Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗೋವಾ: ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನದ ಅಧ್ಯಕ್ಷರಾಗಿ ರವೀಂದ್ರ ತೋಟಿಗೇರ ಆಯ್ಕೆ
    ಕರಾವಳಿ

    ಗೋವಾ: ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನದ ಅಧ್ಯಕ್ಷರಾಗಿ ರವೀಂದ್ರ ತೋಟಿಗೇರ ಆಯ್ಕೆ

    Updated:02/05/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಗೋವಾ: ಪ್ರತಿವರ್ಷದಂತೆ ಈ ವರ್ಷವು ಸಹ ಇದೆ ಮೇ 27 ರಂದು ಗೋವಾದ ಬೀಚೋಲಿಯಂನ ರಾಧಾಬಾಯಿ ಸಭಾಂಗಣದಲ್ಲಿ ಜರುಗಲಿರುವ ದಶಮಾನೋತ್ಸವದ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನದ ಸರ್ವಾಧ್ಯಕ್ಷರಾಗಿ ವಕೀಲರು, ಸಾಹಿತಿಗಳು ಮತ್ತು ಕನ್ನಡದ ನುಡಿ ಸೇವಕರಾದ ಶ್ರೀ ರವೀಂದ್ರ ತೋಟಿಗೇರರವರು ಆಯ್ಕೆಯಾಗಿದ್ದಾರೆ.

    Click Here

    Call us

    Click Here

    ಪೂರ್ವಭಾವಿ ಸಭೆಯಲ್ಲಿ ಗೋವಾದಲ್ಲಿ ನೆಡೆಯುವ ದಶಮಾನೋತ್ಸವ ಸಾಂಸ್ಕೃತಿಕ ಸಮ್ಮೇಳನದ ಅಧ್ಯಕ್ಷರಾಗಿ ರವೀಂದ್ರ ತೋಟಿಗೇರ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಅವರ ಅಧ್ಯಕ್ಷತೆಯಲ್ಲಿ ದಶಮಾನೋತ್ಸವದ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನ ಜರುಗಲಿದ್ದು ಇದರಲ್ಲಿ ರಾಜ್ಯದ ಕವಿಗಳು ಭಾಗವಹಿಸಿ ತಮ್ಮ ಕವನವಾಚನ ಮಾಡಲಿದ್ದಾರೆ ಎಂದು ಕರ್ನಾಟಕ ಜಾಗೃತಿ ವೇದಿಕೆ ಅಧ್ಯಕ್ಷ ಶಿವಬಾಲ ಸಾಮಿ ತಿಳಿಸಿದ್ದಾರೆ.

    ಇದೇ ಸಂದರ್ಭದಲ್ಲಿ ಮಾತನಾಡಿದ ಮಹೇಶ ಬಾಬು ಸುರ್ವೆ ಬೆಳೆಗಾವಿಯ ವಕೀಲರು, ಸಾಹಿತಿ, ಕನ್ನಡದ ನುಡಿ ಸೇವಕ ರವೀಂದ್ರ ತೋಟಿಗೇರ ರವರು ಕಳೆದ ೨೫ ವರ್ಷಗಳಿಂದ ನಾಡಿನ ನುಡಿ ಸೇವಕರಾಗಿ ಗಡಿ ಹೋರಾಟಗಾರರಾಗಿ ಪತ್ರಕರ್ತರಾಗಿ ಸೇವೆಸಲ್ಲಿಸುತಿದ್ದಾರೆ.

    ಬರಹಗಾರರಾಗಿ ನಿಸ್ವಾರ್ಥ ಸೇವೆ ಸಲ್ಲಿಸುವ ಮೂಲಕ ಜನಮಾನಸದಲ್ಲುಳಿದಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಜೀವನೋತ್ಸಾಹದ ಗಡಿ ಹೋರಾಟಗಾರರು ಎಂದೇ ಖ್ಯಾತಿ ಪಡೆದ ರವೀಂದ್ರರವರು ನಾಡಿನ ಹೆಸರಾಂತ ಪತ್ರಿಕೆಗಳಲ್ಲಿ ಸಾಂದರ್ಭಿಕವಾಗಿ ಕಾನೂನು ಬಗ್ಗೆ ಲೇಖನಗಳನ್ನು ಬರೆದಿದ್ದಾರೆ. ಖ್ಯಾತ ನಾಮ ಚಿತ್ರ ನಟರ,ಸಾಹಿತಿ ದಿಗ್ಗಜರ ಸಾಧಕರ ಒಡನಾಟದಿಂದ ಬರಹಗಾರಿಕೆಯಲ್ಲಿ ಸೈ ಎನಿಸಿಕೊಂಡಿದ್ದಾರೆ.

    ಗಡಿ ಉತ್ಸವದ ಕವಿಗೋಷ್ಠಿ, ಚಂದನ ದೂರದರ್ಶನ, ಆಕಾಶವಾಣಿ ಹಾಗೂ ಅನೇಕ ಉತ್ಸವದ ಕವಿಗೋಷ್ಠಿಯಲ್ಲಿಯೂ ಕಾವ್ಯ ವಾಚನ ಸೇರಿದಂತೆ ಅನೇಕ ಕಡೆಗಳಲ್ಲಿ ಕವನ ವಾಚಿಸಿದ್ದಾರೆ. ಸಾಹಿತ್ಯಗೋಷ್ಠಿ, ಉತ್ಸವ ಮುಂತಾದ ಕಡೆಗಳಲ್ಲಿ ಉಪನ್ಯಾಸ ನೀಡಿದ ಕೀರ್ತಿ ಇವರದಾಗಿದೆ ಎಂದರು .

    Click here

    Click here

    Click here

    Click Here

    Call us

    Call us

    ಕರ್ನಾಟಕ ಕಲಾ ರತ್ನ, ಕಾಯಕ ರತ್ನ ಕರುನಾಡ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಪುಸ್ತಕ ಪ್ರಕಟಣೆಯ ಗ್ರಂಥ ಹೊರತರುವ ಮೂಲಕ ಭಾವೈಕ್ಯತೆಗೆ ಸಾಕ್ಷಿಯಾಗಿದ್ದಾರೆ.

    ಬಹುಪಾಲು ಸಂಘದ ಜಿಲ್ಲಾಧ್ಯಕ್ಷರಾಗಿಯೂ ಸೇವೆಸಲ್ಲಿಸಿದ್ದಾರೆ ಈ ಎಲ್ಲ ಅಂಶವನ್ನು ಗಣನೆಗೆ ಪರಿಗಣಿಸಿ ರವೀಂದ್ರವರನ್ನು ಆಯ್ಕೆ ಮಾಡಲಾಗಿದೆ ಎಂದರು. ಮಹೇಶ ಬಾಬು ಸುರ್ವೆ ಸೂಚಿಸಿದರು, ಶಿವಬಾಲ ಸಾಮಿ ಅನುಮೋದಿಸಿದರು.

    ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ನಾಗರಿಕರ ವೇದಿಕೆಯ ರಾಜ್ಯಾದ್ಯಕ್ಷ ಮಹೇಶಬಾಬು ಸುರ್ವೆ ಅಖಿಲ ಗೋವಾ ಕನ್ನಡ ಸಂಘದ ರಾಜಾದ್ಯಕ್ಷ ಹನುಮಂತ ರಡಿ ಶಿರೊರ ರಾಜ್ಯಉಪಾಧ್ಯಕ್ಷ ಸಿದ್ದಪ್ಪ ಹಂಚಿನಾಳ, ಅನಂತ, ರವಿ, ಶಿವಣ್ಣ ಮೊಹನ, ಮಂಜುನಾಥ, ರಾಜು ಬಸವರಾಜ ಸಿನೂರ, ಮಹಾಂತೇಶ ಹೀರೇಮಠ ಪ್ರಭು ರತ್ನಾಕರ, ಮಲ್ಲಿಕಾರ್ಜುನ ಮಠ, ಉಸಮಾನ ಸಂಗಂ ಜಿಲ್ಲಾನ ಸೇರಿದಂತೆ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ಪಾಲ್ಗೊಂಡಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    4 × five =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.