Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮರವಂತೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ
    ಊರ್ಮನೆ ಸಮಾಚಾರ

    ಮರವಂತೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಬೈಂದೂರು : ಭಾರತೀಯ ಜನತಾ ಪಕ್ಷ ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ದೇಶದಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ ಎಂದು ಅಪಪ್ರಚಾರ ಮಾಡುತ್ತಿದೆ. ಸ್ವಾತಂತ್ರ್ಯ ಬಂದಾಗ ದೇಶದ ಸ್ಥಿತಿ ಹೇಗಿತ್ತು, ಆ ಬಳಿಕ ಆಗಿರುವ ಬದಲಾವಣೆ ಏನು ಮತ್ತು ಎಷ್ಟು ಎನ್ನುವುದರ ಅರಿವಿಲ್ಲದ ಹೊಸ ತಲೆಮಾರಿನ ಜನ ಅದನ್ನು ನಂಬುತ್ತಿದ್ದಾರೆ. ಜನರಿಗೆ ಸತ್ಯ ತಿಳಿಸಿ, ಬಿಜೆಪಿ ಅಪಪ್ರಚಾರ ಬಯಲುಗೊಳಿಸುವ ಹೊಣೆಯನ್ನು ಕಾಂಗ್ರೆಸ್ ಕಾರ್ಯಕರ್ತರು ನಿರ್ವಹಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ರಾಜ್ಯ ಮತ್ತು ದೇಶದಲ್ಲಿ ಮರುಸ್ಥಾಪಿಸುವ ಕೆಲಸ ಮಾಡಬೇಕು ಎಂದು ಬೈಂದೂರು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು.

    Click Here

    Call us

    Click Here

    ಮರವಂತೆಯಲ್ಲಿ  ನಡೆದ ಪಕ್ಷ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಸ್ವಾತಂತ್ರ್ಯ ದೊರೆತಾಗ ದೇಶ ಆಹಾರ, ವಸತಿ, ರಕ್ಷಣೆ, ಸಂಪರ್ಕವೇ ಆದಿಯಾದ ಎಲ್ಲ ಕ್ಷೇತ್ರಗಳಲ್ಲೂ ಕೊರತೆ ಎದುರಿಸುತ್ತಿತ್ತು. ದೀರ್ಘಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಸೂಕ್ತ ಯೋಜನೆಗಳನ್ನು ರೂಪಿಸಿ ಅನುಷ್ಠಾನಿಸುವ ಮೂಲಕ ಜಗತ್ತಿನ ಮುಂಚೂಣಿಯ ರಾಷ್ಟ್ರಗಳ ಸಾಲಿಗೆ ಸೇರಿಸಿದೆ. ಇದು ಹಿಂದಿನ ಚುನಾವಣೆಯಲ್ಲಿ ದೇಶದ ಜನರನ್ನು ಭಾವನಾತ್ಮಕ ವಿಚಾರಗಳ ಮೂಲಕ ದಾರಿತಪ್ಪಿಸಿ ಅಧಿಕಾರ ಹಿಡಿದ ಬಿಜೆಪಿಯ ಸಾಧನೆ ಅಲ್ಲ ಎಂದು ಅವರು ನುಡಿದರು.

    ಕೇಂದ್ರದ ಮೋದಿ ಸರಕಾರ ಚುನಾವಣಾಪೂರ್ವ ನೀಡಿದ ಭರವಸೆಗಳಾದ ಕಾಳಧನ, ಕಳ್ಳನೋಟು ನಿವಾರಣೆ, ಭಾರತೀಯ ಶ್ರೀಮಂತರು ವಿದೇಶದಲ್ಲಿಟ್ಟುವ ಅಕ್ರಮ ಠೇವಣಿ ತಂದು ಜನರಿಗೆ ವಿತರಣೆ, ಪೆಟ್ರೋಲಿಯಂ ಉತ್ಪನ್ನ ಸೇರಿದಂತೆ ದಿನಬಳಕೆ ಸಾಮಗ್ರಿ ದರ ನಿಯಂತ್ರಣ, ಭಯೋತ್ಪಾದನೆ ನಿಗ್ರಹದಂತಹ ಕ್ರಮ ಈಡೇರಿಲ್ಲ. ರೈತರ ಸಮಸ್ಯೆ ನಿವಾರಣೆ ಆಗಿಲ್ಲ. ಬದಲಾಗಿ ಸರಕಾರ ಬೃಹತುದ್ದಿಮೆದಾರರಿಗೆ ಹೆಚ್ಚು ಸೌಲಭ್ಯ ನೀಡುತ್ತಿದೆ. ಅವರ ಬ್ಯಾಂಕ್ ಸಾಲ ಮನ್ನಾ ಮಾಡಲಾಗುತ್ತಿದೆ ಎಂದು ಅವರು ದೂರಿದರು. ಬಿಜೆಪಿಯ ಮಾತೃ ಸಂಘಟನೆಯಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಿಂದು ರಾಷ್ಟ್ರ ನಿರ್ಮಾಣ, ರಾಮ ಮಂದಿರ ನಿರ್ಮಾಣದಂತಹ ವಿಷಯ ಮುಂದಿಟ್ಟುಕೊಂಡು ಯುವಕರ ತಲೆ ಕೆಡಿಸುತ್ತಿದೆ. ಹಿಂದೆ ಇದೇ ಕ್ಷೇತ್ರದಲ್ಲಿ ಠಿಕಾಣಿ ಹೂಡಿ, ಯುವಕರನ್ನು ಮನೆಮನೆಗಳಿಂದ ಇಟ್ಟಿಗೆ, ಹಣ ಸಂಗ್ರಹಿಸುವುದಕ್ಕೆ ತೊಡಗಿಸಿದ ಆರ್‌ಎಸ್‌ಎಸ್ ಕಾರ್ಯಕರ್ತ ಅನಂತಕುಮಾರ ಹೆಗಡೆ ಇಂದು ಸಂಸದ, ಸಚಿವ ಸ್ಥಾನಕ್ಕೇರಿದರು. ಇಂದೂ ಕೂಡ ಆ ಸಂಸ್ಥೆ ಹಾಗೂ ಬಿಜೆಪಿ ಕೆಳವರ್ಗದ ಹಿಂದು ಯುವಕರನ್ನು ಅಂತಹದೇ ಕೆಲಸಕ್ಕೆ ಬಳಸಿಕೊಂಡು ಅವರ ಭವಿಷ್ಯ ಕಮರುವಂತೆ ಮಾಡುತ್ತಿವೆ. ಇವುಗಳೊಂದಿಗೆ ಕಾಂಗ್ರೆಸ್ ಈ ದೇಶದ ಪ್ರಗತಿಗೆ, ಜನರ ಜೀವನ ಸುಧಾರಣೆಗೆ ಕೈಗೊಂಡ ರಚನಾತ್ಮಕ ಕ್ರಮಗಳನ್ನು ತುಲನೆ ಮಾಡಬೇಕು ಎಂದರು.

    ಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಮತಯಾಚನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜನರಿಗೆ ಕೊಟ್ಟ ಹತ್ತಾರು ಯೋಜನೆಗಳ ಮತ್ತು ಅದರ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ನಾಲ್ಕು ಶಾಸಕ ಅವಧಿಗಳಲ್ಲಿ ಮಾಡಿದ ಅಭಿವೃದ್ಧಿಯ ಸಮರ್ಥನೆ ಇದೆ. ಕಾರ್ಯಕರ್ತರು ಮನೆಮನೆಗೆ ತೆರಳಿ ಇವೆಲ್ಲವನ್ನು ಮತದಾರರಿಗೆ ವಿವರಿಸಿ, ಎಲ್ಲ ವರ್ಗದ ಜನರ ಪರವಾದ ಕೆಲಸ ಮಾಡುತ್ತಿರುವ, ಅಭಿವೃದ್ಧಿಯನ್ನೇ ಮೂಲಮಂತ್ರವಾಗಿ ಸ್ವೀಕರಿಸಿರುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಬೇಕು. ಪ್ರಾಮಾಣಿಕ, ಕೆಲಸಗಾರ, ಸರಳ ಸಜ್ಜನ ಗೋಪಾಲ ಪೂಜಾರಿ ಇನ್ನೊಮ್ಮೆ ಆಯ್ಕೆಯಾಗುವಂತೆ ಮಾಡಬೇಕು ಎಂದು ವಿನಂತಿಸಿದರು. ಕೆ. ಗೋಪಾಲ ಪೂಜಾರಿ, ಎಸ್. ರಾಜು ಪೂಜಾರಿ ಕಾರ್ಯಕರ್ತರು ಶ್ರಮವಹಿಸಿ ಕೆಲಸಮಾಡಿ ಮರವಂತೆಯ ಐದೂ ಬೂತ್‌ಗಳಲ್ಲಿ ಕಾಂಗ್ರೆಸ್‌ಗೆ ಬಹುಮತ ಬರುವಂತೆ ಮಾಡಬೇಕು ಎಂದು ಕೋರಿದರು.

    ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಪುಟ್ಟಯ್ಯ ಪೂಜಾರಿ, ತಾಲೂಕು ಪಂಚಾಯತ್ ಸದಸ್ಯ ಜಗದೀಶ ಪೂಜಾರಿ, ಎಚ್. ಮಂಜಯ್ಯ ಶೆಟ್ಟಿ, ಉಪ್ಪುಂದದ ಸಹಕಾರಿ ಮೋಹನ ಪೂಜಾರಿ, ವಾರ್ಡ್ ಸಮಿತಿ ಅಧ್ಯಕ್ಷರಾದ ಸಂಜೀವ ಪೂಜಾರಿ, ಶೀನ ದೇವಾಡಿಗ, ಎಂ. ವಿನಾಯಕ ರಾವ್, ರಾಮಕೃಷ್ಣ ಖಾರ್ವಿ, ಇತರರು ಇದ್ದರು.

    Click here

    Click here

    Click here

    Call us

    Call us

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.