Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಂಭ್ರಮದಿ ಜರುಗಿದ ಪ್ರಸಿದ್ಧ ತಗ್ಗರ್ಸೆ ಕಂಬಳೋತ್ಸವ
    ಊರ್ಮನೆ ಸಮಾಚಾರ

    ಸಂಭ್ರಮದಿ ಜರುಗಿದ ಪ್ರಸಿದ್ಧ ತಗ್ಗರ್ಸೆ ಕಂಬಳೋತ್ಸವ

    Updated:08/12/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ವರದಿ
    ಬೈಂದೂರು ಭಾಗದ, ನೂರಾರು ವರ್ಷಗಳು ಇತಿಹಾಸ ಹೊಂದಿರುವ ಸಾಂಪ್ರದಾಯಿಕ ತಗ್ಗರ್ಸೆ ಕಂಬಳವು ಕಂಠದಮನೆ ಕುಟುಂಬಸ್ಥರಿಗೆ ಸೇರಿದ ಕಂಬಳಗದ್ದೆಯಲ್ಲಿ ಪ್ರತಿವರ್ಷ ಕಾರ್ಯದಂತೆ ವಿಧಿವತ್ತಾಗಿ, ವಿಜೃಂಭಣೆಯಿಂದ ನಡೆಯುತ್ತದೆ. ಹಲವಾರು ಜೊತೆ ಕೋಣಗಳು ಹರಕೆ ಹಾಗೂ ಸ್ವರ್ಧೆಯಲ್ಲಿ ಭಾಗವಹಿಸಿ ಕಂಬಳದ ಮೆರಗು ಹೆಚ್ಚಿಸಿದವು.

    Click Here

    Call us

    Click Here

    ಕಂಬಳದ ದಿನ ಬೆಳಿಗ್ಗೆ ಗದ್ದೆಯ ಅಲಂಕಾರ, ಪೂಜೆ ಕಾರ್ಯಾದಿಗಳು ನೆರವೇರಿದ ಬಳಿಕ ಮಧ್ಯಾಹ್ನ ಕಂಬಳಕ್ಕೆ ಬರುವ ಕೋಣಗಳನ್ನು ವೀಳ್ಯ, ತೆಂಗಿನಕಾಯಿ ನೀಡಿ ಬರಮಾಡಿಕೊಳ್ಳಲಾಯಿತು. ಊರಿನ ಒಂದು ನಿರ್ದಿಷ್ಟ ಕುಟುಂಬದ ಕೋಣಗಳನ್ನು ಗದ್ದೆಗೆ ಇಳಿಸುವ ಮೂಲಕ ಕಂಬಳಕ್ಕೆ ಅಧಿಕೃತ ಚಾಲನೆ ದೊರೆಯಿತು. ಕಂಬಳ ಗದ್ದೆಯಲ್ಲಿ ಖುರ್ಜು ನಿಲ್ಲಿಸಿ, ತೋರಣಗಳಿಂದ ಅಲಂಕರಿಸಲಾಗುತ್ತದೆ.

    ವಿಶೇಷ ವೇಷಭೂಷಣ, ವಾದ್ಯ ಮುಂತಾದವುಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿಬಂದ ನೂರಾರು ಜೊತೆ ಕೋಣಗಳ ಪೈಕಿ ಕೆಲವನ್ನು ಕಂಬಳ ಗದ್ದೆಯಲ್ಲಿ ಕೆಲವರು ಹರಕೆಯ ಸಲುವಾಗಿ ಕೋಣಗಳನ್ನು ಓಡಿಸಿದರೇ, ಉಳಿದ ಕೋಣಗಳು ಸ್ವರ್ಧೆಯಲ್ಲಿ ಪಾಲ್ಗೊಂಡವು. ಕಂಠದಮನೆ ಕುಟುಂಬದ ನಾರಾಯಣ ಹೆಗ್ಡೆಯವರ ಸಾರಥ್ಯದಲ್ಲಿ ಸಾಂಪ್ರದಾಯಿಕ ಕಂಬಳ ಮುನ್ನಡೆಯುತ್ತಿದ್ದು ಊರಿನ ಜನ ಹಬ್ಬದಂತೆ ಸಂಭ್ರಮಿಸುತ್ತಾರೆ. ವಿಶಾಲ ಗದ್ದೆಯ ಅಂಚುಗಳಲ್ಲಿ ನಿಂತು ಕಂಬಳದ ಸೊಬಗನ್ನು ಸವಿದವರು. ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ, ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಜಿಲ್ಲಾ ಪಂಚಾಯತ್ ಸದಸ್ಯರಾದ ಶಂಕರ ಪೂಜಾರಿ, ಸುರೇಶ್ ಬಟವಾಡಿ, ಬಾಬು ಶೆಟ್ಟಿ ತಗ್ಗರ್ಸೆ, ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಕುಂದಾಪುರ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಬಿ.ಎಂ ಸುಕುಮಾರ ಶೆಟ್ಟಿ, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಶಾಂತಾರಾಮ ಶೆಟ್ಟಿ, ಬೈಂದೂರು ವಲಯ ಅಧ್ಯಕ್ಷ ವೆಂಕ್ಟ್ ಪೂಜಾರಿ ಸೇರಿದಂತೆ ವಿವಿಧ ಗಣ್ಯರು ಕಂಬಳೋತ್ಸವ ವೀಕ್ಷಣೆಗೆ ಆಗಮಿಸಿದ್ದರು.

    ಸ್ವರ್ಧೆಯಲ್ಲಿ ಭಾಗವಹಿಸಿ ಗೆಲ್ಲುವ ಮೂರು ಜೋಡಿ ಕೋಣಗಳಿಗೆ, ಉತ್ತಮವಾಗಿ ಕೋಣಗಳನ್ನು ಓಡಿಸುವವರಿಗೆ ಬಹುಮಾನ ನೀಡಲಾಗುತ್ತದೆ. ಮನೋರಂಜನೆಗಾಗಿ ಕಂಬಳಗದ್ದೆ ಓಟ ನಡೆಯಿತು.

    ತಗ್ಗರ್ಸೆ ಕಂಬಳೋತ್ಸವ ವಿಜೇತರು

    Click here

    Click here

    Click here

    Click Here

    Call us

    Call us

    ಹಲಗೆ ವಿಭಾಗ:
    ಪ್ರಥಮ: ಧೀರಜ್ ಆತ್ಮಜ್ ಬಾರಕೂರು ಇವರ ಕೋಣ ಓಡಿಸಿದವರು ಗೋಪಾಲ ನಾಯ್ಕ್ ಮುದ್ದುಮನೆ
    ದ್ವಿತೀಯ: ಪುಪ್ಪರಾಜ್ ಶೆಟ್ಟಿ ಶಿರೂರು ಇವರ ಕೋಣ ಓಡಿಸಿದವರು ಗೋಪಾಲ ನಾಯ್ಕ್ ಮುದ್ದುಮನೆ
    ತೃತೀಯ: ದೊಟ್ಟಯ್ಯ ಪೂಜಾರಿ ಗುರನಮಕ್ಕಿ ಇವರ ಕೋಣ ಓಡಿಸಿದವರು ಭಾಸ್ಕರ ದೇವಾಡಿಗ

    ಹಗ್ಗ ವಿಭಾಗ
    ಪ್ರಥಮ: ಕಾರಿಕಟ್ಟೆ ದಿ. ಮಹಾಬಲ ಶೆಟ್ಟಮನೆ ಇವರ ಕೋಣ ಓಡಿಸಿದವರು ಮಂಜುನಾಥ ಗೌಡ
    ದ್ವಿತೀಯ: ಗೋವಿಂದ ಶೇರುಗಾರಹಿತ್ಲು ಇವರ ಕೋಣ ಓಡಿಸಿದವರು ರಾಘವೇಂದ್ರ
    ತೃತೀಯ: ನಾರಾಯಣ ದಏವಾಡಿಗ ಕಂಚಿಕಾನು ಇವರ ಕೋಣ ಓಡಿಸಿದವರು ರಾಘವೇಂದ್ರ

    ಹಗ್ಗ ವಿಭಾಗ ಕಿರಿಯ:
    ಪ್ರಥಮ: ಉಮೇಶ್ ಪೂಜಾರಿ ಅವರ ಕೋಣ
    ದ್ವಿತೀಯ: ಪಂಜು ಪೂಜಾರಿ ನಾಗೂರು ಅವರ ಕೋಣ ಓಡಿಸಿದವರು ರಾಘವೇಂದ್ರ
    ತೃತೀಯ: ವೆಂಕಟರಮಣ ಗಾಣಿಗ ಉಪ್ಪುಂದ ಇವರ ಕೋಣ ಓಡಿಸಿದವರು ರಾಘವೇಂದ್ರ

    ಕೆಸರುಗದ್ದೆ ಓಟದಲ್ಲಿ ಪ್ರಥಮ ಮಂಜುನಾಥ ಗೌಡ, ದ್ವಿತೀಯ ವಸುಂಧರ ದೇವಾಡಿಗ, ತೃತೀಯ ಹರೀಶ್

     

    Kambala Thaggarse Kambala
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    fourteen − 5 =

    Call us

    Click Here

    Call us

    Call us

    Call us
    Highest Viewed Recently
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.