Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಕ್ವಾಡಿ ಗುರುಕುಲದಲ್ಲಿ ವಿಜ್ಞಾನ ಮಾದರಿ ವಸ್ತು ಪ್ರದರ್ಶನ
    ಕ್ಯಾಂಪಸ್ ಕಾರ್ನರ್

    ವಕ್ವಾಡಿ ಗುರುಕುಲದಲ್ಲಿ ವಿಜ್ಞಾನ ಮಾದರಿ ವಸ್ತು ಪ್ರದರ್ಶನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ತಾಲೂಕಿನ ವಕ್ವಾಡಿ ಗುರುಕುಲ ಪಬ್ಲಿಕ್ ಶಾಲೆಯಲ್ಲಿ ವಿಜ್ಞಾನ ಮಾದರಿ ವಸ್ತು ಪ್ರದರ್ಶನ ಕಾರ್ಯಕ್ರಮದ ಜರುಗಿತು.

    Click Here

    Call us

    Click Here

    ಉಪನ್ಯಾಸರ ಶ್ರೀನಾಥ್ ರಾವ್ ಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಬೆಳಕೆಂಬ ಜ್ಞಾನದಿಂದ ಕತ್ತಲೆಂಬ ಅಜ್ಞಾನವನ್ನು ತೊಲಗಿಸಿ ಮುಂದುವರಿಯಬೇಕು. ಈ ವಿದ್ಯಾರ್ಥಿಯ ಜೀವನ ಒತ್ತಡದಿಂದ ಕೂಡಿಲ್ಲ. ಈ ಸಮಯವೇ ಜ್ಞಾನವನ್ನು ಪಡೆಯಲಿಕ್ಕೆ ಸೂಕ್ತವಾಗಿದೆ. ಗುರುಕುಲದಲ್ಲಿ 166 ವಿಜ್ಞಾನ ಮಾದರಿ ಅಚ್ಚುಕಟ್ಟಾಗಿದ್ದು, ಮಕ್ಕಳು ವಿವರಿಸಿದ ರೀತಿ ತುಂಬಾ ಚೆನ್ನಾಗಿತ್ತು. ನನಗೆ ತುಂಬಾ ಸಂತೋಷವಾಯಿತು ಎಂದು ತಿಳಿಸಿದರು.

    ಜ್ಞಾನ, ಕೌಶಲ್ಯ ಎರಡರಿಂದ ಹೊಸತನ ಬರುತ್ತದೆ. ಈ ಹೊಸತನದ ಸಂಕೇತವೇ ಪ್ರಗತಿ. ಅಲ್ಲದೇ ಗುಣಮಟ್ಟದ ಶಿಕ್ಷಣ ದೇಶವನ್ನು ಬದಲಾಯಿಸಬಲ್ಲದು ಇಂತಹ ಸಂದರ್ಭದಲ್ಲಿ ಈ ಮಕ್ಕಳಿಗೆ ಸಂಶೋಧನೆಯ ವೇದಿಕೆ ಅತ್ಯವಶ್ಯಕ. ಇದರಿಂದ ಮಕ್ಕಳು ಸಂಕುಚಿತ ಮನೋಭಾವನೆಯನ್ನು ಬಿಟ್ಟು ಹೊರಬರಲು ಸಾಧ್ಯ. ಇಂತಹ ಕೆಲಸವನ್ನು ಗುರುಕುಲ ಪಬ್ಲಿಕ್ ಶಾಲೆ ನಿರ್ವಹಿಸಿದೆ. ಹಾಗೆಯೇ ಗುರುವಿಲ್ಲದೇ ಯಾವ ಕೆಲಸವು ಸಾಧ್ಯವಿಲ್ಲ ಈ ಗುರುಕುಲದಲ್ಲಿ ಗುರುವಿನ ಸಹಾಯದಿಂದ ವಿಜ್ಞಾನದ ಪ್ರದರ್ಶನವಾಗುತ್ತಿದೆ. ಎಂಬುವುದು ತುಂಬಾ ಸಂತೋಷವಾಗಿದೆ ಎಂದು ನುಡಿದರು.

    ಗುರುಕುಲ ಪಬ್ಲಿಕ್ ಶಾಲಾ ಪ್ರಾಂಶುಪಾಲರಾದ ಸಾಯಿಜು. ಕೆ. ಆರ್ ನಾಯರ್ ಮಾತನಾಡಿ ವಿದ್ಯಾರ್ಥಿಗಳ ಶ್ರಮಕ್ಕೆ ತುಂಬಾ ಸಂತೋಷವಾಗುತ್ತಿದೆ, ಎಂದು ವಿದ್ಯಾರ್ಥಿಗಳ ಶ್ರಮವನ್ನು ಶ್ಲಾಘಿಸಿದರು.

    ಅಧ್ಯಕ್ಷತೆಯನ್ನು ವಹಿಸಿದ ಜಂಟಿ ಕಾರ್ಯನಿರ್ವಹಕರಾದ ಸುಭಾಶ್ಚಂದ್ರ ಶೆಟ್ಟಿ.ಕೆ ರವರು ಮಾತನಾಡಿ, ಮಕ್ಕಳ ಶ್ರಮ ಶ್ಲಾಘನೀಯವಾದದ್ದು. ಇದರಿಂದ ನಾವು ಮಕ್ಕಳ ಜೊತೆಗೆ ಪ್ರೇರಿಪಿತರಾಗಿದ್ದೇವೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ವಿಜ್ಞಾನ ಪ್ರದರ್ಶನ ಏರ್ಪಡಿಸಲಾಗುವುದು ಎಂದು ನುಡಿದರು. ನಂತರ ಮುಖ್ಯ ಅತಿಥಿಗಳಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಮತ್ತೋರ್ವ ಜಂಟಿ ಕಾರ್ಯನಿರ್ವಹಕರಾದ ಅನುಪಮ ಎಸ್. ಶೆಟ್ಟಿ ಉಪಸ್ಥಿತರಿದ್ದರು. ಶಿಕ್ಷಕಿಯರಾದ ನಾಗರತ್ನರವರು ಸ್ವಾಗತಿಸಿದರು. ಬಬಿತಾರವರು ವಂದಿಸಿದರು.

    Click here

    Click here

    Click here

    Call us

    Call us

    ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿಕಾ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ರಸಾಯನ ಶಾಸ್ತ್ರ, ಜೀವಶಾಸ್ತ್ರ, ಭೌತಶಾಸ್ತ್ರ ಈ ಮೂರು ರೀತಿಯ ವಿಜ್ಞಾನ ಮಾದರಿಗಳ ಅತ್ಯುತ್ತಮ ಗುಂಪುಗಳಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನ ವಿತರಿಸಿ, ಶಾಲಾ ಪ್ರಾಂಶುಪಾಲರು ಶುಭಾಶಯವನ್ನು ಕೋರಿದರು. ಈ ಕಾರ್ಯಕ್ರಮ ವಿಕ್ಷೀಸಲು ಶಾಲೆಯ ಪಾಲಕರಲ್ಲದೇ, ಸುತ್ತ-ಮುತ್ತಲಿನ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಆಗಮಿಸಿ ವಿಜ್ಞಾನ ಪ್ರದರ್ಶನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇವಲ್ಲದೇ ವಿದ್ಯಾರ್ಥಿಗಳು ಸ್ವತ: ತಯಾರಿಸಿದ ಕರಕುಶಲ ಪ್ರದರ್ಶನ ಮತ್ತು ಸಂಗ್ರಹಿಸಿದ ಅತೀ ವಿಶಿಷ್ಠ ಮತ್ತು ವಿರಳವಾದ ನಾಣ್ಯ ಮತ್ತು ನೋಟುಗಳ ಪ್ರದರ್ಶನ ಎಲ್ಲರ ಗಮನವನ್ನು ಸೆಳೆಯಿತು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    06/12/2025

    ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    06/12/2025

    ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d