Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭೋಜು ಹಾಂಡರ ನೆನಪಿನಲ್ಲಿ ‘ಬಣ್ಣದ ಬೆಸುಗೆ’ ನಿರಂತರವಾಗಲಿ
    ಊರ್ಮನೆ ಸಮಾಚಾರ

    ಭೋಜು ಹಾಂಡರ ನೆನಪಿನಲ್ಲಿ ‘ಬಣ್ಣದ ಬೆಸುಗೆ’ ನಿರಂತರವಾಗಲಿ

    Updated:20/02/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಜನಮೆಚ್ಚಿದ ಶಿಕ್ಷಕರಾಗಿದ್ದ ಭೋಜು ಹಾಂಡರು ನಮ್ಮನ್ನಗಲಿ ವರುಷ ಸಂದರೂ ಅವರ ನೆನಪು ಇನ್ನೂ ಹಸಿರಾಗಿದೆ. ಇಂದು ಭೋಜು ಹಾಂಡರ ನೆನಪಲ್ಲೇ ನಾವು ಬಣ್ಣದ ನೆನಪು ಮಾಡಿಕೊಳ್ಳಬೇಕಾಗಿದೆ. ಭಾವಕ್ಕೆ ಬಣ್ಣದ ಲೇಪನ ಮಾಡಿದವರು ಭೋಜ ಹಾಂಡರು. ಈ ಬಣ್ಣದ ಬೆಸುಗೆ ನಿರಂತರವಾಗಿ ಮುನ್ನಡೆಯಲಿ ಎಂದು ಸಮುದಾಯ ಕುಂದಾಪುರ ಕಾರ್ಯದರ್ಶಿ, ಶಿಕ್ಷಕ ಸದಾನಂದ ಬೈಂದೂರು ನುಡಿದರು.

    Click Here

    Call us

    Click Here

    ಜ್ಞಾನ ಯುವಜನ ಹೆಮ್ಮಾಡಿ ಇದರ ಆಶ್ರಯದಲ್ಲಿ ಪ್ರಾಥಮಿಕ ಶಾಲೆ ಹೆಮ್ಮಾಡಿ ಇದರ ಸಭಾಂಗಣದಲ್ಲಿ ನಡೆದ ಬಣ್ಣದ ಲೋಕದ ಗಾರುಡಿಗ ದಿವಂಗತ ಭೋಜು ಹಾಂಡರ ನೆನಪಿನ ಕಾರ್ಯಕ್ರಮ ಚಿತ್ರಕಲಾ ಸ್ಪರ್ಧೆ ’ಬಣ್ಣದ ಬೆಸುಗೆ-2018’ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

    ಭೋಜ ಹಾಂಡರು ವೃತ್ತಿಯನ್ನೇ ತನ್ನ ಪ್ರವೃತ್ತಿಯನ್ನಾಗಿಸಿಕೊಂಡವರು. ಅವರ ವೃತ್ತಿಯೇ ಅವರಿಗೆ ಇಂದು ಇಷ್ಟೊಂದು ಜನ ಗೌರವ ಕೊಡಲು ಸಾಧ್ಯವಾಯಿತು. ಒಂದೊಳ್ಳೆ ಶಿಕ್ಷಕನಿಗಿರಬೇಕಾದ ಎಲ್ಲಾ ಗುಣಗಳು ಭೋಜ ಹಾಂಡರಲ್ಲಿದ್ದವು. ಬಣ್ಣದ ಹುಡುಕಾಟದಲ್ಲಿ ಏನೋ ಒಂದು ಅವ್ಯಕ್ತವಾದ ಸಂತೋಷ ಅಡಗಿದೆ ಎನ್ನುವುದನ್ನು ತಮ್ಮ ಶಿಷ್ಯಂದಿರಿಗೆ ಮನವರಿಕೆ ಮಾಡಿಕೊಟ್ಟಿದ್ದರು. ಭೋಜು ಹಾಂಡರ ಗರಡಿಯಲ್ಲಿ ಫಳಗಿ ಬಂದ ವಿದ್ಯಾರ್ಥಿಗಳು ಇಂದು ಭೋಜು ಹಾಂಡರಿಗಿಂತ ಹೆಚ್ಚು ಸಂಬಳವನ್ನು ಪಡೆಯುತ್ತಿದ್ದಾರೆ. ಈ ಸಮಯದಲ್ಲಿ ಅವರು ನಮ್ಮ ಜೊತೆ ಇರಬೇಕಿತ್ತು ಎಂದು ಶಿಕ್ಷಕ ಸದಾನಂದ ಬೈಂದೂರು ಹೇಳಿದರು.

    ಸದಾ ಪಾದರಸದಂತಹ ವ್ಯಕ್ತಿತ್ವದ ಭೋಜು ಹಾಂಡರು ಬಹಳ ಶಿಸ್ತಿನ ಜೀವ ನಡೆಸಿದ್ದು, ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕರಾಗಿದ್ದರು. ವಿದ್ಯಾರ್ಥಿಗಳ ಏಳಿಗೆಗಾಗಿ ಶ್ರಮಿಸಿದ ಅವರು ತಮ್ಮ ವೃತ್ತಿ ಜೀವನದಲ್ಲಿ ಶಿಕ್ಷಕರನ್ನೂ ಬೆಳೆಸಿದ್ದಾರೆ. ಭೋಜು ಹಾಂಡರು ಕಲೆಯನ್ನು ಪ್ರೀತಿಸುತ್ತಿದ್ದು, ಆ ಕಲೆಯನ್ನು ಎಲ್ಲರಿಗೂ ತಲುಪಿಸಬೇಕೆಂಬ ಮಹಹಾದಾಸೆ ಇಟ್ಟುಕೊಂಡಿದ್ದರು ಎಂದು ಅವರು ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿತ್ರಕಲಾ ಶಿಕ್ಷಕ ಸುರೇಶ ಹೆಮ್ಮಾಡಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮಪಂಚಾಯತ್ ಸದಸ್ಯ ಆನಂದ ಪಿಎಚ್, ಯೋಗ ಶಿಕ್ಷಕ ಪ್ರವೀಣ್ ಕುಮಾರ್ ಹೆಗ್ಡೆ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಅಶೋಕ ಹಟ್ಟಿಯಂಗಡಿ, ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಭಂಡಾರಿ, ಭೋಜು ಹಾಂಡರ ಪುತ್ರರಾದ ರಾಕೇಶ್ ಹಾಂಡ, ರಾಜೇಶ್ ಹಾಂಡ ಹಾಗೂ ಪುತ್ರಿ ಕುಮಾರಿ ರೂಪಶ್ರೀ ಹಾಂಡ ಇದ್ದರು.

    Click here

    Click here

    Click here

    Call us

    Call us

    ಜ್ಞಾನ ಯುವಜನ ಸಮಿತಿಯ ಹರೀಶ್ ಹೆಮ್ಮಾಡಿ ಸ್ವಾಗತಿಸಿದರು. ವಿಘ್ನೇಶ್ ಹೆಮ್ಮಾಡಿ ಧನ್ಯವಾದವಿತ್ತರು. ಪತ್ರಕರ್ತ ಶ್ರೀಕಾಂತ ಹೆಮ್ಮಾಡಿ ಪ್ರಸ್ತಾಪಿಸಿ, ನಿರೂಪಿಸಿದರು.

    ಕಾರ್ಯಕ್ರಮದ ಮೊದಲು ಭೋಜು ಹಾಂಡರ ಭಾವಚಿತ್ರಕ್ಕೆ ದೀಪ ಬೆಳಗಿಸಿ, ಶ್ರದ್ದಾಂಜಲಿ ಅರ್ಪಿಸಿ, ಪುಷ್ಪ ನಮಸ ಸಲ್ಲಿಸಲಾಯಿತು. ಪ್ರಾಥಮಿಕ ಮಕ್ಕಳಿಗಾಗಿ ಏರ್ಪಡಿಸಲಾಗಿದ್ದ ಚಿತ್ರಕಲಾ ಸ್ಪರ್ಧೆಯನ್ನು ಭೋಜು ಹಾಂಡರ ಪುತ್ರ ರಾಕೇಶ್ ಹಾಂಡ ಚಿತ್ರ ಬಿಡಿಸುವುದುರ ಮೂಲಕ ಚಾಲನೆ ನೀಡಿದರು. ಸುಮಾರು ೬೦ ವಿದ್ಯಾರ್ಥಿಗಳು ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಶಾಶ್ವತ ಫಲಕ ನೀಡಿ ಗೌರವಿಸಲಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.