Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ‘ನಮ್ಮ ಕುಂದಾಪುರ’ ಫೇಸ್ಬುಕ್ ಗುಂಪಿನ ಸಹಮಿಲನ
    ಕುಂದಾಪ್ರದ್ ಸುದ್ಧಿ

    ‘ನಮ್ಮ ಕುಂದಾಪುರ’ ಫೇಸ್ಬುಕ್ ಗುಂಪಿನ ಸಹಮಿಲನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಬೆಂಗಳೂರು,ಮೇ.3: ಇಂದು ಬೆಂಗಳೂರಿನಲ್ಲಿಯೂ ಕುಂದಾಪ್ರ ಕನ್ನಡದ ಸದ್ದು ಕೇಳುತ್ತಿತ್ತು. ಜಿ.ಪಿ ನಗರದ ವಿಜಯ ಬ್ಯಾಂಕ್ ಕಾಲನಿಯಲ್ಲಿ ನಡೆದ ‘ನಮ್ಮ ಕುಂದಾಪುರ’ ಫೇಸ್ಬುಕ್ ಗುಂಪಿನ 5ನೇ ವರ್ಷದ ವಾರ್ಷಿಕೋತ್ಸವ ಹಾಗೂ ಗುಂಪಿನ ಸದಸ್ಯರ ಸ್ನೇಹಮಿಲನ ಕಾರ್ಯಕ್ರಮದಲ್ಲಿ ಒಂದಿಷ್ಟು ಕುಂದಾಪುರಿಗರು ಸೇರಿ ತಮ್ಮೂರಿನವರನ್ನು ನೇರವಾಗಿಯೇ ಕಂಡು ಮಾತನಾಡಿ ಸಂಭ್ರಮಿಸಿದರು.

    Click Here

    Call us

    Click Here

    ನಮ್ಮ ಕುಂದಾಪುರ ಗುಂಪಿನ ಸಂಸ್ಥಾಪಕ ರಾಧಾಕೃಷ್ಣ ಶೆಟ್ಟಿ ಸದಸ್ಯರನ್ನು ಸ್ವಾಗತಿಸುತ್ತಾ ಮಾತನಾಡಿ ಇಂದು ನಮ್ಮ ಕುಂದಾಪುರ ಗುಂಪು ಸ್ಥಾಪನೆಯಾಗಿ ಐದು ವರ್ಷವಾಗಿದ್ದು ಸದ್ಯ 55,000ಕ್ಕೂ ಮಿಕ್ಕಿ ಸದಸ್ಯರಿದ್ದಾರೆ. ಈವರೆಗೆ ವಿವಿಧ ಕಡೆಗಳಲ್ಲಿ ಗುಂಪಿನ ಸದಸ್ಯರ 11ಕ್ಕೂ ಹೆಚ್ಚು ಸಹಮಿಲನ ನಡೆದಿದೆ. ಕುಂದಾಪುರದ ಭಾಷೆ, ಸಂಸ್ಕೃತಿಗೆ ಪೂರಕವಾದ ಮಾಹಿತಿಗಳನ್ನು ಗುಂಪಿನಲ್ಲಿ ಮತ್ತಷ್ಟು ಹಂಚುವುದರ ಮೂಲಕ ನಮ್ಮೂರಿಗೆ ವಿಶ್ವಮಟ್ಟದಲ್ಲಿ ಮಾನ್ಯತೆ ದೊರಕಿಸಿಕೊಡುವ ಗುರಿ ನಮ್ಮದಾಗಿರಲಿ ಎಂದು ಆಶಿಸಿದರು.

    ಸಹಮಿಲನದಲ್ಲಿ 55ಕ್ಕೂ ಹೆಚ್ಚು ಗುಂಪಿನ ಸದಸ್ಯರು ಭಾಗವಹಿಸಿದ್ದರು. ಪರಸ್ಪರ ಪರಿಚಯ ಮಾಡಿಕೊಂಡ ಸದಸ್ಯರು ನಂತರ ಆಟ, ಊಟ, ಮಾತಿನಲ್ಲಿ ತಲ್ಲೀನರಾದರು. ಕುಂದಾಪುರದಲ್ಲಿನ ತಮ್ಮ ಬಾಲ್ಯದ ದಿನಗಳನ್ನು ಮೆಲಕು ಹಾಕುತ್ತಾ, ಗುಂಪಿನ ಚಟುವಟಿಕೆಗಳ ಬಗ್ಗೆ ಚರ್ಚಿಸುತ್ತಾ, ಕುಂದಾಪ್ರ ಕನ್ನಡವನ್ನು ಅರೆಬರೆಯಾಗಿ ಮಾತನಾಡುತ್ತಾ ಸಂಭ್ರಮಿಸಿದರು.

    ಮನೋರಂಜನೆಯ ಭಾಗವಾಗಿ ನಾಗ್ ದೇವರ ದರ್ಶನ, ಯಕ್ಷಗಾನ ಕುಣಿತ, ನೃತ್ಯ, ಮೂಕಾಭಿನಯ, ವಿವಿಧ ಆಟೋಟಗಳು ನಡೆದವು. ಕರುಣಾಕರ ಭಂಡಾರಿಯವರು ವ್ಯವಸ್ಥೆ ಮಾಡಿಸಿದ್ದ ಊಟದಲ್ಲಿ ಕೊಟ್ಟೆ ಕಡ್ಬು ವಿಶೇಷವಾಗಿತ್ತು.

    ಈ ಭಾರಿಯ ಸಹಮಿಲನದಲ್ಲಿ ಸುವರ್ಣ ವಾಹಿನಿಯ ವಾರ್ತಾವಾಚಕ ರಾಘವೇಂದ್ರ ಕಾಂಚನ್, ವಿಜಯವಾಣಿಯ ಹಿರಿಯ ವರದಿಗಾರ ರವಿಕಾಂತ್ ಕುಂದಾಪುರ, ಸೌತ್ ಇಂಡಿಯಾ ಕ್ವೀನ್ 2015ರ ವಿಜೇತೆ ಸೌಮ್ಯ ಕಾಂಚನ್, ಸೌತ್ ಇಂಡಿಯಾ ಕ್ವೀನ್ 2015ರ ಸುಂದರ ಕಣ್ಣುಗಳ ವಿಭಾಗದ ವಿಜೇತೆ ಸೀಮಾ ಬುಟೆಲ್ಲೊ, ಬರಹಗಾರ ಭಾಸ್ಕರ್ ಬಂಗೇರ ಸೇರಿದಂತೆ ಅನೇಕ ಖ್ಯಾತನಾಮರು ಭಾಗವಹಿಸಿ ಕಾರ್ಯಕ್ರಮಕ್ಕೆ ರಂಗು ತುಂಬಿದ್ದರು.

    Click here

    Click here

    Click here

    Click Here

    Call us

    Call us

    ಕುಂದಾಪ್ರ ಡಾಟ್ ಕಾಂ ಕಳೆದ ಭಾರಿ ನಮ್ಮ ಕುಂದಾಪುರದ ಬಗ್ಗೆ ಪ್ರಕಟಿಸಿದ ವಿಶೇಷ ಲೇಖನ ಓದಿ > http://bit.ly/Namma-Kundapura 

    New folder Namma kundapura meet5

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025
    Leave A Reply Cancel Reply

    3 − one =

    Call us

    Click Here

    Call us

    Call us

    Call us
    Highest Viewed Recently
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.