Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಹುನಿರೀಕ್ಷಿತ ಕತ್ತಲೆಕೋಣೆ ಚಿತ್ರದ ಧ್ವನಿಸಾಂದ್ರಿಕೆ ಬಿಡುಗಡೆ
    Recent post

    ಬಹುನಿರೀಕ್ಷಿತ ಕತ್ತಲೆಕೋಣೆ ಚಿತ್ರದ ಧ್ವನಿಸಾಂದ್ರಿಕೆ ಬಿಡುಗಡೆ

    Updated:20/02/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಹೊಸ ಪ್ರತಿಭೆಗಳು ಕನ್ನಡ ಚಿತ್ರರಂಗದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಭಿನ್ನವಾದ ಕಥಾ ಹಂದರದ ಮೂಲಕ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಉತ್ತಮ ಚಿತ್ರಕಥೆ, ನಿರ್ದೇಶನ ಹಾಗೂ ಛಾಯಾಗ್ರಹಣದಂತೆ ಸಿನೆಮಾದಲ್ಲಿ ಉತ್ತಮ ಸಂಗೀತ ಇದ್ದಾಗಲೇ ಅದು ಯಶಸ್ವಿ ಚಿತ್ರವಾಗಿ ಮೂಡಿಬರುತ್ತದೆ ಎಂದು ಕನ್ನಡದ ಖ್ಯಾತ ಗಾಯಕಿ ಬಿ. ಕೆ ಸುಮಿತ್ರ ಹೇಳಿದರು.

    Click Here

    Call us

    Click Here

    ಅವರು ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಭಾನುವಾರ ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ಆಯೋಜಿಸಿದ ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಸಿನೆಮಾ ’ಕತ್ತಲೆಕೋಣೆ’ ಚಿತ್ರದ ಧ್ವನಿಸಾಂದ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ ಕತ್ತಲೆಕೋಣೆ ಚಲನಚಿತ್ರದ ಹಾಡಿನ ಸಾಹಿತ್ಯ ಹಾಗು ಸಂಗೀತ ಮನಮುಟ್ಟುವಂತಿದ್ದು, ಜನರ ಮನಸ್ಸನ್ನು ತಟ್ಟಲಿದೆ. ಸಂಗೀತದೊಂದಿಗೆ ಚಿತ್ರವೂ ಯಶಸ್ಸು ಕಾಣಲಿದೆ ಎಂದರು.

    ಮಲೆನಾಡಿನ ಮಡಿಲಲ್ಲಿರುವ ಶಿವಮೊಗ್ಗದಲ್ಲಿ ಯಾವುದಾದರೂ ಕಾರ್ಯಕ್ರಮ ಯಶಸ್ವಿಗೊಂಡರೇ ಅದು ಇಡಿ ರಾಜ್ಯದಲ್ಲೇ ಯಶಸ್ವಿಯಾಗುತ್ತದೆ ಎಂದು ನಿರ್ಧರಿಸಿಬಿಡಬಹುದು. ಇಲ್ಲಿನ ಜನರ ಕಲಾಸಕ್ತಿ ಅಂತಹದ್ದು ಎಂದ ಅವರು ಕತ್ತಲೆಕೋಣೆ ಚಿತ್ರದ ಧ್ವನಿಸಾಂದ್ರಿಕೆ ಬಿಡುಗಡೆ ಕಾರ್ಯಕ್ರಮ ಯಶಸ್ವಿಗೊಂಡಿದೆ. ಚಿತ್ರವೂ ಯಶಸ್ವಿಯಾಗುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ ಎಂದರು.

    ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಖ್ಯಾತ ನಿರ್ದೇಶಕ ಸಿಂಪಲ್ ಸುನಿ ಚಿತ್ರದ ಟ್ರೇಲರ್ ಬಿಡುಗಡೆಗೊಳಿಸಿದರು. ಗಾಯಕ ಮೆಹಬೂಬ್ ಸಾಬ್, ಚಿತ್ರದ ನಿರ್ಮಾಕರರಾದ ಪುರುಷೋತ್ತಮ ಅಮೀನ್, ಡಾ. ಜಯಲಕ್ಷ್ಮೀ, ಸಹ ನಿರ್ಮಾಪಕರಾದ ಶ್ರೀನಿವಾಸ ಮೂರ್ತಿ ಶಿವಮೊಗ್ಗ, ಕಾರ್ಯಕಾರಿ ನಿರ್ಮಾಪಕ ರಾಘವೇಂದ್ರ ಎ ಶೆಟ್ಟಿ, ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ್, ಮಂಜುನಾಥ್ ಸಾಲಿಯಾನ್, ನಟಿ ಹೇನಿಕಾ ರಾವ್, ಸಹ ನಿರ್ದೇಶಕ ಜೀತ್ ಜೋಸೆಫ್, ಛಾಯಾತ್ರಕಾರ ಆರ್.ಕೆ. ಮಂಗಳೂರು, ನಟರಾದ ಅಶ್ವಥ್ ಆಚಾರ್ಯ, ಸುನಿಲ್ ಉಪ್ಪುಂದ, ಉಷಾ ಸಂದೇಶ್ ಶೆಟ್ಟಿ ಹಾಗೂ ಕತ್ತಲೆಕೋಣೆ ಚಿತ್ರತಂಡದ ನಟರು, ತಂತ್ರಜ್ಞರು ಆಡಿಯೋ ಬಿಡುಗಡೆ ವೇಳೆ ಉಪಸ್ಥಿತರಿದ್ದರು.

    ಕತ್ತಲೆಕೋಣೆ ಚಿತ್ರದ ನಟ, ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ಪ್ರಾಸ್ತಾವಿಕ ಮಾತನಾಡಿ ಏಳು ವರ್ಷದ ಕನಸು ನನಸಾಗುವ ದಿನ ಬಂದಿದೆ. ನೈಜ ಘಟನೆಯಾಧಾರಿತ ಕಥೆಯನ್ನು ಚಿತ್ರಕಥೆಯನ್ನಾಗಿಸಿಕೊಂಡು ಕತ್ತಲೆಕೋಣೆ ಸಿನೆಮಾ ನಿರ್ಮಾಣಗೊಳ್ಳುತ್ತಿದೆ. ವಿಭಿನ್ನ ಸ್ಕ್ರೀನ್‌ಪ್ಲೇ ಮೂಲಕ ಚಿತ್ರ ಸಾಗುತ್ತದೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು ಎಲ್ಲವೂ ಭಿನ್ನವಾಗಿ ಮೂಡಿಬಂದಿದೆ. ಎಪ್ರಿಲ್‌ನಲ್ಲಿ ಚಿತ್ರ ಬಿಡುಗಡೆಗೆ ತಯಾರಿ ನಡೆದಿದೆ ಎಂದರು.

    Click here

    Click here

    Click here

    Click Here

    Call us

    Call us

    ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್‌ನ ಸಂಸ್ಥಾಪಕಾಧ್ಯಕ್ಷೆ ಶಾಂತಾ ಎಸ್. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಧನ್ಯವಾದಗೈದರು. ಬಳಿಕ ಖ್ಯಾತ ಗಾಯಕರಾದ ಮೆಹಬೂಬ್ ಸಾಬ್, ಡಾ. ಅಭಿಷೇಕ್ ರಾವ್, ದೀಪಿಕಾ ಶ್ರೀಕಾಂತ್ ಅವರಿಂದ ಸಂಗೀತ ಸಂಜೆ ಕಾರ್ಯಕ್ರಮ ಜರುಗಿತು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    4 × 4 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.