Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಲ್ಲೂರು ಠಾಣೆ ಪೊಲೀಸ್ ಸಿಬ್ಬಂದಿಗಳೀರ್ವರ ಪ್ರೇಮ ಪ್ರಕರಣ: ಪ್ರಿಯಕರ ಆತ್ಮಹತ್ಯೆಗೆ ಶರಣು
    ಅಪಘಾತ-ಅಪರಾಧ ಸುದ್ದಿ

    ಕೊಲ್ಲೂರು ಠಾಣೆ ಪೊಲೀಸ್ ಸಿಬ್ಬಂದಿಗಳೀರ್ವರ ಪ್ರೇಮ ಪ್ರಕರಣ: ಪ್ರಿಯಕರ ಆತ್ಮಹತ್ಯೆಗೆ ಶರಣು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೊಲ್ಲೂರು: ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೇದೆಯೋರ್ವರು ಪ್ರೇಮ ವೈಫಲ್ಯದಿಂದ ಕೊಲ್ಲೂರಿನ ವಸತಿಗೃಹದಲ್ಲಿ ನೇಣಿಗೆ ಶರಣಾಗಿರುವ ಘಟನೆ ವರದಿಯಾಗಿದೆ. ಪೊಲೀಸ್ ಪೇದೆ ನಾಗರಾಜ (23) ಆತ್ಮಹತ್ಯೆಗೆ ಮಾಡಿಕೊಂಡವರು. ಅವರ ಆತ್ಮಹತ್ಯೆಯ ಸುದ್ದಿ ತಿಳಿಯುತ್ತಿದ್ದಂತೆ ಅವರ ಪ್ರೇಯಸಿ ಹಾಗೂ ಅದೇ ಠಾಣೆಯ ಮಹಿಳಾ ಪೇದೆ ಕೂಡ ಬಾವಿಗೆ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಅವರನ್ನು ರಕ್ಷಿಸಲಾಗಿದೆ.

    Click Here

    Call us

    Click Here

    ಶನಿವಾರ ಬೆಳಿಗ್ಗೆ ತನ್ನ ಕರ್ತವ್ಯ ಮುಗಿಸಿ ಕೊಲ್ಲೂರಿನ ಸೌಪರ್ಣಿಕಾ ಗೆಸ್ಟ್ ಗೌಸ್‌ನಲ್ಲಿ ತಂಗಿದ್ದ ನಾಗರಾಜ್ ಅವರು ರಾತ್ರಿವೇಳೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಅವರ ಕೊಠಡಿಯಲ್ಲಿದ್ದ ಇನ್ನೊರ್ವ ಪೇದೆ ರಾತ್ರಿಪಾಳಿ ಮುಗಿಸಿ ಬೆಳಿಗ್ಗೆ ಕೊಣೆಗೆ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ.

    ದಾವಣಗೆರೆಯ ಮಲೆಬೆನ್ನೂರಿನವರಾದ ನಾಗರಾಜ್ ೨೦೧೪ರಲ್ಲಿ ಪೊಲೀಸ್ ಪೇದೆಯಾಗಿ ನೇಮಕಗೊಂಡು ಕೊಲ್ಲೂರು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ನಡುವೆ ಅದೇ ಠಾಣೆಯಲ್ಲಿ ಮಹಿಳಾ ಪೇದೆಯೋರ್ವರೊಂದಿಗೆ ಪ್ರೇಮಾಂಕುವಾಗಿತ್ತು. ಇಬ್ಬರ ಪ್ರೀತಿಯ ವಿಚಾರ ಅವರ ಕುಟುಂಬಿಕರಿಗೂ ತಿಳಿದು ಮದುವೆಗೆ ಸಮ್ಮತಿ ಸೂಚಿಸಿದ್ದರು. ಆದರೆ ಈ ಮಧ್ಯೆ ಪ್ರೇಮಿಗಳಿರ್ವರ ನಡುವೆ ಉಂಟಾದ ಬಿರುಕು ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ನಾಗರಾಜ್ ಡೆತ್‌ನೋಟ್‌ನಲ್ಲಿ ’ನನ್ನ ಸಾವಿಗೆ ನಾನೇ ಕಾರಣ ಎಂದು ಹೇಳಿಕೊಂಡಿರುವುದಲ್ಲದೆ ಅಪ್ಪ ಅಮ್ಮ ಕ್ಷಮಿಸಿ, ತನ್ನ ಪ್ರೇಯಸಿ ಚನ್ನಾಗಿರಬೇಕು’ ಎಂದು ಬರೆದಿದ್ದರು.

    ಆತನ ಆತ್ಮಹತ್ಯೆಯ ವಿಚಾರ ತಿಳಿಯುತ್ತಿದ್ದಂತೆ ಅದೇ ಠಾಣೆಯ ಸಿಬ್ಬಂಧಿ, ಪ್ರೇಯಸಿಯೂ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಸ್ಥಳೀಯರು ಹಾಗೂ ಇತರೆ ಸಿಬ್ಬಂಧಿಗಳು ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ► ಕೊಲ್ಲೂರು ಠಾಣೆಯ ಪೊಲೀಸ್ ಪೇದೆ ಆತ್ಮಹತ್ಯೆಗೆ ಶರಣು – http://kundapraa.com/?p=27421

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026

    ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು, ಹಾಡಹಗಲೇ ಕುಕೃತ್ಯ

    05/03/2026
    Leave A Reply Cancel Reply

    thirteen + four =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.