Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಉಪ್ಪುಂದ ವಲಯದ ವಾರ್ಷಿಕ ಅಧಿವೇಶನ
    ಊರ್ಮನೆ ಸಮಾಚಾರ

    ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಉಪ್ಪುಂದ ವಲಯದ ವಾರ್ಷಿಕ ಅಧಿವೇಶನ

    Updated:04/01/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಭಾರತದಲ್ಲಿರುವ ಪ್ರಸಕ್ತ ಶಿಕ್ಷಣ ಪದ್ಧತಿಯೂ ಭಾರತೀಯ ಸಂಸ್ಕೃತಿ ಧಾರ್ಮಿಕತೆಯ ಬೆಳವಣಿಗೆಗೆ ಸ್ವಲ್ಪವೂ ಪೂರಕವಾಗಿಲ್ಲ. ಈ ಶಿಕ್ಷಣ ವಿದೇಶಿ ಶೂಟು ಬೂಟು ಸಂಸ್ಕೃತಿಯೊಂದಿಗೆ ಹಣ ಸಂಗ್ರಹಕ್ಕೆ ಮಾತ್ರ ಪೂರಕವಾಗಿದೆ ಅದಕ್ಕಾಗಿ ಭಾರತೀಯ ಶಿಕ್ಷಣ ಪದ್ಧತಿ ಆಮೂಲಾಗ್ರ ಬದಲಾವಣೆ ಆಗಬೇಕು. ಧಾರ್ಮಿಕ ಭೋದನೆಯ ಶಿಕ್ಷಣವನ್ನು ಶಿಕ್ಷಣ ಪದ್ಧತಿಯಲ್ಲಿ ಜೋಡಿಸುವ ಕಾರ್ಯ ಆಗಬೇಕು ಎಂದು ಹಾಲಾಡಿ ಪಂಚಾಂಗ ಕರ್ತು ವಿದ್ವಾನ್ ವಾಸುದೇವ ಜೋಯೀಸ್ ಹೇಳಿದರು,

    Click Here

    Call us

    Click Here

    ನಾಗೂರು ಓಡೆಯರಮಠ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಇತ್ತೀಚೆಗೆ ನಡೆದ ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಉಪ್ಪುಂದ ವಲಯ ಇವರ ೨೩ನೇಯ ವಾರ್ಷಿಕ ಅಧಿವೇಶನದ ಸಮಾರೋಪ ಸಮಾರಂಭದಲ್ಲಿ ವಿಶೇಷ ಉಪನ್ಯಾಸ ನೀಡುತ್ತಾ ಪ್ರತಿ ಸಮಾಜಕ್ಕೂ ಸಂಘಟನೆಯ ಅಗತ್ಯವಿದೆ, ವ್ಯಕ್ತಿಗಳ ಮನಸ್ಸು ಮನಸ್ಸು ಒಂದಾಗಿ ಸಂಘಟನೆ ಮಾಡಬೇಕು, ಸಂಘಟನೆಯ ಸದುದ್ಧೇಶ, ಸತ್ಯ ಪ್ರಾಮಾಣೀಕತೆ ಜೊತೆಯಲ್ಲಿ ಧಾರ್ಮಿಕ ಶಿಕ್ಷಣ ನೋಡುವುದರೊಂದಿಗೆ ಪ್ರತಿ ಸಂಘಟನೆ ಯಶಸ್ವಿಯಾಗಲಿದೆ ಎಂದು ಹೇಳಿದರು.

    ಉಪ್ಪುಂದ ವಲಯದ ಅಧ್ಯಕ್ಷ ಮಂಜುನಾಥ ಉಡುಪ ಸಮಾರಂಭದ ಅರ್ಧಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಮಹಿಳಾ ಅಧ್ಯಕ್ಷೆ ಪ್ರಪುಲ್ಲಾ ಎನ್. ಭಟ್, ವೇದಮೂರ್ತಿ ನಾಗರಾಜ ಐತಾಳ್, ಗೌರವಾಧ್ಯಕ್ಷ ಯು. ಹೆಚ್ ರಾಜರಾಮ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬೈಂದೂರು ಶೆನೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚನ್ನಕೇಶವ ಉಪಾದ್ಯಾಯ ಹಾಗೂ ಆತಿಥ್ಯದ ಪ್ರಾಯೋಜಕರಾದ ಸರೋಜ ಉಡುಪ ಚಿಕ್ತಾಡಿ ಅವರನ್ನು ಸಮಾಜದ ಪರವಾಗಿ ಸನ್ಮಾನಿಸಲಾಯಿತು, ಉನ್ನತ ಶಿಕ್ಷಣ ಪಡೆಯುತ್ತಿರುವ ೨೫ ವಿದ್ಯಾರ್ಥಿಗಳಿಗೆ ಸಹಾಯಧನ ಹಾಗೂ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು, ಯುವವೇದಿಕೆ ಅಧ್ಯಕ್ಷ ಪ್ರಶಾಂತ್ ಮಯ್ಯ ಕಾರ್ಯಕ್ರಮ ನಿರೂಪಿಸಿದರು, ಜೊತೆಕಾರ್ಯದಶಿ ಯು. ಸಂದೇಶ್ ಭಟ್ ಸ್ವಾಗತಿಸಿದರು, ಕಾರ್ಯದರ್ಶಿ ಗುರುರಾಜ್ ಹೆಬ್ಬಾರ್ ವಂದಿಸಿದರು

    ಪೂರ್ವಾಹ್ನ ೨೩ನೇಯ ವಾರ್ಷಿಕ ಅಧಿವೇಶನವನ್ನು ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ ಅಧ್ಯಕ್ಷರಾದ ಟಿ.ಕೆ ಎಂ ಭಟ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು, ಮುಖ್ಯ ಅತಿಥಿಗಳಾದ ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ಡಾ|| ಪ್ರಶಾಂತ್ ಭಟ್ ಕಮಲಶಿಲೆ ವಲಯದ ಕಾರ್ಯದರ್ಶಿ ಪೂರ್ಣೀಮಾ ಭಟ್, ಸಭೆ ಉದ್ಧೇಶಿಸಿ ಮಾತನಾಡಿದರು, ವಿಶೇಷ ಸಾಧನೆಮಾಡಿದ ಕನ್ನಡ ಸಾಹಿತ್ಯ ಪರಿಷತ್ ಕುಂದಾಪುರ ತಾಲೂಕು ಅಧ್ಯಕ್ಷ ಡಾ|| ಸುಬ್ರಹ್ಮಣ್ಯ ಭಟ್, ಜಿಲ್ಲಾ ಕೃಷಿ ಪಂಡಿತ್ ಪ್ರಶಸ್ತಿ ಪುರಸ್ಕೃತ ಎಚ್. ವೆಂಟೇಶ ರಾವ್, ಜೆಡಿಎಸ್ ಬೈಂದೂರು ಬ್ಲಾಕ್ ಅಧ್ಯಕ್ಷ ಯು. ಸಂದೇಶ ಭಟ್, ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿವರಾಮ ಮದ್ಯಸ್ಥ ಅವರನ್ನು ಸಮಾಜದ ಪರವಾಗಿ ಸನ್ಮಾನಿಸಲಾಯಿತು ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ರಾಜ್ಯಕ್ಕೆ ೩ನೇ ರ‍್ಯಾಂಕ್ ವಿಜೇತ ರೋಹನ್‌ರಾವ್ ಉಪ್ಪುಂದ ಪಿ.ಯು ವಿಭಾಗದಲ್ಲಿ ಚಿನ್ನಯಿ ಕಾರಂತ ಅವರನ್ನು ಸಹ ನಗದು ಸ್ಮರಣಿಕೆ ನೀಡಿ ಗೌರವಿಸಲಾಯಿತು, ವಲಯಾಧ್ಯಕ್ಷ ಒಡೆಯರ ಮಠ ಮಂಜುನಾಥ ಉಡುಪ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ರಾಜಾರಾಮ್ ಭಟ್, ಕಾರ್ಯದರ್ಶಿ ಗುರುರಾಜ್ ಹೆಬ್ಬಾರ್ ವೇದಿಕೆಯಲಲಿ ಉಪಸ್ಥತರಿದ್ದರು. ವಾರ್ಷಿಕ ಮಹಾಸಭೆಯಲ್ಲಿ ವರದಿ ಆಯ-ವ್ಯಯ ಮಂಡಣೆಮಾಡಿ ಅನೊಮೋದನೆ ಪಡೆಯಲಾಯಿತು ಹಾಗೂ ಮುಂದಿನ ೨ ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಿಗೆ ನಿವೃತ್ತ ಮುಖ್ಯೋಪಾದ್ಯಾಯ ಬಿ. ವಿಶ್ವೇಶ್ವರ ಅಡಿಗ, ಕಾರ್ಯದರ್ಶಿ ರತ್ನಕರ ಉಡುಪ ಸಹಿತ ಹೊಸ ಸಮಿತಿಯನ್ನು ರಚಿಸಲಾಯಿತು.

    ಕುಮಾರಿ ಸಂಜಿತಾ ಪ್ರಾರ್ಥಿಸಿದರು, ಕೋಶಾಧ್ಯಕ್ಷ ಅರುಣ ಕುಮಾರ್ ಶ್ಯಾನುಬೋಗ್ ಸ್ವಾಗತಿಸಿದರು, ಅನ್ನಪೂರ್ಣ ಉಡುಪ, ವೆಂಕಟೇಶ ಮೂರ್ತಿ ವೈದ್ಯ, ಪ್ರಶಾಂತ ಮಯ್ಯ ಕಾರ್ಯಕ್ರಮ ನಿರೂಪಿಸಿದರು, ಮಾಜಿ ಕೋಶಾಧ್ಯಕ್ಷ ಯು. ಸಂದೇಶ ಭಟ್ ವಂದಿಸಿದರು.

    Click here

    Click here

    Click here

    Call us

    Call us

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.