Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಾಸಿಗೆ ಹಿಡಿದ ಅಸಹಾಯಕ ಯುವಕನಿಗೆ ಬೇಕಿದೆ ಆರ್ಥಿಕ ಆಸರೆ
    ಬೆಳಕಾಗೋಣ ಬನ್ನಿ

    ಹಾಸಿಗೆ ಹಿಡಿದ ಅಸಹಾಯಕ ಯುವಕನಿಗೆ ಬೇಕಿದೆ ಆರ್ಥಿಕ ಆಸರೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಉಡುಪಿ: ವಿಧಿಯಾಟವೆಂಬುದು ಎಂಥಹ ಕ್ರೂರವಾದುದು ಎಂಬುದಕ್ಕೆ ಈ ಯುವಕನೇ ಸಾಕ್ಷಿ. ಛಲದಿಂದ ಬದುಕು ಕಟ್ಟಿಕೊಳ್ಳಬೇಕೆಂಬುದು ಹೊರಟ ಯುವಕ ಈಗ ಹಾಸಿಗೆಯಿಂದಾಚೆ ಏಳಲಾರದೆ ಪರಿತಪಿಸುತ್ತಿರುವ ರೀತಿ ಮನಕಲಕುವಂತದ್ದು.

    Click Here

    Call us

    Click Here

    ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಂಗ್ಲೆಗುಡ್ಡೆಯ ನಿವಾಸಿ ಕೃಷ್ಣಯ್ಯ ಶೆಟ್ಟಿ ಮತ್ತು ಪ್ರೇಮಾ ಎಂಬುವವರ ಎರಡನೇ ಮಗನಾದ ನಾಗರಾಜ ಶೆಟ್ಟಿ (26) ಕಳೆದ 10 ವರ್ಷಗಳಿಂದ ಹಾಸಿಗೆಯಿಂದ ಎಳಲಾರದೇ ತನ್ನೆಲ್ಲಾ ಬೇಕು-ಬೇಡಗಳಿಗೆ ಮತ್ತೊಬ್ಬರನ್ನು ಅವಲಂಬಿಸಬೇಕಾದ ಸ್ಥಿತಿಯಲ್ಲಿ ಮಲಗಿದ್ದಾರೆ.

    ನಾಗರಾಜ ಅವರ ಮನೆಯಲ್ಲಿ ತೀರಾ ಬಡತನವಾದ್ದರಿಂದ ವಿದ್ಯಾಭ್ಯಾಸವನ್ನು ಪಿಯುಸಿಗೆ ಮೊಟಕುಗೊಳಿಸಿದ ಖಾಸಗಿ ವಿದ್ಯುತ್ ಗುತ್ತಿಗೆದಾರರಲ್ಲಿ ಬಳಿ ವಿದ್ಯುತ್ ಕಂಬ ಹಾಕುವ ಹಾಗೂ ತಂತಿ ಎಳೆಯುವ ಕೆಲಸಕ್ಕೆ ಸೇರಿದರು. 2005ರಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಕಂಬದಿಂದ ಆಯತಪ್ಪಿ ಕೆಳಕ್ಕೆ ಬಿದ್ದಿದ್ದರಿಂದ ಅವರ ಬೆನ್ನುಮೂಳೆ ಮುರಿತಕ್ಕೊಳಗಾಗಿತ್ತಲ್ಲದೇ ಮೆದುಳು ಬಳ್ಳಿಯು ಜಖಂಗೊಂಡಿತ್ತು. ಇದರಿಂದ ಸೊಂಟದ ಕೆಳಭಾಗ ನಿಶ್ಚಲವಾಗಿತ್ತು. ಸ್ವಂತ ದುಡಿಮೆಯಲ್ಲಿ ಓದು ಮುಂದುವರಿಸಬೇಕು, ಮುಂದೆ ಒಳ್ಳೆಯ ಉದ್ಯೋಗ ಗಿಟ್ಟಿಸಿಕೊಳ್ಳಬೇಕು ಎಂದು ಹೊರಟ್ಟಿದ್ದ ಯುವಕ ಬದುಕು ಹಾಸಿಗೆಗೆ ಸೀಮಿತವಾಯಿತು.
    ಮಣಿಪಾಲದ ಕೆಎಂಸಿಯಲ್ಲಿ ಶಸ್ರ್ತಚಿಕಿತ್ಸೆ ನಡೆಸಿದರೂ ಕೂಡ ಫಲಕಾರಿಯಾಗಲಿಲ್ಲ. ಆದರೆ ಮತ್ತೆ ಮತ್ತೆ ಶಸ್ತ್ರ ಚಿಕಿತ್ಸೆಗೆ ಒಡ್ಡಿಕೊಳ್ಳಬೇಕಾದ ಅನಿವಾರ್ಯವೊಂದು ತಲೆದೂರಿತು. ಈವರೆಗೆ ನಾಗರಾಜ 16 ಬಾರಿ ಆಸ್ಪತ್ರೆಗೆ ದಾಖಲಾಗಿದ್ದು 15ಕ್ಕೂ ಹೆಚ್ಚು ಭಾರಿ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಇಲ್ಲಿಯತನಕ ಚಿಕಿತ್ಸೆಗೆ 9 ಲಕ್ಷಕ್ಕೂ ಹೆಚ್ಚು ಹಣ ಚಿಕಿತ್ಸೆಗೆ ಖರ್ಚಾಗಿದೆ.
    ಪ್ರತಿತಿಂಗಳು ಬರುವ 4ರಿಂದ 5ಸಾವಿರದಷ್ಟು ಔಷಧಿ ಖರ್ಚನ್ನು ವ್ಯಯಿಸಲು ಈ ಬಡ ಕುಟುಂಬ ಹೆಣಗಾಡುತ್ತಿದೆ. ಇದರ ನಡುವೆ ನಾಗರಾಜರ ಬೆನ್ನಮೂಳೆಯ ಭಾಗದಲ್ಲಿ ಹಾಕಲಾಗಿದ್ದ ರಾಡ್ ನಿಂದ ತೀವ್ರ ನೋವುಕಾಣಿಸಿಕೊಳ್ಳುತ್ತಿದ್ದು ಅದನ್ನು ತೆಗೆಯಲೆಬೇಕು, ಮತ್ತೊಂದು ಶಸ್ತ್ರ ಚಿಕಿತ್ಸೆ ಅನಿವಾರ್ಯ ಎಂದು ವೈದ್ಯರು ತಿಳಿಸಿದ್ದಾರೆ. ಒಬ್ಬನೇ ಅಣ್ಣನ ಆದಾಯದಲ್ಲಿ ಅನಾರೋಗ್ಯ ಪೀಡಿತ ತಂದೆ, ತಾಯಿ ಹಾಗೂ ಇತರ ಚಿಕಿತ್ಸೆಯ ವೆಚ್ಚವನ್ನು ಭರಿಸುವುದು ಬಡ ಕುಟುಂಬಕ್ಕೆ ದೂರದ ಮಾತು. ಇಂತಹ ಶೋಚನೀಯ ಸ್ಥಿತಿಯಲ್ಲಿರುವ ಈ ಕುಟುಂಬಕ್ಕೆ ಇಷ್ಟು ವರ್ಷಗಳವರೆಗೂ ಹೇಳಿಕೊಳ್ಳುವಂತಹ ಆರ್ಥಿಕ ನೆರವೂ ಸಿಗದಿರುವುದರಿಂದ ಅವರು ಮತ್ತಷ್ಟು ಕಂಗೆಟ್ಟಿದ್ದಾರೆ. ಸಹೃದಯಿಗಳ ನೆರವು ಇವರಿಗೆ ಅಗತ್ಯವಾಗಿ ಬೇಕಾಗಿದೆ.

    ಕುಂದಾಪ್ರ ಡಾಟ್ ಕಾಂ ನೊಂದಿಗೆ ಮಾತನಾಡಿರುವ ನಾಗರಾಜ ತನ್ನ ಚಿಕಿತ್ಸೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಒದಗಿಸಿದ್ದಾರೆ. ಅದರಂತೆ ಶೀರ್ಘ್ರವೇ ಅವರಿಗೆ ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ.

    ನಾಗರಾಜ ಅವರಿಗೆ ನೆರವು ನೀಡಲಿಚ್ಚಿಸುವವರು ಅಜೆಕಾರ್ ನ ಕಾರ್ಪೋರೇಶನ್ ಬ್ಯಾಂಕ್ ಶಾಖೆಯ ಖಾತೆ ನಂ. 009800101014791 (ಐ.ಎಫ್.ಎಸ್.ಸಿ ಕೋಡ್: CORP0000098) ಇಲ್ಲಿಗೆ ಜಮಾ ಮಾಡಬಹುದಾಗಿದೆ.
    ಅವರನ್ನು ನೇರವಾಗಿ ಭೇಟಿಯಾಗಲಿಚ್ಛಿಸುವವರು ನಾಗರಾಜ ಶೆಟ್ಟಿ s/o ಕೃಷ್ಣಯ್ಯ ಶೆಟ್ಟಿ, ಅನಂತ ನಿಲಯ, ಬಂಗ್ಲೆಗುಡ್ಡೆ, ಅಂಚೆ-ಅಜೆಕಾರು, ಮರ್ಣೆ ಗ್ರಾಮ, ಕಾರ್ಕಳ ತಾಲೂಕು, ಉಡುಪಿ ಜಿಲ್ಲೆ ಈ ವಿಳಾಸದಲ್ಲಿ ಸಂಪರ್ಕಿಸಬಹುದು. ಮೊಬೈಲ್ 7760940737

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಕಿಡ್ನಿ ಹಾಗೂ ಹೃದಯ ವೈಫಲ್ಯದಿಂದ ಬಳಲುತ್ತಿರುವ ಮಹಿಳೆಗೆ ಬೇಕಿದೆ ನೆರವು

    11/09/2021

    ಮುಖ್ಯಮಂತ್ರಿ ಚಿನ್ನದ ಪದಕದೊಂದಿಗೆ ಪಡೆದ ಹಣ ಬಾಲಕಿಯ ಚಿಕಿತ್ಸೆಗೆ ಹಸ್ತಾಂತರ

    24/08/2021

    ಕಿಡ್ನಿ ವೈಪಲ್ಯದಿಂದ ಬಳಲುತ್ತಿರುವ ಬಾಲಕನ ಚಿಕಿತ್ಸೆಗೆ ಬೇಕಿದೆ ಸಹೃದಯಿಗಳ ನೆರವು

    16/08/2021
    Leave A Reply Cancel Reply

    15 + 9 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.