Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಿಜೂರು ಗ್ರಾ.ಪಂ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡನೆ ಶಾಸಕರ ಪಿತೂರಿ: ಬಿಎಂಎಸ್ ಆರೋಪ
    ಊರ್ಮನೆ ಸಮಾಚಾರ

    ಬಿಜೂರು ಗ್ರಾ.ಪಂ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡನೆ ಶಾಸಕರ ಪಿತೂರಿ: ಬಿಎಂಎಸ್ ಆರೋಪ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಮಗ್ದರ ಮೇಲೆ ಗಧಾಪ್ರಹಾರ ಒಳ್ಳೆಯ ಬೆಳವಣಿಗೆಯಲ್ಲ. ಬಿಜೂರು ಗ್ರಾಮ ಪಂಚಾಯತ್‌ನಲ್ಲಿ ಅಧ್ಯಕ್ಷೆ ಲೋಲಾಕ್ಷಿ ದೇವಾಡಿಗ ವಿರುದ್ದ ಅವಿಶ್ವಾಸ ಮಂಡನೆ ಶಾಸಕ ಕೆ. ಗೋಪಾಲ ಪೂಜಾರಿಯವರ ಷಡ್ಯಂತ್ರದ ಒಂದು ಭಾಗ. ಅವರ ಈ ನಡೆಯಿಂದ ಹಿಂದುಳಿದ ದೇವಾಡಿಗ ಸಮುದಾಯಕ್ಕೆ ಮಾಡಿದ ಅಪಚಾರವಾಗಿದೆ ಎಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಬಿ. ಎಂ. ಸುಕುಮಾರ್ ಶೆಟ್ಟಿ ಆರೋಪಿಸಿದರು.

    Click Here

    Call us

    Click Here

    ಬೈಂದೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸತ್ಯಕ್ಕೆ ಎಂದಿಗೂ ಜಯವಿದೆ ಎಂಬುವುದು ಇಂದಿನ ಈ ಪ್ರಕರಣದಿಂದ ಸಾಬೀತಾಗಿದೆ. ಯಾವುದೇ ತೊಡಕಿಲ್ಲದೇ ಸಸೂತ್ರವಾಗಿ ಆಡಳಿತ ನಡೆಸುತ್ತಿರುವವ ಅಧ್ಯಕ್ಷೆಯನ್ನು ಅಧಿಕಾರದಿಂದ ಕೆಳಗಿಳಿಸುವ ಉದ್ದೇಶದಿಂದ ಇಲ್ಲಿನ ಶಾಸಕರು ಅವಿಶ್ವಾಸ ಗೊತ್ತುವಳಿಯನ್ನು ಮಂಡಿಸುವ ಸಂಚು ರೂಪಿಸಿರುವುದು ವಿಷಾದನೀಯ. ಬೈಂದೂರು ಜಿಲ್ಲೆಯಲ್ಲಿಯೇ ಅತ್ಯಂತ ಹಿಂದುಳಿದ ಕ್ಷೇತ್ರವಾಗಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ೫ ನದಿಗಳು ಹರಿಯುತ್ತಿದ್ದರೂ, ಇನ್ನೂ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗದಿರುವುದು ಈ ಸರ್ಕಾರದ ಆಡಳಿತಕ್ಕೆ ಹಿಡಿದ ಕನ್ನಡಿಯಾಗಿದೆ. ಕಳೆದ ಮೂರು ತಿಂಗಳಿಂದ ಕ್ಷೇತ್ರದ ಅಭಿವೃದ್ಧಿ ಹೆಸರಿನಲ್ಲಿ ಜನರಿಗೆ ದಾರಿತಪ್ಪಿಸುವ ಕೆಲಸವಾಗುತ್ತಿದೆ. ಅಭಿವೃದ್ಧಿ ಕೇವಕ ಪ್ಲೆಕ್ಸ್, ಬ್ಯಾನರ್‌ಗಳಿಗಷ್ಟೇ ಸೀಮಿತವಾಗಿದೆ.

    ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದುತ್ವ, ರಾಷ್ಟ್ರೀಯ ವಿಚಾರಗಳನ್ನು ಕಟ್ಟಿಹಾಕುವ ವ್ಯವಸ್ಥಿತ ಸಂಚು ನಡೆಯುತ್ತಿದೆ. ಪೋಲಿಸ್ ಠಾಣೆಗಳು ಕಾಂಗ್ರೆಸ್ ಆಫೀಸ್‌ಗಳಾಗಿವೆ. ಅಮಾಯಕರನ್ನು ಒತ್ತಾಯ ಪೂರ್ವಕವಾಗಿ ಅಪರಾಧಿಗಳನ್ನಾಗಿ ಮಾಡಲಾಗುತ್ತಿದೆ ಎಂದು ಗಂಗೊಳ್ಳಿ ಬೆಂಕಿ ಪ್ರಕರಣವನ್ನು ಉದಾಹರಿಸಿ ಆಕ್ರೋಶ ವ್ಯಕ್ತಪಡಿಸಿದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರಿನಲ್ಲಿ ಬಿಜೆಪಿ ಜಯಗಳಿಸಲಿದೆ ಎಂಬ ವಿಶ್ವಾಸವ್ಯಕ್ತಪಡಿಸಿದ ಅವರು ಮಾ.೨೪ ಕ್ಕೆ ಪಕ್ಷದ ಅಭ್ಯರ್ಥಿ ಅಧೀಕೃತವಾಗಿ ಘೋಷಣೆಯಾಗುವ ಸಾಧ್ಯತೆಯಿದ್ದು, ಈಗಾಗಲೇ ಬೂತ್ ಮಟ್ಟದಿಂದಲೇ ಪಕ್ಷ ಸಂಘಟನಾ ಕಾರ್ಯ ನಡೆಯುತ್ತಿದೆ ಎಂದರು.

    ಜಿಪಂ ಸದಸ್ಯ ಸುರೇಶ ಬಟವಾಡಿ ಮಾತನಾಡಿ, ಬೈಂದೂರಿನಲ್ಲಿ ಮೇಲ್ಸೆತುವೆ ನಿರ್ಮಾಣಕ್ಕಾಗಿ ಸಂಸದರಿಗೆ ಮನವಿ ಮಾಡಿದ್ದು, ಅವರು ಅದಕ್ಕೆ ಸಕರಾತ್ಮಕವಾಗಿ ಸ್ಪಂಧಿಸಿದ್ದಾರೆ, ರಾಷ್ಟ್ರೀಯ ಹೆದ್ದಾರಿ ಚತುಷ್ಪತ ಕಾಮಗಾರಿ ಕಳಪೆಯಾಗಿದ್ದು ಈ ಬಗ್ಗೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದರು.

    ಎಪಿಎಂಸಿ ಸದಸ್ಯ ಮಂಜು ದೇವಾಡಿಗ, ಬಿಜೆಪಿ ಮುಖಂಡರಾದ ದೀಪಕ್ ಕುಮಾರ ಶೆಟ್ಟಿ, ನವೀನ್‌ಚಂದ್ರ ಉಪ್ಪುಂದ, ಬಾಲಚಂದ್ರ ಭಟ್, ಪ್ರಿಯದರ್ಶಿನಿ ದೇವಾಡಿಗ, ದಿವಾಕರ ಶೆಟ್ಟಿ, ಶರತ್ ಕುಮಾರ್ ಶೆಟ್ಟಿ, ರವಿ, ಎ. ಆನಂದ ಖಾರ್ವಿ, ಗಣೇಶ ಯಡಿಯಾಳ್, ರಮೇಶ ಪೂಜಾರಿ, ರಾಜೇಂದ್ರ ಬಿಜೂರು, ಸುರೇಶ ಬಿಜೂರು, ಜಯರಾಮ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    19 + 4 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.