Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗುರುಕುಲ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ವಿಶೇಷ ಕಾರ್ಯಗಾರ
    ಗುರುಕುಲ ಪಬ್ಲಿಕ್ ಸ್ಕೂಲ್ - ಪಿಯು ಕಾಲೇಜು ವಕ್ವಾಡಿ

    ಗುರುಕುಲ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ವಿಶೇಷ ಕಾರ್ಯಗಾರ

    Updated:20/11/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ಎದುರಿಸುವ ಮತ್ತು ಉತ್ತಮ ಅಂಕಗಳನ್ನು ಪಡೆಯುವ ಕೌಶಲ್ಯ ಹೆಚ್ಚಿಸುವ ಅಂಶಗಳು ಅನಿವಾರ್ಯವಾಗಿದೆ. ಒತ್ತಡವನ್ನು ನಿಭಾಯಿಸುವಿಕೆ ಮತ್ತು ಉತ್ತಮವಾಗಿ ಪ್ರಶ್ನೆಪತ್ರಿಕೆಯಲ್ಲಿ ಉತ್ತರವನ್ನು ಬರೆಯಬಲ್ಲ ಸಾಮರ್ಥವನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಹೊಂದಿದಾಗ ಮಾತ್ರ ಉತ್ತಮ ಶ್ರೇಣಿಯೊಂದಿಗೆ ತೇರ್ಗಡೆ ಹೊಂದಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಗುರುಕುಲ ಪಬ್ಲಿಕ್ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಹಾಗೂ ಪದವಿಪೂರ್ವ ಮಕ್ಕಳಿಗೆ ವಿಶೇಷವಾದ ಎರಡು ದಿವಸಗಳ ಪರೀಕ್ಷೇಯ ವಿವಿಧ ಆಯಾಮಗಳು ಎನ್ನುವ ವಿಷಯದ ಕುರಿತು ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು.

    Click Here

    Call us

    Click Here

    ರಾಷ್ಟ್ರದ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಲ್ಲಿ ಒಂದಾದ ಆರ್.ಸಿ.ಚೈಲ್ಡ್ ಡೆವೆಲಪ್‌ಮೆಂಟ್ ಎಜೆನ್ಸಿಯ ತಂಡದ ಸಹಾಯದಿಂದ ಮಕ್ಕಳಿಗೆ ವಿಭಿನ್ನ ಬಗೆಯ ಪರೀಕ್ಷೇಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಾಹಿತಿಗಳನ್ನು ನೀಡಲಾಯಿತು. ಕ್ಲಿಷ್ಟಕರ ವಿಷಯಗಳಾದ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನಗಳ ವಿಭಿನ್ನ ಬಗೆಯ ಪರಿಕಲ್ಪನೆಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಬೇಕಾದ ಪದ್ಧತಿಗಳ ಬಗ್ಗೆ ಕ್ರೀಯಾ ಚಟುವಟಿಕೆಗಳ ಮೂಲಕ ತಿಳಿಸಲಾಯಿತು. ಸ್ಮರಣಾ ಕೌಶಲ್ಯ, ಬರವಣಿಗೆಯ ಸಾಮರ್ಥ್ಯ ಮತ್ತು ಧೀರ್ಘವಾದ ಉತ್ತಗಳನ್ನು ಬರೆಯುವ ಬಗ್ಗೆ ಹೆಚ್ಚಿನ ಗಮನವಿಟ್ಟು ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ಅಲ್ಲದೇ ಧ್ಯಾನದ ಮೂಲಕ ವಿದ್ಯಾರ್ಥಿಗಳು ತಮ್ಮ ಸ್ಮರಣಾಶಕ್ತಿಯನ್ನು ಹೆಚ್ಚಿಸಲು ಸಾಧ್ಯ ಎನ್ನುವುದನ್ನು ಪ್ರಾತಿಕ್ಷ್ಯತೆಯ ಮೂಲಕ ನಿರೂಪಿಸಿದರು. ಇವುಗಳಲ್ಲದೇ ವಿದ್ಯಾರ್ಥಿಗಳಲ್ಲಿ ಆತ್ಮಸೆರ್ಯವನ್ನು ಹೆಚ್ಚಿಸುವ ಚಟುವಟಿಕೆಗಳನ್ನು ಹಾಗೂ ಆರೋಗ್ಯವನ್ನು ಕಾಪಾಡಿಕೊಳ್ಳಲು ಬೇಕಾಗುವ ಮೂಲಾಂಶಗಳ ಬಗ್ಗೆ ಎರಡು ದಿನಗಳ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ರಾಮಚಂದ್ರ ನಾಯರ್ ಮತ್ತು ತಂಡದವರು ಈ ಕಾರ್ಯಗಾರವನ್ನು ಸಮರ್ಪಕವಾಗಿ ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲರಾದ ಸಾಯಿಜು. ಕೆ.ಆರ್. ನಾಯರ್ ವಹಿಸಿದ್ದರು. ಶಿಕ್ಷಕಿಯರಾದ ಅನುಪಮ ಶೆಟ್ಟಿ ಮತ್ತು ಸ್ಮಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಿದ್ಯಾರ್ಥಿಗಳು ಆದರ್ಶ ವ್ಯಕ್ತಿತ್ವವನ್ನು ರೂಪಿಸಿಕೊಂಡು ಉತ್ತಮ ಚಿಂತನೆಗಳತ್ತ ಮುಖ ಮಾಡಿ: ಅನುಪಮಾ ಎಸ್. ಶೆಟ್ಟಿ

    18/03/2026

    ಗುರುಕುಲ ವಿದ್ಯಾಸಂಸ್ಥೆಯಲ್ಲಿ ʼಗುರುಕುಲ ಕಾರ್ನಿವಲ್‌ ಮಕ್ಕಳ ಹಬ್ಬʼ

    28/01/2026

    ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ದೀಪಾವಳಿ ಹಬ್ಬ ಆಚರಣೆ

    23/10/2025
    Leave A Reply Cancel Reply

    5 + 4 =

    Call us

    Click Here

    Call us

    Call us

    Call us
    Highest Viewed Recently
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.