Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ್ರಧಾನಿ ಮೋದಿ ಕೊಟ್ಟ ಭರವಸೆ ಈಡೇರಿಸುವಲ್ಲಿ ವಿಫಲ: ಎಐಸಿಸಿ ಕಾರ‍್ಯದರ್ಶಿ ವಿಷ್ಣುನಾಥನ್
    ಊರ್ಮನೆ ಸಮಾಚಾರ

    ಪ್ರಧಾನಿ ಮೋದಿ ಕೊಟ್ಟ ಭರವಸೆ ಈಡೇರಿಸುವಲ್ಲಿ ವಿಫಲ: ಎಐಸಿಸಿ ಕಾರ‍್ಯದರ್ಶಿ ವಿಷ್ಣುನಾಥನ್

    Updated:21/02/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ದೇಶದ ಪ್ರಧಾನಿ ಪ್ರತಿಯೊಬ್ಬ ಪ್ರಜೆಗೂ 15 ಲಕ್ಷ ಹಣ ಕೊಡುತ್ತೇನೆ ಎಂದರು. ಕೋಟಿ ಲೆಕ್ಕದಲ್ಲಿ ಉದ್ಯೋಗ ಕೊಡುವ ಭರವಸೆ ನೀಡಿದರು, ಆದರೆ ಪದವೀಧರ ಬೋಂಡಾ, ಎಂಬಿಬಿಎಸ್ ಬೋಂಡ, ಎಂಬಿಎ ಬೋಂಡ, ಬಿಕಾಂ ಬೋಂಡ ಮಾರುವಂತೆ ಮಾಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ‍್ಯದರ್ಶಿ ವಿಷ್ಣುನಾಥನ್ ಟೀಕಿಸಿದರು.

    Click Here

    Call us

    Click Here

    ಕುಂದಾಪುರ ಆರ್.ಎನ್.ಶೆಟ್ಟಿ ಸಭಾಂಗಣದಲ್ಲಿ ನಡೆದ ಭೂತ್ ಮಟ್ಟದ ಕಾಂಗ್ರೆಸ್ ಕಾರ‍್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು ರೂಢಿಯಲಿ ಆಡದೇ ಮಾಡುವವನು ಉತ್ತಮನು, ಆಡಿಯೂ ಮಾಡದವನು ಮಧ್ಯಮನು, ಆಡಿಯೂ ಮಾಡದವರು ರೂಢಿಯೊಳು ಅಧಮರು! ಸಿದ್ದರಾಮಯ್ಯ ಆಡದೇ ಮಾಡುವ ಮೂಲಕ ಉತ್ತಮರಾದರೆ, ನರೇಂದ್ರ ಮೋದಿ ಆಡಿಯೂ ಮಾಡದೆ ರೂಢಿಯಲಿ..? ಎಂದು ನರೇಂದ್ರ ಮೋದಿ ಅವರಿಗೆ ಟಾಂಗ್ ನೀಡಿದರು.

    ರಾಜ್ಯದಲ್ಲಿ 53 ಸಾವಿರ ಭೂತಮಟ್ಟದ ಕಮಿಟಿ ರಚಿಸಿ, ಮನೆ ಮನೆಗೆ ಕಾಂಗ್ರೆಸ್ ಕಾರ‍್ಯಕ್ರಮ ಯಶಸ್ವಿಗೊಳಿಸಿದೆ. ಭೂತಮಟ್ಟದಲ್ಲಿ ಪಕ್ಷ ಗಟ್ಟಿಯಾದರೆ ಮಾತ್ರ ಚುನಾವಣೆ ಗೆಲ್ಲಲು ಸಾಧ್ಯವಿದ್ದು, ಪ್ರತಿ ಮನೆಯ ಜೊತೆ ಲಿಂಕ್ ಬೆಳೆಸುವ ಮೂಲಕ ಕುಂದಾಪುರದಲ್ಲಿ ಕಾಂಗ್ರೆಸ್ ಗೆಲವಿಗೆ ಕಾರ‍್ಯಕರ್ತರು ಶ್ರಮಿಸುವಂತೆ ಕರೆ ನೀಡಿದರು. ರಾಜ್ಯದ ಜನರಿಗೆ ಹಲವರು ಭ್ಯಾಗ್ಯಗಳ ಕೊಟ್ಟ ರಾಜ್ಯ ಸರ್ಕಾರ ದೇಶಕ್ಕೆ ಮಾಡಲ್ ಸರ್ಕಾರ ಎನ್ನಿಸಿಕೊಂಡಿದೆ. 2013ರ ಚುನಾವಣೆಯಲ್ಲಿ ಕೊಟ್ಟ ಎಲ್ಲಾ ಭರವಸೆ ಈಡೇರಿಸಿ ರಾಜ್ಯದ ಜನರಿಗೆ ಹೊಸ ಭರವಸೆ ಕೊಟ್ಟ ಪ್ರಥಮ ಸರ್ಕಾರ ಕಾಂಗ್ರೆಸ್ ಎಂದರು.

    ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್ ಅಧ್ಯಕ್ಷತೆ ವಹಿಸಿ, ಸ್ವಾಗತಿಸಿದರು. ಕ್ಷೇತ್ರ ಉಸ್ತುವಾರಿ ಜಿ.ಎಂ.ಭಾವ, ರಾಜ್ಯ ಇಂಟೆಕ್ ಅಧ್ಯಕ್ಷ ರಾಕೇಶ್ ಮಲ್ಲಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ, ಕಾಂಗ್ರೆಸ್ ಮುಖಂಡರಾದ ಮಂಜುನಾಥ ಭಂಡಾರಿ, ಮಾಣಿ ಗೋಪಾಲ, ಜಿಲ್ಲಾ ಕೆಡಿಪಿ ಸದಸ್ಯ ರಾಜು ಪೂಜಾರಿ, ಮಮತಾ ಗಟ್ಟಿ, ದೇವಖಿ ಸಣ್ಣಯ್ಯ ಹಿರಿಯಣ್ಣ ಚಾತ್ರಬೆಟ್ಟು, ಅಮೃತ್ ಶೆಣೈ, ಹಾರೂನ್ ಸಾಹೇಬ್, ಕೆದೂರು ಸದಾನಂದ ಶೆಟ್ಟಿ,  ವಿಕಾಸ್ ಹೆಗ್ಡೆ, ಜ್ಯೋತಿ ಪುತ್ರನ್, ದೇವಾನಂದ ಶೆಟ್ಟಿ, ಇಶ್ಛಿತ್ ಶೆಟ್ಟಿ ಮುಂತಾದವರು ಇದ್ದರು. ಬ್ಲಾಕ್ ಕಾಂಗ್ರೆಸ್ ಕಾರ‍್ಯದರ್ಶಿ ನಾರಾಯಣ ಆಚಾರ್ಯ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    fifteen + 12 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.