಿಎಸ್‍ಸಿ ಪರೀಕ್ಷೆಯಲ್ಲಿ ದೇಶಕ್ಕೆ ಮೊದಲ ರ್ಯಾಂಕ್ ಪಡೆದ ನಂದಿನಿ ಕೆ.ಆರ್. ಸಂಸ್ಥೆಯ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ ದೀರ್ಘ ಕಾಲದ ಸ್ವಾತಂತ್ರ್ಯ ಹೋರಾಟಗಾರರ ಹೋರಾಟದ ಫಲವಾಗಿ ನಾವು ಇಂದು ಸಂಭ್ರಮದಿಂದ ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ನಾವು ಎಷ್ಟೇ ಸಾಧನೆಗಳನ್ನು ಮಾಡಿದರೂ ಅದು ಸಮಾಜದಿಂದ ಪಡೆದ ಸಾಲವಾಗಿರುತ್ತದೆ. ಅದನ್ನು ಹಿಂತಿರುಗಿಸುವುದು ನಮ್ಮ ಕರ್ತವ್ಯವೆಂದು ಭಾವಿಸಬೇಕು. ವಿದ್ಯಾರ್ಥಿಗಳು ಸಮಾಜದ ಅಮೂಲ್ಯ ಸ್ವತ್ತುಗಳಾಗುವತ್ತ ಗಮನ ಹರಿಸಬೇಕು ಎಂದ ಅವರು ದೇಶ ವಿಭಜನೆಯ ಸಂದರ್ಭ ಸಮಾಜದಲ್ಲಾಗುತ್ತಿದ್ದ ಬದಲಾವಣೆಯ ಕುರಿತು ರವೀಂದ್ರನಾಥ್ ಠಾಗೋರರು ಕವನದ ಮೂಲಕ ನೀಡಿದ ಪ್ರತಿಕ್ರಿಯನ್ನು ಓದಿ ಹೇಳಿದರು. ದೇಶದ ವಿವಿದೆಡೆಗಳಲ್ಲಿ ಸನ್ಮಾನಗಳನ್ನು ತಾನು ಸ್ವೀಕರಿಸಿದ್ದು, ಆದರೆ ನಾನು ಕಲಿತ ಕಾಲೇಜಿನಲ್ಲಿ ನನಗೆ ನೀಡಲಾದ ಈ ಗೌರವವು ನನ್ನ ಸಂತಸ ತಂದಿದೆ ಎಂದರು.

    ಮೂಡುಬಿದಿರೆ ಶಾಸಕ ಕೆ.ಅಭಯಚಂದ್ರ ಜೈನ್, ಅಬುದಾಬಿಯ ಎನ್‍ಎಂಸಿ, ಯುಎಇ ಎಕ್ಸ್‍ಚೆಂಜ್ ಸಂಸ್ಥೆಗಳ ಸಿಇಒ ಡಾ.ಬಿ.ಆರ್ ಶೆಟ್ಟಿ, ಮಾಜಿ ಸಚಿವ ಅಮರನಾಥ ಶೆಟ್ಟಿ, ಜಯಶ್ರೀ ಅಮರನಾಥ ಶೆಟ್ಟಿ ಮುಖ್ಯ ಅತಿಥಿಯಾಗಿದ್ದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ, ವಿನಯ್ ಆಳ್ವ, ಆಳ್ವಾಸ್ ಸಂಸ್ಥೆಯ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿಗಳು ಭಾಗವಹಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 26 ಸಾವಿರ ವಿದ್ಯಾರ್ಥಿಗಳು, 5 ಸಾವಿರದಷ್ಟು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಪೋಷಕರು, ಸಾರ್ವಜನಿಕರು ಸೇರಿದಂತೆ 40 ಸಾವಿರ ಮಂದಿ ಪಾಲ್ಗೊಂಡರು.

    Click here

    Click here

    Click here

    Click Here

    Call us

    Call us

      

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    nine + 10 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.