Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಲ್ಲೂರು: ದೇವಳ ಚಿನ್ನ ಕಳವು ಪ್ರಕರಣಕ್ಕೆ 2 ವರ್ಷ. ಚಾರ್ಜ್ ಶೀಟ್ ಸಲ್ಲಿಕೆಯಾಗಿಲ್ಲ. 400 ಗ್ರಾಂ ಚಿನ್ನ ಪತ್ತೆಯಿಲ್ಲ.
    ಕೊಲ್ಲೂರು

    ಕೊಲ್ಲೂರು: ದೇವಳ ಚಿನ್ನ ಕಳವು ಪ್ರಕರಣಕ್ಕೆ 2 ವರ್ಷ. ಚಾರ್ಜ್ ಶೀಟ್ ಸಲ್ಲಿಕೆಯಾಗಿಲ್ಲ. 400 ಗ್ರಾಂ ಚಿನ್ನ ಪತ್ತೆಯಿಲ್ಲ.

    Updated:14/05/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೊಲ್ಲೂರು: ದಕ್ಷಿಣ ಭಾರತದ ಪ್ರಸಿದ್ಧ ದೇವಾಲಯಗಳಲ್ಲೊಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಚಿನ್ನಭಾರಣ ಕಳವು ಪ್ರಕರಣ ನಡೆದು 2 ವರ್ಷ ಸಂದರೂ ಈ ವರೆಗೂ ಆರೋಪಿಗಳ ಮೇಲೆ ಚಾರ್ಜ್ ಶೀಟ್ ಸಲ್ಲಿಸಿಲ್ಲ ಅಲ್ಲದೇ ಕಳವಾದ ಸುಮಾರು 75 ಲಕ್ಷಕ್ಕೂ ಹೆಚ್ಚು ಮೌಲ್ಯದ 2.289ಕೆ.ಜಿ ಚಿನ್ನಾಭರಣದ ಪೈಕಿ 400 ಗ್ರಾಂ ಚಿನ್ನಾಭರಣ ಈವರೆಗೂ ಪತ್ತೆಯಾಗಿಲ್ಲ. ದೇವಿಯ ಆಭರಣ ಕಳವು ಪ್ರಕರಣ ರಾಜ್ಯ ಹೊರರಾಜ್ಯಗಳಲ್ಲೂ ಸುದ್ದಿಯಾಗಿದ್ದವು.

    Click Here

    Call us

    Click Here

    ಅಂದಿನ ದೇಗುಲದ ಕಾರ್ಯನಿರ್ವಹಣಾಧಿಕಾರಿ ಟಿ. ಆರ್. ಉಮಾ ನಿತ್ಯ ಸಂಗ್ರಹವಾದ ಕಾಣಿಕೆ, ಹರಿಕೆ ಆಭರಣಗಳ ಬಗ್ಗೆ ಲೆಕ್ಕಪರಿಶೋಧನೆ ಮಾಡುತ್ತಿದ್ದಾಗ ಅದರಲ್ಲಿ ವ್ಯತ್ಯಾಸವನ್ನು ಕಂಡುಹಿಡಿದಿದ್ದರು. ಈ ಬಗ್ಗೆ ಮೇಲ್ವಿಚಾರಣೆ ನಡೆಸುತ್ತಿದ್ದ ಶಿವರಾಮ ಮಡಿವಾಳ ಎಂಬಾತನನ್ನು ಸಂಪರ್ಕಿಸಿದ್ದರು. ಆತ ನೀಡಿದ ಉತ್ತರ ನೀಡಲು ಅಸಮರ್ಥನಾದ್ದರಿಂದ ಅವರು ಕೊಲ್ಲೂರು ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಪೊಲೀಸರಿಗೆ ಶರಣಾದ ಶಿವರಾಮ್ ತಾನು ಬ್ಯಾಂಕ್ ಇನ್ನಿತರ ಲೇವಾದೇವಿ ಸಂಸ್ಥೆಗಳಲ್ಲಿ ಚಿನ್ನಾಭರಣ ಅಡವಿಟ್ಟ ಬಗ್ಗೆ ಪೂರ್ಣ ಮಾಹಿತಿ ನೀಡಿದ್ದ. ಆತನೊಡನೆ ದೇಗುಲದ ಇತರ 4 ಮಂದಿ ಸಿಬಂದಿಯನ್ನೂ ಪೊಲೀಸರು ಬಂಧಿಸಿದ್ದರು. ಜತೆಗೆ ಕಾರ್ಯನಿರ್ವಹಣಾಧಿಕಾರಿ ಎಲ್.ಎಸ್. ಮಾರುತಿ ಅವರನ್ನೂ ಬಂಧಿಸಲಾಗಿದ್ದು, ಎಲ್ಲರೂ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು.

    ಅಂದಿನ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ನೇತೃತ್ವದಲ್ಲಿ ಪೊಲೀಸರ ವಿಶೇಷ ತಂಡ ಅಂದಿನ ಡಿವೈಎಸ್ಪಿ ಮಂಜುನಾಥ ಶೆಟ್ಟಿ, ಸರ್ಕಲ್ ಇನ್ಸ್ಪೆಕ್ಟರ್ ಸುದರ್ಶನ್, ಎಸ್.ಐ. ಶೇಖರ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿತ್ತು. ಎಸ್.ಪಿ ಅಣ್ಣಾಮಲೈ ಅವರ ವರ್ಗಾವಣೆ ಬಳಿಕ ತನಿಖೆ ವೇಗಪಡೆಯಲಿಲ್ಲ. ಊರ ಗ್ರಾಮಸ್ಥರು ಹಾಗೂ ಭಕ್ತಾದಿಗಳು ಮಿಕ್ಕುಳಿದ ಚಿನ್ನಾಭರಣಗಳ ಬಗ್ಗೆ ಧ್ವನಿ ಎತ್ತಿದ್ದರೂ ಆ ಪ್ರಶ್ನೆಗಳು ಪ್ರಶ್ನೆಯಾಗಿಯೇ ಉಳಿದಿದೆ. ದೇಗುಲದಲ್ಲೀಗ ಕಾಣಿಕೆ ರೂಪದಲ್ಲಿ ಚಿನ್ನಾಭರಣ ಸಮರ್ಪಿಸಲು ಬರುವ ಭಕ್ತರಿಗೆ ರಶೀದಿ ನೀಡುವ ವ್ಯವಸ್ಥೆಯೂ ಮಾಯವಾಗಿದೆ. ಇದರ ಬದಲಿಗೆ ದೇಗುಲ ಸಿಬಂದಿ ಕಾಣಿಕೆ ಹುಂಡಿಗೆ ಹಾಕುವಂತೆ ಹೇಳುತ್ತಿರುವುದು ಭಕ್ತರಿಗೆ ಕಿರಿಕಿರಿ ಉಂಟುಮಾಡಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

    28/04/2026

    ರೌಡಿಶೀಟರ್ ಇಡೂರು ಕುಂಜ್ಞಾಡಿಯ ಕಾರ್ತಿಕ್ ಆಚಾರ್ ಗಡಿಪಾರು

    11/04/2026

    ಬೈಕ್‌ಗೆ ಮಿನಿಲಾರಿ ಡಿಕ್ಕಿಯಾಗಿ ಮೂವರಿಗೆ ಗಂಭೀರ ಗಾಯ

    02/04/2026
    Leave A Reply Cancel Reply

    9 + sixteen =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.