Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಿಪಿಐ(ಎಂ) ರಾಜಕೀಯ ಸಮಾವೇಶ
    Uncategorized

    ಸಿಪಿಐ(ಎಂ) ರಾಜಕೀಯ ಸಮಾವೇಶ

    Updated:15/10/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೈಂದೂರು ವಲಯ ಸಮತಿ ನೇತೃತ್ವದಲ್ಲಿ, ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಮಿಕ ಸಂಘಟನೆಗಳ ಸದಸ್ಯರ ರಾಜಕೀಯ ಸಮಾವೇಶವು ಬೈಂದೂರು ರೋಟರಿ ಭವನದಲ್ಲಿ ಜರಗಿತು.

    Click Here

    Call us

    Click Here

    ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ನಿತ್ಯಾನಂದ ಸ್ವಾಮಿ ರಾಜಕೀಯ ಸಮಾವೇಶ ಉದ್ಘಾಟಿಸಿ ಮಾತನಾಡುತ್ತ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಪ್ರಣಾಳಿಕೆಯಲ್ಲಿ ಹಾಗೂ ಮೋದಿಯವರ ಚುನಾವಣಾ ಪ್ರಚಾರ ಭಾಷಣದಲ್ಲಿ ಅಭಿವೃದ್ಧಿಯೇ ಬಿಜೆಪಿ ಮೂಲಮಂತ್ರ, ೬೦ ವರ್ಷದಲ್ಲಾಗದ ಅಭಿವೃದ್ಧಿ ಕೆಲಸ ಆರು ತಿಂಗಳಲ್ಲಿ ಸಾಧಿಸುತ್ತೇವೆ. ಎಲ್ಲಾ ಸಮಸ್ಯೆಗಳಿಗೆ ಬಿಜೆಪಿ ಪರಿಹಾರ ಅಚ್ಚೆದಿನ ಆನೆವಾಲೆ ಹೈ – ಒಳ್ಳೆಯ ದಿನಗಳು ಬರಲಿವೆ, ಅಧಿಕಾರಕ್ಕೆ ಬಂದ ೧೦೦ ದಿನಗಳಲ್ಲಿ ಬೆಲೆ ಏರಿಕೆ ತಡೆಯಾಡೆಯಲಾಗುತ್ತದೆ, ಬೃಷ್ಠಾಚಾರ ರಹಿತ ದೇಶ ಕಟ್ಟುತ್ತೇವೆ ಎಂದು ಮೋದಿ, ಅಮಿತ್‌ಷಾ ಹೇಳಿದರು. ನ ಕಾವೂಂಗ ನ ಕಾನೆ ದೂಂಗ ತಾನೂ ತಿನ್ನೊಲ್ಲ, ತಿನ್ನಲೂ ಬಿಡೋಲ್ಲ, ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಹೇಳಿ ಅಧಿಕಾರಕ್ಕೆ ಏರಿದ ನಂತರ ಸಬ್ ಕಾ ವಿನಾಸ್ ಕಾರ್ಪೋರೇಟ್ ವಿಕಾಸ್ ವಿದೇಶಿ ಕಂಪನಿ ವಿಕಾಸ್ ಆಗಿದೆ.

    ೨೦೧೪ ರ ಚುನಾವಣಾ ಪ್ರಚಾರದ ಅಬ್ಬರದ ಮತ್ತು ಬಣ್ಣ ಬಣ್ಣದ ಆಶ್ವಾಸನೆಯೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಂತು. ದೇಶದ ಯುವಜನಾಂಗ ನಿರುದ್ಯೋಗ ಹೋಗಲಾಡುತ್ತದೆ ಎಂಬ ಭೃಮೆಯಲ್ಲಿ ಮತ ಹಾಕಿದರು. ನಿರುದ್ಯೋಗ ತಾಂಡವಾಡುತ್ತಿದೆ, ವರ್ಷಕ್ಕೆ ೨ ಕೋಟಿಯಂತೆ ಮುಂದಿನ ಚುನಾವಣಾ ವೇಳೆಗೆ ೧೦ ಕೋಟಿ ಉದ್ಯೋಗಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು, ಮೋದಿಯವರ ಈ ಭರವಸೆ ಕೇವಲ ಚುನಾವಣಾ ಪೊಳ್ಳು ಮಾತು ಎಂಬುವುದು ೩ ವರ್ಷ ಕಳೆಯುವ ವೇಳೆಗೆ ದೃಢಪಟ್ಟಿದೆ ಎಂದು ನಿತ್ಯಾನಂದ ಸ್ವಾಮಿ ಆರೋಪ ಮಾಡಿದರು.

    ೮ ಕೃಷಿಯೇತರ ಉತ್ಪಾದನಾ ವಲಯಗಳಲ್ಲಿ ಮೋದಿ ಸರ್ಕಾರದ ೨ನೇ ವರ್ಷದ ಅಂತ್ಯದಲ್ಲಿ ಇದ್ದದ್ದು, ೨.೫ ಕೋಟಿ ಉದ್ಯೋಗಗಳಷ್ಟೆ, ಈ ಒಂದು ವರ್ಷದಲ್ಲಿ ಅದಕ್ಕೆ ಸೇರಿಸಿದ ಕೇವಲ ೨ ಲಕ್ಷ ಮೂವತ್ತು ಸಾವಿರ ಮಾತ್ರ ಅದರಲ್ಲಿ ೧ ಲಕ್ಷ ೧೦ ಸಾವಿರದಷ್ಟು ಶಿಕ್ಷಣ ಮತ್ತು ಆರೋಗ್ಯ ಈ ಎರಡು ಕ್ಷೇತ್ರದಿಂದಲೇ ಎಂದು ನಿತ್ಯಾನಂದ ಸ್ವಾಮಿ ಕಳವಳ ವ್ಯಕ್ತಪಡಿಸಿದರು.

    ಗ್ರಾಮೀಣ ಉದ್ಯೋಗಕಾಂಕ್ಷಿಗಳ ಪಾಡು ಸೋಚನೀಯ. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಉದ್ಯೋಗಗಳ ಬೇಡಿಕೆ ಇದಕ್ಕೆ ಒಂದು ಪ್ರಮುಖ ನಿರ್ದಶನ. ೨೦೧೪-೧೫ ರಲ್ಲಿ ೪.೮೫ ಕೋಟಿ ಕುಟುಂಬ ಉದ್ಯೋಗ ಕೇಳಿದರು. ೨೦೧೬-೧೭ರಲ್ಲಿ ೫.೬೯ ಕೋಟಿಗೆ ಏರಿತು. ೨೦೧೭-೧೮ರ ಒಂದೇ ತಿಂಗಳಲ್ಲಿ ೧.೩೮ ಕೋಟಿ ಕುಟುಂಬ ಉದ್ಯೋಗ ಕೇಳಿದೆ. ಅತೀ ಕಡಿಮೆ ಕೂಲಿ ಕೊಟ್ಟು ವರ್ಷಕ್ಕೆ ಕೇವಲ ೧೦೦ ದಿನಗಳ ಕೆಲಸ ಕೊಡುವ ಯೋಜನೆ ಇದಕ್ಕೂ ಇಷ್ಟೊಂದು ಬೇಡಿಕೆ ಇದೆ. ಕೆಲಸ ಸಿಗಲಿ ಎಂದು ಅರ್ಜಿ ಹಾಕುವ ಕುಟುಂಬಗಳಿಗೆ ೧೦.೧೧ ಶೇ. ಕುಟುಂಬಗಳಿಗೆ ೨೦೧೬-೧೭ರಲ್ಲಿ ೫೮ ಲಕ್ಷ ಕುಟುಂಬಗಳಿಗೆ ಕೆಲಸ ಸಿಕ್ಕಿಲ್ಲ ಎಂದು ಆತಂಕ ವ್ಯಕ್ತ ಪಡಿಸಿದರು. ಉತ್ಪಾದನಾ ಚಟುವಟಿಕೆಗಳಲ್ಲಿ ಬಂಡವಾಳ ಹೂಡಲು ಹೊಸ ಹೂಡಿಕೆಗಳ ಪ್ರಮಾಣ ೨೦೧೫-೧೬ರಲ್ಲಿ ೬.೧ ಶೇಕಡಾ ಇದ್ದದ್ದು ೨೦೧೬-೧೭ರಲ್ಲಿ ೦.೦೬ಶೇಕಡಾಕ್ಕೆ ಇಳಿದಿದೆ.

    Click here

    Click here

    Click here

    Click Here

    Call us

    Call us

    ಭಾರತೀಯ ರಿಜಿರ್ವೋ ಬ್ಯಾಂಕ್ ಇತ್ತೀಚಿನ ಮಾಹಿತಿ ಪ್ರಕಾರ ಕೈಗಾರಿಕೆಗಳಿಗೆ ಬ್ಯಾಂಕ್ ಸಾಲಗಳ ಪ್ರಮಾಣದಲ್ಲಿ ಆಗಿರುವ ಹೆಚ್ಚಳ ಕೇವಲ ೦.೩ ಶೇಕಡ ಅಂದರೆ ಹೊಸ ಹೂಡಿಕೆಗಳಲ್ಲಿ ಹೊಸ ಉದ್ಯೋಗಗಳ ನಿರೀಕ್ಷೆಯನ್ನು ಇಟ್ಟುಕೊಳ್ಳುವಂತಿಲ್ಲ ಎಂದು ನಿತ್ಯಾನಂದ ಸ್ವಾಮಿ ಹೇಳಿದರು.

    ಸಿಪಿಐ(ಎಂ) ಪಕ್ಷದ ಉಡುಪಿ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತಾ ಶಿರೂರಿನ ವಿದ್ಯಾರ್ಥಿನಿ ರತ್ನಾ ಕೊಠಾರಿ ನಿಗೂಡ ಸಾವಿನ ತನಿಖೆಗೆ ಒತ್ತಾಯಿಸಿ ಹಾಗೂ ಸರ್ಕಾರದ ವತಿಯಿಂದ ಮೃತಳ ಕುಟುಂಬಕ್ಕೆ ಪರಿಹಾರ ವರ್ಷ ಕಳೆದರೂ ಪರಿಹಾರ ದೊರಕದ ಕಾರಣ ಬೀದಿಗಿಳಿದು ಹಣ ಬಿಡುಗಡೆ ಮಾಡಲು ಹೋರಾಟ ಮಾಡಿದ ಗೌರವ ಸಿಪಿಐ(ಎಂ) ಪಕ್ಷಕ್ಕೆ ಸಲ್ಲುತ್ತದೆ ಎಂದು ಅವರು ಹೇಳಿದರು. ಈ ಹೋರಾಟದಲ್ಲಿ ಪಾಲ್ಗೊಂಡ ಬೈಂದೂರಿನ ಕಾರ್ಮಿಕ ಸಂಘಗಳ ಸದಸ್ಯರನ್ನು ಅವರು ಅಭಿನಂದಿಸಿದರು.

    ಸಿಪಿಐ(ಎಂ) ಪಕ್ಷದ ಬೈಂದೂರು ವಲಯ ರಾಜಕೀಯ ಸಮ್ಮೇಳನದಲ್ಲಿ ಮುಖಂಡರಾದ ಕೆ. ಶಂಕರ, ಎಚ್. ನರಸಿಂಹ, ಸುರೇಶಕಲ್ಲಾಗರ, ರಾಜೀವ ಪಡುಕೋಣೆ, ನಾಗರತ್ನ ನಾಡ, ಸಂತೋಷ ಹೆಮ್ಮಾಡಿ, ಮಹಾಬಲ ವಡೇರ ಹೋಬಳಿ, ಯು. ದಾಸಭಂಡಾರಿ, ದಿನೇಶ ಮೊಗವೀರ, ಜಯಶ್ರೀ, ಉಪಸ್ಥಿತರಿದ್ದರು.

    ಮಾರ್ಕ್ಸ್‌ವಾದಿ ಕಮ್ಯೂನಿಸ್ಟ್ ಪಕ್ಷದ ಜಿಲ್ಲಾ ಮುಖಂಡ ವೆಂಕಟೇಶ ಕೋಣಿ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು. ಗಣೇಶ ತೊಂಡೆಮಕ್ಕಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    04/06/2026

    ಉಡುಪಿ: ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

    30/05/2026

    ಕೊಲ್ಲೂರು ಅಪಘಾತದಲ್ಲಿ ಮೃತ ಮಹಿಳೆಯ ಚಿನ್ನ ಕದ್ದ ಪ್ರಕರಣ: ಆರೋಪಿ ಹೇಮಂತ್ ಬಂಧನ

    26/05/2026
    Leave A Reply Cancel Reply

    18 − five =

    Call us

    Click Here

    Call us

    Call us

    Call us
    Highest Viewed Recently
    • ಪ್ರಕೃತಿಗೆ ಮರಳಿ ನೀಡದೆ ಪ್ರತಿಕ್ಷಣ ಬಳಸುತ್ತಿದ್ದೇವೆ: ಆರ್.ಕೆ. ನಾಯರ್
    • ಕೋಟೇಶ್ವರ: ಕಂಟೇನ‌ರ್ ಲಾರಿ ಹಾಗೂ ಬೈಕ್‌ ನಡುವೆ ಭೀಕರ ಅಪಘಾತ – ಬೈಕ್‌ ಸವಾರ ಸಾವು
    • ಸಾಸ್ತಾನ: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ನೋಟ್ ಬುಕ್ ವಿತರಣೆ, ಪ್ರತಿಭಾ ಪುರಸ್ಕಾರ ಸಮಾರಂಭ
    • ಕುಂದಾಪುರ ಶಾಸಕರ ಅಧಿಕಾರ ವೀಕೆಂದ್ರಿಕರಣ ವಿರೋಧಿ ಮನಸ್ಥಿತಿ: ಕೆ. ವಿಕಾಸ್ ಹೆಗ್ಡೆ
    • ಬೆಳ್ವೆ: ಕುಂದಾಪುರ ಶಾಸಕ ಹಾಗೂ ಸಂಸದರಿಂದ ಮಲ್ಟಿ ಪರ್ಪಸ್ ಸೆಂಟರ್ ವೀಕ್ಷಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.