Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮರವಂತೆ: ಗ್ರಾಮಸಭೆಯಲ್ಲಿ ಪಂಚಾಯಿತಿ ಮೌನವ್ರತ
    Uncategorized

    ಮರವಂತೆ: ಗ್ರಾಮಸಭೆಯಲ್ಲಿ ಪಂಚಾಯಿತಿ ಮೌನವ್ರತ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಬೈಂದೂರು : ಗ್ರಾಮಸಭೆಯಲ್ಲಿ ಸಾರ್ವಜನಿಕರು ಮಂಡಿಸುವ ನಿರ್ಣಯ ಮತ್ತು ಕೇಳುವ ಪ್ರಶ್ನೆಗಳನ್ನು ಏಳು ದಿನ ಮೊದಲು ಲಿಖಿತವಾಗಿ ನೀಡಬೇಕು ಎಂದು ಗ್ರಾಮ ಪಂಚಾಯಿತಿ ಕರಪತ್ರದಲ್ಲಿ ಮುದ್ರಿಸಿದ ಸೂಚನೆಗೆ ಮಂಗಳವಾರ ನಡೆದ ಮರವಂತೆ ಗ್ರಾಮ ಪಂಚಾಯಿತಿಯಲ್ಲಿ ತೀವ್ರ ವಿರೋಧ ವ್ಯಕ್ತವಾಯಿತು. ಮಾಜಿ ಅಧ್ಯಕ್ಷ ಎಸ್. ಜನಾರ್ದನ ಈ ವಿಷಯ ಎತ್ತಿದಾಗ ಶೇಖರ ಕುಂದರ್ ಇದು ಜನರ ಬಾಯಿ ಮುಚ್ಚಿಸುವ ಯತ್ನ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

    Click Here

    Call us

    Click Here

    ನಿಯಮದಂತೆ ವಸತಿ, ವಾರ್ಡ್‌ಸಭೆಗಳನ್ನು ಗ್ರಾಮಸಭೆಗಿಂತ ತಿಂಗಳು ಮೊದಲು ನಡೆಸಬೇಕು, ವಿಶೇಷ ಆಯವ್ಯಯ ಗ್ರಾಮಸಭೆ ನಡೆಸಬೇಕು, ಎಲ್ಲ ವಾಣಿಜ್ಯ ಸ್ಥಾವರಗಳು ಅನುಮತಿ ಪಡೆದುಕೊಳ್ಳಬೇಕು, ನಿಯಮದಂತೆ ತೆರಿಗೆ ದರ ಹೊರಿಸಬೇಕು, ಫ್ಲೆಕ್ಸ್‌ಗಳ ಬಳಕೆ ತಡೆಗಟ್ಟಬೇಕು, ಪ್ರಚಾರ ಫಲಕಗಳ ಮೇಲೆ ಶುಲ್ಕ ವಿಧಿಸಬೇಕು, ಗ್ರಾಮವನ್ನು ಪ್ಲಾಸ್ಟಿಕ್‌ಮುಕ್ತಗೊಳಿಸಬೇಕು ಎಂಬ ಸಲಹೆಗಳಿಗೆ ಅಧ್ಯಕ್ಷರು, ಸದಸ್ಯರು ಮತ್ತು ಅಧಿಕಾರಿಗಳಿಂದ ಮೌನ ಪ್ರತಿಕ್ರಿಯೆ ವ್ಯಕ್ತವಾಯಿತು. ಎರಡು ವರ್ಷಗಳ ಹಿಂದೆ ಅಳವಡಿಸಿದ್ದ ಶುದ್ಧ ಕುಡಿಯುವ ನೀರು ಘಟಕ ಎಂದೋ ಕೆಟ್ಟು ಹೋಗಿದ್ದರೂ ಕ್ರಮ ಕೈಗೊಳ್ಳದಿರುವ ಪ್ರಶ್ನೆಗೂ ಉತ್ತರ ದೊರೆಯಲಿಲ್ಲ. ಎಂ. ಶಂಕರ ಖಾರ್ವಿ ಸ್ಮಶಾನ ನಿರ್ಮಾಣದ ಅಗತ್ಯದ ಕುರಿತು, ಗಣಪತಿ ಖಾರ್ವಿ ಎಲ್ಲ ಅನುದಾನದ ವಿವರ ಇರುವ ಫಲಕ ಪ್ರದರ್ಶಿಸುವ ಕುರಿತು, ವಿಜಯ ಕ್ರಾಸ್ತಾ ಲೋ ವೋಲ್ಟೇಜ್ ಕುರಿತು, ದೇವಿದಾಸ ಶ್ಯಾನುಭಾಗ್ ಮೆಸ್ಕಾಂ ಬಿಲ್ಲಿಂಗ್ ನ್ಯೂನತೆ ಕುರಿತು, ರಮೇಶ ವಿದ್ಯುತ್ ಸಂಪರ್ಕ ಕುರಿತು, ರಾಜು, ಸಂತೋಷ್ ಗಾಂಧಿನಗರವನ್ನು ಎರಡು ವಾರ್ಡ್‌ಗಳ ನಡುವೆ ವಿಭಾಗಿಸಿರುವುದರ ಕುರಿತು ಗಮನ ಸೆಳೆದರು.

    ಜಿಲ್ಲಾ ಪಂಚಾಯಿತಿ ಸದಸ್ಯ ಕೆ. ಬಾಬು ಶೆಟ್ಟಿ ಫ್ಲೆಕ್ಸ್‌ಗಳ ಕುರಿತು ಗ್ರಾಮಸ್ಥರ ನಿಲುವನ್ನು ಬೆಂಬಲಿಸಿದರು. ಗ್ರಾಮದಲ್ಲಿ ಯಾವುದೇ ಕಾಮಗಾರಿ ನಡೆಸುವ ಮುನ್ನ ಸಂಬಂಧಿಸಿದವರು ಗ್ರಾಮ ಪಂಚಾಯಿತಿಗೆ ಸೂಕ್ತ ಮಾಹಿತಿ ನೀಡದಿದ್ದರೆ, ಕಾಮಗಾರಿ ನಡೆಸಲು ಬಿಡಬಾರದು ಎಂದರು.

    ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುಸಜ್ಜಿತ ಕಟ್ಟಡ ನಿರ್ಮಿಸುವ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು. ತಾಲ್ಲೂಕು ಪಂಚಾಯಿತಿ ಸದಸ್ಯ ಜಗದೀಶ ಪೂಜಾರಿ ತಾಲ್ಲೂಕು ಪಂಚಾಯಿತಿಯಿಂದ ನೀಡಲಾದ ಅನುದಾನದ ವಿವರ ನೀಡಿದರು.

    ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯಿತಿ ಸದಸ್ಯೆ ಅನಿತಾ ಆರ್. ಕೆ. ಒಂದು ವರ್ಷದ ಹಿಂದೆ ನಿರ್ಮಿಸಿದ್ದ ತ್ಯಾಜ್ಯ ನಿರ್ವಹಣಾ ಘಟಕವನ್ನು ಈಗ ಅಭಿವೃದ್ಧಿ ಪಡಿಸಿದ್ದು, ಬುಧವಾರ ಕಾರ್ಯಾರಂಭಿಸುವುದು ಎಂದರು. ಕಾರ್ಯದರ್ಶಿ ದಿನೇಶ್ ಶೇರೆಗಾರ್ ಸ್ವಾಗತಿಸಿ, ವಂದಿಸಿದರು. ಕರ ಸಂಗ್ರಾಹಕ ಶೇಖರ್ ಮರವಂತೆ ವರದಿ ಮಂಡಿಸಿದರು. ವೈದ್ಯಾಧಿಕಾರಿ ಸನ್ಮಾನ್ ಶೆಟ್ಟಿ, ಮೆಸ್ಕಾಂ ಅಧಿಕಾರಿ ವಿಜಯೇಂದ್ರ, ಪಶು ವೈದ್ಯ ಅರುಣ್, ಅಂಗನವಾಡಿ ಮೇಲ್ವಿಚಾರಕಿ ಸವಿತಾ ಶೆಟ್ಟಿ, ಗ್ರಾಮ ಕರಣಿಕ ಮಹಾಂತೇಶ್ ಮಾಹಿತಿ ನೀಡಿದರು. ಉಪಾಧ್ಯಕ್ಷ ಗಣೇಶ ಪೂಜಾರಿ, ಸದಸ್ಯರು ಮಾರ್ಗದರ್ಶಿ ಅಧಿಕಾರಿ ಡಾ. ಶಂಕರ ಶೆಟ್ಟಿ, ಎಎಸ್‌ಐ ವೆಂಕಟೇಶ ಗೊಲ್ಲ, ಅಭಿವೃದ್ಧಿ ಅಧಿಕಾರಿ ವೀರಶೇಖರ ಇದ್ದರು.

    Click here

    Click here

    Click here

    Click Here

    Call us

    Call us

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    1 × 3 =

    Call us

    Click Here

    Call us

    Call us

    Call us
    Highest Viewed Recently
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.