Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರಾದ್ಯಂತ ಶಾಂತಿಯುತ ಮತದಾನ
    ಊರ್ಮನೆ ಸಮಾಚಾರ

    ಕುಂದಾಪುರ ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರಾದ್ಯಂತ ಶಾಂತಿಯುತ ಮತದಾನ

    Updated:12/05/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಹೊಸ ಮತದಾರರ ಹರ್ಷ, ಹಿರಿಯ ಮತದಾರರ ಹುರುಪಿಗೆ ಸಾಕ್ಷಿಯಾದ ವಿಧಾನಸಭಾ ಚುನಾವಣೆ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕುಂದಾಪುರ ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರದ್ಯಂತ ಬಹುಪಾಲು ಮತಗಟ್ಟೆಗಳಲ್ಲಿ ಮಧ್ಯಾಹ್ನದ ತನಕ ಬಿರುಸಿನ ಮತದಾನ ನಡೆದಿದ್ದು, ಮಧ್ಯಾಹ್ನದ ಬಳಿಕ ನಿಧಾನಗತಿಯಲ್ಲಿ ಮತದಾನ ಪ್ರಕ್ರಿಯೆ ಮುಂದುವರಿಯಿತು. ಪ್ರತಿಮತಗಟ್ಟೆಗಳಲ್ಲಿಯೂ ಹೊಸ ಮತದಾರರು ಮೊದಲ ಭಾರಿಗೆ ಮತದಾನ ಮಾಡುವ ಮೂಲಕ ಸಂಭ್ರಮ ಪಟ್ಟರೇ, ಶತಕದ ಆಸುಪಾಸಿನಲ್ಲಿರುವ ಹಿರಿಯ ಜೀವಗಳೂ ಕೂಡ ಹುರುಪಿನಿಂದ ಮತದಾನ ಮಾಡಿ ಮತದಾನಕ್ಕೆ ಪ್ರೇರೆಪಿಸಿದರು. ಕುಂದಾಪುರ ಹಾಗೂ ಬೈಂದೂರು ತಾಲೂಕಿನಾದ್ಯಂತ ಯಾವುದೇ ಗೊಂದಲವಿಲ್ಲದೇ ಮತದಾನ ನಡೆಯುತ್ತಿದೆ.

    ಮೊದಲ ಮತದಾನದ ಸಂಭ್ರಮ:
    ಕುಂದಾಪುರ ವಡೇರ ಹೋಬಳಿ ಪಿಂಕ್ ಮತಗಘಟ್ಟೆಯಲ್ಲಿ ಪ್ರಥಮ ಬಾರಿ ಮತ ಚಲಾಯಿಸಿ ಸೆಲ್ಫಿ ಪಾಯಿಂಟ್‌ನಲ್ಲಿ ಸೆಲ್ಪಿ ತೆಗೆಸಿಕೊಂಡು ಮೊದಲ ಮತದಾನದ ಖುಷಿಹಂಚಿಕೊಂಡ ಸ್ನೇಹತೆಯರು. ಕುಂದಾಪುರ ಫಿಲೋನಾ ವಾಝ್, ಸುಶ್ಮಾ ಬೆರೆಟ್ಟೊ ಹಾಗೂ ರೆಬೆರೋ ವಾಝ್ ಪ್ರಥಮ ಮತದಾನದ ನಂತರ ಪಿಂಕ್ ಮತಕೇಂದ್ರ ಸೆಲ್ಫಿ ಪಾಯಿಂಟ್‌ನಲ್ಲಿ ನಿಂತು ವಿಜಯದ ಸಂಕೇತ ಸಿಂಬಲ್ ತೋರಿಸುವ ಮೂಲಕ ಸೆಲ್ಪಿತೆಗೆದುಕೊಂಡು ಸಂಭ್ರಮಿಸಿದರು. ನಾವು ಮತದಾನ ಮಾಡಿದ್ದೇವೆ. ಎಲ್ಲರೂ ಮತದಾನ ಮಾಡುವ ಮೂಲಕ ದೇಶಕಟ್ಟುವ ಕೆಲಸ ಮಾಡಬೇಕು. ದೇಶಕ್ಕಾಗಿ ನಮಗೆ ಬೇರೇನನ್ನೂ ಮಾಡಲಾಗದಿದ್ದರೂ ಮತದಾನದ ಮೂಲಕವಾದರೂ ಕಿಂಚಿತ್ ಋಣ ತೀರಿಸಲು ಸಾಧ್ಯ. ದೇಶದ ಅಭಿವೃದ್ಧಿಗೆ ನಾವು ಮೊದಲ ಮತದಾನದ ಮೂಲಕ ಕೊಡುಗೆ ನೀಡಿದ್ದೇವೆ ಎಂಬ ಹೆಮ್ಮೆ ನಮ್ಮದು. ನಾವು ಇನ್ನು ಮುಂದೆ ಯಾವತ್ತೂ ಮತದಾನದಿಂದ ದೂರ ಉಳಿಯೋದಿಲ್ಲ. ಎಲ್ಲರೂ ಮತದಾನ ಮಾಡುವ ಮೂಲಕ ಸದೃಢ, ಸಂಭೃದ್ಧ ದೇಶ ಕೊಟ್ಟೋಣ ಎಂದು ಮೂವರು ಸ್ನೇಹಿತೆಯರು ವಿಜಯವಾಣಿಗೆ ತಿಳಿಸಿದ್ದಾರೆ.

    ಹಿರಿಯ ನಾಗರಿಕರು:
    ಶಿರೂರಿನಲ್ಲಿ 102 ವರ್ಷದ ಹಿರಿಯ ನಾಗರಿಕ ಅಬ್ದುಲ್ ಖಾದರ್ ಮತದಾನ ಮಾಡಿ ಯುವಕರಲ್ಲಿ ಹರುಪು ತುಂಬಿದರು. ವಡೇರಹೋಬಳಿ ಪಿಂಕ್ ಮತಘಟ್ಟೆಯಲ್ಲಿ ಇಬ್ಬರು ಮಹಿಳಾ ಮತದಾರರು ಒಂದೇ ಕುರ್ಚಿ ಹಂಚಿಕೊಂಡ ಮತದಾನದ ಸರದಿಗಾಗಿ ಕಾಯುವ ಮೂಲಕ ವೀಕ್ಷಕರ ಗಮನ ಸೆಳೆದರು. ಹಿರಿಯ ನಾಗರಿಕರಿಗೆ ಸರತಿ ಸಾಲಲ್ಲಿ ನಿಂತು ಮತದಾನ ಮಾಡಬಾರದು ಎನ್ನುವ ನಿಟ್ಟಲ್ಲಿ ರೆಸ್ಟ್ ರೂಮ್ ಹಾಗೂ ಪತ್ರಿಕೆ ಇನ್ನಿತರ ಸೌಲಭ್ಯ ಚುನಾವಣೆ ಇಲಾಖೆ ಮಾಡತ್ತು. ಮತದಾನ ಮಾಡಲು ಬಂದ ಹಿರಿಯರು ಮತಘಟ್ಟೆಯಲ್ಲಿ ಕ್ರೌಡ್ ಇದ್ದಿದ್ದರಿಂದ ಟೋಕನ್ ಕೊಟ್ಟು ಹಿರಿಯ ಮಹಿಳೆಯರಿಗೆ ಕುರ್ಚಿ ಕೊಟ್ಟು ಕೂಡಿಸಿದ್ದು, ಅವರ ಸರದಿ ಬಂದ ನಂತರ ಚುನಾವಣೆ ಅಧಿಕಾರಿ ಹಿರಿಯ ಮಹಿಳೆರಿಗೆ ಮತದಾನ ಮಾಡಲು ಅವಕಾಶ ಮಾಡಿಕೊಟ್ಟರು.

    ಪಿಂಕ್ ಮತಗಟ್ಟೆಗಳಲ್ಲಿ ಸಖಿಯರ ದರ್ಬಾರ್:
    ಕುಂದಾಪುರ ವಡೇರ ಹೋಬಳಿ ಮತ್ತು ಮೇಲ್ಕಟ್ಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಖಿ ಮತಘಟ್ಟೆಯಾಗಿದ್ದು, ರಕ್ಷಣಾ ಸಿಬ್ಬಂದಿ ಸಹಿತ ಎಲ್ಲರೂ ಮಹಿಳೆಯರೇ.  ಮತಘಟ್ಟೆ ಗೋಡೆಯಿಂದ ಹಿಡಿದು ಪೋಲಿಂಗ್ ಬಾಕ್ಸ್ ತನಕ, ಸಿಬ್ಬಂದಿ ಸಮವಸ್ತ್ರ ಕೂಡಾ ಪಿಂಕ್. ಅತೀ ಹೆಚ್ಚು ಮಹಿಳಾ ಮತದಾರರುವ ಪ್ರದೇಶದಲ್ಲಿ ಪಿಂಕ್ ಮತಕೇಂದ್ರ ತೆರೆದಿದ್ದು, ಮಹಿಳೆಯರು ಖುಷಿಯಿಂದ ಬಂದ ಸರತಿ ಸಾಲಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು. ಪಿಂಕ್ ಮತಕೇಂದ್ರ ಮಹಿಳಾ ಸ್ನೇಹಿಯಾಗಿ ಮಹಿಳೆಯರ ಆರ್ಕಷಿಸಿತು.

    Click here

    Click here

    Click here

    Call us

    Call us

    ಹಿರಿಯ ಯಕ್ಷಗಾನ ಕಲಾವಿದ ಗೆಳೆಯರ ಮತದಾನದ ಹುಮ್ಮಸ್ಸು
    ವಂಡ್ಸೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿರಿಯ ಕಲಾವಿದ ಗೆಳೆಯರು ಮತದಾನ ಮಾಡುವ ಮೂಲಕ ಯುವಕರಿಗೆ ಮಾದರಿಯರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಡಗುತಿಟ್ಟುವ ಕಲಾವಿದ ನಾರಾಯಣ ಗಾಣಿಗ ವಂಡ್ಸೆ (೮೪) ಹಾಗೂ ವಿ.ನಾಗಯ್ಯ ಶೆಟ್ಟಿ (94) ಮತದಾನ ಮಾಡಿದ ಕಲಾವಿದರು. ಇಬ್ಬರೂ ಕಲಾವಿದರು ಒಂದೇ ಊರಿನವರಾಗದ್ದು, ಇಬ್ಬರೂ ಒಟ್ಟಾಗಿ ಹಲವಾರು ಮೇಳದಲ್ಲಿ ಕಲಾವಿದರಾಗಿ ದುಡಿದ್ದರು. ಇಬ್ಬರಿಗೂ ಪ್ರಜಾಪ್ರಭುತ್ವದಲ್ಲಿ ಅಚಲ ವಿಶ್ವಾಸವಿದ್ದೂ, ಮತದಾನ ಮಾಡುವುದು ಇವರು ಎಂದೂ ಮರೆತಿಲ್ಲ.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.