Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೆಳದಿಂಗಳ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ
    ಕರಾವಳಿ

    ಬೆಳದಿಂಗಳ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

    Updated:06/02/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಮೂಡುಬಿದಿರೆ: ತುಳು ಸಂಸ್ಕೃತಿಯು ಕೃಷಿ ಸಂಸ್ಕೃತಿಯ ಭಾಗವಾಗಿದೆ. ಯುವ ಜನತೆಗೆ ತುಳು ಸಂಸ್ಕೃತಿಯನ್ನು ಕಲಿಸುವುದು ದೊಡ್ಡ ಸವಾಲಾಗಿದೆ. ತುಳು ಭಾಷೆಯನ್ನು ಸಂವಿಧಾನದ ಪರಿಚ್ಛೇದಕ್ಕೆ ಸೇರಿಸಬೇಕೆಂಬ ಬೇಡಿಕೆ ಇನ್ನೂ ಈಡೇರಿಲ್ಲ. ಇಲ್ಲಿನ ರಾಜಕಾರಣಿಗಳ ಅನಾಧರವೇ ಇದಕ್ಕೆ ಕಾರಣವಾಗಿದೆ. ತುಳುವಿನ ಉಳಿವಿಗೆ ಇಚ್ಛಾಶಕ್ತಿ ಬರಲಿ ಎಂದು ಹಿರಿಯ ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅಭಿಪ್ರಾಯಪಟ್ಟರು.

    Click Here

    Call us

    Click Here

    ಶ್ರೀ ವಿದ್ಯಾಸಂಸ್ಥೆ, ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ, ಕನ್ನಡ ಸಾಹಿತ್ಯ ಪರಿಷತ್ ಅಜೆಕಾರು ಹೋಬಳಿ ಜಂಟಿ ಸಹಯೋಗದಲ್ಲಿ ಅಲಂಗಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಯಲು ರಂಗಮಂದಿರದ ಪಳಕಳ ಸೀತಾರಾಮ ಭಟ್ ವೇದಿಕೆಯಲ್ಲಿ ಬುಧವಾರ ರಾತ್ರಿ ನಡೆದ ೯ನೇ ವರ್ಷದ ಅಖಿಲ ಕರ್ನಾಟಕ ಬೆಳದಿಂಗಳ ತುಳು ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷತೆ ವಹಿಸಿ ಮಾತನಾಡಿದರು.

    ಮುಂಬೈ ಉದ್ಯಮಿ ಕಡಂದಲೆ ಸುರೇಶ್ ಭಂಡಾರಿ ಸಮ್ಮೇಳವನ್ನು ಉದ್ಘಾಟಿಸಿ ಮಾತನಾಡಿ ನಮ್ಮ ಸಂಪತ್ತನ್ನು ಸತ್ಕಾರ್ಯಗಳಿಗೆ ವಿನಿಯೋಗಿಸಬೇಕು. ಸಾಹಿತ್ಯ ಸಂಸ್ಕೃತಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಅವುಗಳ ಬೆಳವಣಿಗೆಗೆ ಸಹಕರಿಸಬೇಕು. ತುಳುನಾಡಿನಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನಗಳಿಗೆ ಸರ್ವರು ಬೆಂಗಾವಲಾಗಿರಬೇಕು ಎಂದರು.

    ಯಕ್ಷದ್ರುವ ಪಟ್ಲ ಫೌಂಡೇಷನ್ ಟ್ರಸ್ಟ್‌ನ ಅಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ತುಳುವಿನ ಪ್ರೀತಿಯಿರುವವರಿಂದ ಮಾತ್ರ ತುಳು ಸಾಹಿತ್ಯ ಸಂಸ್ಕೃತಿ ಸಮ್ಮೇಳನವನ್ನು ನಡೆಸಲು ಸಾಧ್ಯ. ಅದಕ್ಕೂ ಯೋಗಬೇಕು. ಅದನ್ನು ಆಸ್ವಾದಿಸುವ ಪ್ರೇಕ್ಷಕರಾಗಲು ಕೂಡ ಯೋಗ ಬೇಕು ಎಂದರು. ಕರ್ನಾಟಕದ ವಿವಿಧ ಟಿ.ವಿ.ಶೋಗಳಲ್ಲಿ ಮಿಂಚಿದ, ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ವಿಜೇತ ಪ್ರತಿಭಾನ್ವಿತ ೨೦ ಮಂದಿ ಬಾಲಪ್ರತಿಭೆಗಳಿಗೆ ಕರ್ನಾಟಕ ಪ್ರತಿಭಾ ರತ್ನ ಗೌರವ ನೀಡಿ ಪುರಸ್ಕರಿಸಲಾಯಿತು.

    ಮುಖ್ಯ ಅತಿಥಿಗಳಾಗಿ ದ.ಕ ಜಿಲ್ಲಾ ನೇತ್ರ ತಜ್ಞರ ಅಸೋಸಿಯೇಶನ್ ಅಧ್ಯಕ್ಷ ಡಾ.ಸುಧೀರ್ ಹೆಗ್ಡೆ, ಪುರಸಭಾ ಸದಸ್ಯ, ಮೂಡುಬಿದಿರೆ ವಕೀಲರ ಸಂಘದ ಅಧ್ಯಕ್ಷ ಬಾಹುಬಲಿ ಪ್ರಸಾದ್, ಕರ್ನಾಟಕ ತುಳು ಅಕಾಡೆಮಿ ಸದಸ್ಯ ತಾರಾನಾಥ ಕಾಪಿಕಾಡ್, ಸಮ್ಮೇಳನ ಸಮಿತಿಯ ಗೌರವಾಧ್ಯಕ್ಷರಾದ ಹರಿಕೃಷ್ಣ ಪುನರೂರು, ಡಾ.ಸಂತೊಷ್ ಕುಮಾರ್ ಶೆಟ್ಟಿ, ಅಖಿಲ ಭಾರತ ತುಳು ಒಕ್ಕೂಟ ಮುಂಬಯಿ ಇದರ ಅಧ್ಯಕ್ಷ ಧರ್ಮಪಾಲ್ ದೇವಾಡಿಗ, ಜನಪದ ವಿದ್ವಾಂಸರಾದ ಡಾ.ಲಕ್ಷ್ಮೀ ಜಿ.ಪ್ರಸಾದ್ ಭಾಗವಹಿಸಿದರು. ಧರ್ಮಪಾಲ್ ದೇವಾಡಿಗ ಹಾಗೂ ಅರುವ ಕೊರಗಪ್ಪ ಶೆಟ್ಟಿ, ಡಾ. ಸುನಿತಾ ಶೆಟ್ಟಿ ಮುಂಬೈ ಇವರಿಗೆ ವಿಶ್ವ ತುಳುವ ರತ್ನ ಗೌರವ ನೀಡಲಾಯಿತು.

    Click here

    Click here

    Click here

    Click Here

    Call us

    Call us

    ಸಮ್ಮೇಳನದ ಸಂಘಟಕ ಶೇಖರ್ ಅಜೆಕಾರು ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿ ಸ್ವಾಗತಿಸಿದರು. ವಿಜಯ ಕುಮಾರ್ ಜೈನ್ ಅಳದಂಗಡಿ ಕಾರ್ಯಕ್ರಮ ನಿರೂಪಿಸಿದರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    three × five =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.