Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ್ರವಾಸೋದ್ಯಮ ಅಭಿವೃದ್ಧಿ ಊರಿನ ಬೆಳವಣಿಗೆಗೆ ಪೂರಕ: ಬೈಂದೂರು ಬೀಚ್ ಉತ್ಸವ ಸಮಾರೋಪದಲ್ಲಿ ಜಯಪ್ರಕಾಶ್ ಹೆಗ್ಡೆ
    ಊರ್ಮನೆ ಸಮಾಚಾರ

    ಪ್ರವಾಸೋದ್ಯಮ ಅಭಿವೃದ್ಧಿ ಊರಿನ ಬೆಳವಣಿಗೆಗೆ ಪೂರಕ: ಬೈಂದೂರು ಬೀಚ್ ಉತ್ಸವ ಸಮಾರೋಪದಲ್ಲಿ ಜಯಪ್ರಕಾಶ್ ಹೆಗ್ಡೆ

    Updated:30/12/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಬೀಚ್ ಉತ್ಸವದ ಮೂಲಕ ಪ್ರವಾಸೋದ್ಯಮದ ಅಭಿವೃದ್ಧಿಗೆ ಹೊಸ ದಾರಿ ಕಂಡುಕೊಂಡಂತಾಗಿದೆ. ಪ್ರಪಂಚದ ಸಣ್ಣ ಸಣ್ಣ ದೇಶಗಳ ದೊಡ್ಡ ವ್ಯವಹಾರ ಪ್ರವಾಸೋದ್ಯಮವೇ ಆಗಿದೆ. ಪ್ರವಾಸಿ ತಾಣಗಳ ಅಭಿವೃದ್ಧಿಯಾದಂತೆ ಸ್ಥಳೀಯ ಜೀವನ ಮಟ್ಟವೂ ಹೆಚ್ಚುತ್ತದೆ, ಸರಕಾರ ಆ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚಿನ ಕಾಳಜಿ ವಹಿಸುತ್ತದೆ ಎಂದು ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಹೇಳಿದರು.

    Click Here

    Call us

    Click Here

    ಅವರು ಬೈಂದೂರು ಸೋಮೇಶ್ವರ ಬೀಚಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಬೈಂದೂರು ಬೀಚ್ ಉತ್ಸವ 2017ರ ಸಮಾರೋಪ ಸಮಾರಂಭದಲ್ಲಿ ಸ್ಮರಣ ಸಂಚಿಕೆ ಮುಖಪುಟ ಅನಾವರಣಗೊಳಿಸಿ ಮಾತನಾಡಿದರು. ಪ್ರವಾಸಿ ತಾಣಗಳ ಅಭಿವೃದ್ಧಿಯೊಂದಿಗೆ ಪರಿಸರದ ಜನರಿಗೂ ವಿಪುಲವಾದ ಉದ್ಯೋಗವಕಾಶಗಳು ತೆರೆದುಕೊಳ್ಳುತ್ತವೆ. ಹೋಂಸ್ಟೇ ಮಾಡಿಕೊಂಡರೇ ಪ್ರವಾಸೋದ್ಯಮ ಇಲಾಖೆಯೇ ನೆರವು ನೀಡುತ್ತದೆ. ಪ್ರವಾಸೋದ್ಯಮ ಬೆಳೆದಂತೆಲ್ಲ ಆರ್ಥಿಕ ಸುಧಾರಣೆಯಾಗುವುದಲ್ಲದೇ ಊರಿನ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಾಣಗೊಳ್ಳುತ್ತದೆ ಎಂದರು.

    ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಓಂಗಣೇಶ್ ಉಪ್ಪುಂದ ಸಮಾರೋಪ ನುಡಿಗಳನ್ನಾಡಿದರು. ಬೈಂದೂರು ಹೊಲಿಕ್ರಾಸ್ ಚರ್ಚ್ ರೆವರೆಂಡ್ ಫಾದರ್ ರೋನಾಲ್ಡ್ ಮಿರಾಂದ, ಜಿಪಂ ಸದಸ್ಯೆ ಗೌರಿ ದೇವಾಡಿಗ, ತಾಪಂ ಸದಸ್ಯ ಪುಪ್ಪರಾಜ ಶೆಟ್ಟಿ, ಮಾಜಿ ಜಿಪಂ ಸದಸ್ಯ ಎಸ್. ಮದನಕುಮಾರ್, ಯಡ್ತರೆ ವ್ಯ.ಸೇ.ಸ ಸಂಘದ ಅಧ್ಯಕ್ಷ ಟಿ. ನಾರಾಯಣ ಹೆಗ್ಡೆ, ಬೈಂದೂರು ಶ್ರೀ ಸೇನೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಚನ್ನಕೇಶವ ಉಪಾಧ್ಯಾಯ, ಉಪ್ಪುಂದ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಸೋಮಶೇಖರ ಖಾರ್ವಿ, ಸೌಖ್ಯ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರಿಯಾಜ್ ಅಹಮ್ಮದ್, ಬೈಂದೂರು ವಲಯ ಜನಜಾಗೃತಿ ಸಮಿತಿ ಅಧ್ಯಕ್ಷ ವೆಂಕಟ ಪೂಜಾರಿ, ಮಾನವ ಹಕ್ಕು ಜಾಗೃತಿ ಸಮಿತಿ ಅಧ್ಯಕ್ಷ ನವೀನಚಂದ್ರ ಉಪ್ಪುಂದ, ಬೆಸುಗೆ ಫೌಂಡೇಶನ್ ಉಪಾಧ್ಯಕ್ಷ ಜಯಾನಂದ ಹೋಬಳಿದಾರ್ ಮೊದಲಾದವರು ಉಪಸ್ಥಿತರಿದ್ದರು.

    ಬೆಸುಗೆ ಫೌಂಡೇಶನ್ ರಿ. ಅಧ್ಯಕ್ಷ ವೆಂಕಟೇಶ ಕಿಣಿ ಸ್ವಾಗತಿಸಿದರು. ಪಡುವರಿ ಪಂಚಾಯತ್ ಉಪಾಧ್ಯಕ್ಷ ಸದಾಶಿವ ಡಿ. ಪಡುವರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬೆಸುಗೆ ಫೌಂಡೇಶನ್ ಕಾರ್ಯದರ್ಶಿ ಗಣಪತಿ ಹೋಬಳಿದಾರ್ ವಂದಿಸಿದರು. ಸದಸ್ಯ ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.