Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಪಘಾತದಲ್ಲಿ ವಿದ್ಯಾರ್ಥಿ ಮೃತ್ಯು; ಅಂಗಾಂಗ ದಾನ
    ಊರ್ಮನೆ ಸಮಾಚಾರ

    ಅಪಘಾತದಲ್ಲಿ ವಿದ್ಯಾರ್ಥಿ ಮೃತ್ಯು; ಅಂಗಾಂಗ ದಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ: ಕೋಣಿ ರಾಜ್ಯ ಹೆದ್ದಾರಿಯಲ್ಲಿ ಫೆ. 14ರ ತಡರಾತ್ರಿ ಬೈಕ್‌ಗೆ ಖಾಸಗಿ ಬಸ್‌ ಢಿಕ್ಕಿ ಹೊಡೆದ ದುರ್ಘ‌ಟನೆಯಲ್ಲಿ ತಲೆಗೆ ಗಂಭೀರ ಗಾಯಗೊಂಡಿದ್ದ ಕುಂದಾಪುರದ ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯ (ಎಂಐಟಿ) ಪ್ರಥಮ ವರ್ಷದ ವಿದ್ಯಾರ್ಥಿ ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದಾರೆ.

    Click Here

    Call us

    Click Here

    ತೆಕ್ಕಟ್ಟೆ ಸಮೀಪದ ಕೆದೂರಿನ ಧರ್ಮರಾಜ್‌ ಮುದ ಲಿಯಾರ್‌ ಅವರ ಪುತ್ರ ಭರತ್‌ರಾಜ್‌ ಮುದಲಿಯಾರ್‌ (20) ಮೃತ ಯುವಕ. ಉಳೂ¤ರಿನಲ್ಲಿ ನಡೆದ ಯಕ್ಷಗಾನವನ್ನು ಮುಗಿಸಿ, ಜತೆಗಿದ್ದ ತನ್ನ ಸ್ನೇಹಿತನನ್ನು ಅಂಪಾರಿನ ಮನೆಗೆ ಬಿಟ್ಟು ವಾಪಸಾಗುತ್ತಿದ್ದ ವೇಳೆ ಫೆ. 14ರ ರಾತ್ರಿ 12.15 ಸುಮಾರಿಗೆ ಶಿವಮೊಗ್ಗ- ಕುಂದಾಪುರ ರಾಜ್ಯ ಹೆದ್ದಾರಿಯ ಕೋಣಿಯಲ್ಲಿ ಖಾಸಗಿ ಬಸ್‌ ಢಿಕ್ಕಿಯಾಗಿ ಈ ಅವಘಡ ಸಂಭವಿಸಿತ್ತು. ಗಂಭೀರ ಗಾಯಗೊಂಡ ಭರತ್‌ರಾಜ್‌ ಅವರನ್ನು ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತಲೆಗೆ ಗಂಭೀರ ಗಾಯಗೊಂಡ ಕಾರಣ ಚಿಕಿತ್ಸೆಗೆ ಸ್ಪಂದಿಸದೆ ಫೆ. 15ರ ರಾತ್ರಿ ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

    ಅಪಘಾತದ ರಭಸಕ್ಕೆ ಭರತ್‌ರಾಜ್‌ ಧರಿಸಿದ್ದ ಹೆಲ್ಮೆಟ್‌ ಛಿದ್ರವಾಗಿದ್ದು, ತಲೆಗೆ ಗಂಭೀರ ಏಟು ಬಿದ್ದಿದೆ. ತಂದೆ ಧರ್ಮ ರಾಜ್‌ ಮುದಲಿಯಾರ್‌ ಪೋಸ್ಟ್‌ ಮಾಸ್ಟರ್‌ ಆಗಿದ್ದು, ಸ್ವಯಂ ನಿವೃತ್ತಿ ಪಡೆದು, ಕೃಷಿ ನಿರತರಾಗಿದ್ದಾರೆ. ಅವರಿಗೆ ಇಬ್ಬರು ಪುತ್ರರಿದ್ದು, ಮೃತ ಭರತ್‌ರಾಜ್‌ ಕಿರಿಯವನಾಗಿದ್ದಾನೆ. ಕುಂದಾಪುರ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಭರತ್‌ರಾಜ್‌ ಗೌರವಾರ್ಥ ಆತ ವ್ಯಾಸಂಗ ಮಾಡುತ್ತಿದ್ದ ಮೂಡ್ಲಕಟ್ಟೆಯ ತಾಂತ್ರಿಕ ಮಹಾವಿದ್ಯಾಲಯಕ್ಕೆ ಶುಕ್ರವಾರ ರಜೆ ಸಾರಲಾಗಿತ್ತು. ಸಂಸ್ಥೆಯ ಮುಖ್ಯಸ್ಥರು, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಸಂತಾಪ ಸೂಚಿಸಿದ್ದಾರೆ.

    ಮೆದುಳು ನಿಷ್ಕ್ರಿಯಗೊಂಡು ಸಾವನ್ನಪ್ಪಿದ ಭರತ್‌ರಾಜ್‌ ಸಾವಿನಲ್ಲೂ ಸಾರ್ಥಕ್ಯ ಮೆರೆದಿದ್ದಾರೆ. ಈತನ ಮನೆಯವರು ಅವನ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿದ್ದು, ಮೂತ್ರಪಿಂಡ, ಪಿತ್ತಜನಕಾಂಗ, ಹಾಗೂ ದೇಹದ ಇನ್ನಿತರ ಉಪಯುಕ್ತ ಅಂಗಗಳನ್ನು ದಾನ ಮಾಡಲಾಗಿದೆ.

    Click here

    Click here

    Click here

    Click Here

    Call us

    Call us

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    twelve − 3 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.