Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಅರಸಿನ-ಕುಂಕುಮ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಅರಸಿನ-ಕುಂಕುಮ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಸಮಾಜದಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾಗಿದ್ದು, ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಮಹಿಳೆಯೂ ಕೂಡಾ ಸರಿಸಮಾನವಾಗಿ ಕುಟುಂಬ ನಿರ್ವಹಣೆ ಮಾಡುತ್ತಿರುವುದು ಕಾಣಬಹುದಾಗಿದೆ ಎಂದು ನಿವೃತ್ತ ಮುಖ್ಯಶಿಕ್ಷಕಿ ಶಾರದಾ ಹೇಳಿದರು.

    Click Here

    Call us

    Click Here

    ಬೈಂದೂರು ರೋಟರಿ ಸಭಾಭವನದಲ್ಲಿ ಬೈಂದೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ನಡೆದ ಅರಸಿನ-ಕುಂಕುಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿರಿಯರಿಂದ ಬಂದಿರುವ ಸಂಪ್ರದಾಯವೂ ಕೂಡಾ ವಿಜ್ಞಾನವೇ ಆಗಿದೆ. ಧಾರ್ಮಿಕ ಸಂಕೇತಗಳು ಒಂದು ಧರ್ಮವನ್ನು ಉಳಿಸಿ, ಬೆಳೆಸುವಲ್ಲಿ ತಮ್ಮದೇ ಆದ ಪಾತ್ರವಹಿಸುತ್ತದೆ. ಅರಶಿನ, ಕುಂಕುಮ, ಕರೀಮಣಿ, ಮೂಗಿನ ನತ್ತು ಹಾಗೂ ಕಾಲುಂಗುರ ಇವುಗಳು ಗೃಹಿಣಿಯರ ಸೌಂದರ್ಯವರ್ಧಕ ಜತೆಗೆ ಮುತ್ತೈದೆ ಸಂಕೇತವಾಗಿದೆ. ಆದರೆ ಪ್ರಸ್ತುತ ಕಾಲಘಟ್ಟದಲ್ಲಿ ಭಾರತೀಯ ನಾರಿ ನಡೆದು ಬಂದ ದಾರಿ ಕಳೆದು ಹೋಗುತ್ತಿದೆ. ನಮ್ಮ ಧಾರ್ಮಿಕ ಅಥವಾ ಇನ್ನಿತರ ಕಾರ್ಯಕ್ರಮಗಳಲ್ಲಿ ನಮ್ಮಲ್ಲಿನ ಕೆಲವರು ಧರಿಸುವ ಬಟ್ಟೆಗಳ ವಿನ್ಯಾಸಗಳು, ಆಹಾರ ಪದ್ದತಿಯೂ ಬದಲಾಗುತ್ತಿದೆ. ಆಧುನಿಕ ಭರಾಟೆಯಲ್ಲಿ ಅರಶಿನ, ಕುಂಕುಮ ಮಾಯವಾಗಿ ಆ ಸ್ಥಳವನ್ನು ಸ್ಟಿಕ್ಕರ್‌ಗಳು ಆವರಿಸಿಕೊಂಡಿದೆ. ಪಾಶ್ಚಾತ್ಯ ಸಂಸ್ಕೃತಿಗೆ ನಮ್ಮ ಮಕ್ಕಳು ಒಗ್ಗದೆ ನಮ್ಮ ಹಿಂದಿನ ತಪಸ್ವಿಗಳು, ಜ್ಞಾನಿಗಳು ಕೊಡುಗೆಯಾಗಿ ನೀಡಿದ ಶ್ರೇಷ್ಠ ಭಾರತೀಯ ಸಂಸ್ಕೃತಿಯಂತೆ ವಿವಿಧ ಆಚರಣೆಗಳನ್ನು ಮಾಡಿದರೆ ನಮ್ಮ ಹಬ್ಬ ಹರಿದಿನಗಳಿಗೆ, ಸಂಪ್ರದಾಯಗಳಿಗೆ ಹೆಚ್ಚಿನ ಮಹತ್ವ ದೊರೆಯುತ್ತದೆ. ಧಾವಂತದಲ್ಲಿಯೂ ಕೂಡಾ ಮಹಿಳೆಯರು ತಮ್ಮತನವನ್ನು ಬಿಡಬಾರದು ಎಂದರು.

    ಬೈಂದೂರು ಕಾಂಗ್ರೆಸ್ ಮಹಿಳಾ ಘಟಕ ಅಧ್ಯಕ್ಷೆ ಗೌರಿ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಕಾರ್ಯಕ್ರಮದ ಪ್ರಾಯೋಜಕರಾದ ಕಲಾವತಿ ನಾಗರಾಜ್ ಗಾಣಿಗ ದಂಪತಿಗಳನ್ನು ಗೌರವಿಸಲಾಯಿತು. ತಾಪಂ ಸದಸ್ಯರಾದ ಗ್ರೀಷ್ಮಾ ಭಿಡೆ, ಪ್ರಮೀಳಾ ದೇವಾಡಿಗ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮದನ್ ಕುಮಾರ್, ಕಾರ್ಯದರ್ಶಿ ಬಿ. ಎಂ. ನಾಗರಾಜ ಗಾಣಿಗ, ಜಿಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಇನ್ನರ್‌ವೀಲ್ ಕ್ಲಬ್ ಅಧ್ಯಕ್ಷೆ ಶಾಂತಿ ಪಿರೇರಾ, ವಂಡ್ಸೆ ಬ್ಲಾಕ್ ಅಧ್ಯಕ್ಷೆ ಲಲಿತಾ ಗಾಣಿಗ ಉಪಸ್ಥಿತರಿದ್ದರು. ಪಾರ್ವತಿ ಪ್ರಾರ್ಥಿಸಿದರು. ಸೂರ್ಯಕಾಂತಿ ಸ್ವಾಗತಿಸಿ, ಅಂಬಿಕಾ ಮಯ್ಯ ನಿರೂಪಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.