Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪುಟ್ಟ ಹಳ್ಳಿಯ ದಶಕಗಳ ಬೇಡಿಕೆ ನೀಗಿತು. ಚಾರ್ಸಾಲುವಿನಲ್ಲಿ ವಿದ್ಯುತ್ ಬೆಳಗಿತು
    ಊರ್ಮನೆ ಸಮಾಚಾರ

    ಪುಟ್ಟ ಹಳ್ಳಿಯ ದಶಕಗಳ ಬೇಡಿಕೆ ನೀಗಿತು. ಚಾರ್ಸಾಲುವಿನಲ್ಲಿ ವಿದ್ಯುತ್ ಬೆಳಗಿತು

    Updated:25/05/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ವರದಿ
    ಬೈಂದೂರು: ಬೈಂದೂರು ತಾಲೂಕು ಗೋಳಿಹೊಳೆ ಗ್ರಾಮದ ಚಾರ್ಸಾಲು ವಿದ್ಯುತ್ ಸಂಪರ್ಕ ವಂಚಿತ ಗ್ರಾಮವಾಗಿತ್ತು. ರಕ್ಷತಾರಣ್ಯದ ತಪ್ಪಲಿನ ಪ್ರದೇಶವಾಗಿದ್ದರಿಂದ ವಿದ್ಯುತ್ ಸಂಪರ್ಕಕ್ಕೆ ಅರಣ್ಯ ಇಲಾಖೆ ತೊಡಕುಂಟುಮಾಡಿತ್ತು. ಪರಿಣಾಮವಾಗಿ ಕೃಷಿ ಹಾಗೂ ಕೂಲಿ ಕೆಲಸವನ್ನೇ ನೆಚ್ಚಿಕೊಂಡಿರುವ ಮರಾಠಿ ಸಮುದಾಯದ ಸುಮಾರು 24 ಮನೆಗಳಿರುವ, 150ಕ್ಕೂ ಹೆಚ್ಚು ಮಂದಿ ವಾಸಿಸುತ್ತಿರುವ ಈ ಪುಟ್ಟ ಗ್ರಾಮ ವಿದ್ಯುತ್ ವಂಚಿತವಾಗಿಯೇ ಉಳಿದಿತ್ತು.

    Click Here

    Call us

    Click Here

    ಆ ಪುಟ್ಟ ಹಳ್ಳಿಯ ಮನೆಗಳಲ್ಲಿ ಪ್ರಥಮ ಭಾರಿಗೆ ವಿದ್ಯುತ್ ದೀಪ ಬೆಳಗಿದೆ. ಹಲವು ದಶಕಗಳ ಗ್ರಾಮಸ್ಥರ ಬೇಡಿಕೆಗೆ ಕೊನೆಗೂ ಶಾಶ್ವತ ಫಲ ದೊರೆತಿದೆ. ಅಲ್ಲಿನ ಜನರ ಮನೆ ಮನಗಳಲ್ಲಿ ಸಂತಸದ ಬೆಳಕು ಮೂಡಿದೆ.

    ವಿದ್ಯುತ್ ಸಂಪರ್ಕಕ್ಕಾಗಿ ಹಲವು ದಶಕಗಳಿಂದ ಹೋರಾಡುತ್ತಲೇ ಬಂದಿದ್ದ ಈ ಭಾಗದ ಜನರು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಬೇಡಿಕೆ ಇಡುತ್ತಲೇ ಬಂದಿದ್ದರು. ಈ ಭಾಗದ ಮೂಲ ಸೌಕರ್ಯಗಳ ಅಭಿವೃದ್ಧಿಯ ಬಗ್ಗೆ ಪತ್ರಿಕೆಗಳೂ ಕೂಡ ಆಡಳಿತ ವರ್ಗವನ್ನು ಎಚ್ಚರಿಸುತ್ತಲೇ ಬಂದಿದ್ದವು. ಪರಿಣಾಮವಾಗಿ ಅಂದಿನ ಶಾಸಕಾಗಿದ್ದ ಕೆ. ಲಕ್ಷ್ಮೀನಾರಾಯಣ ಅವರು ವಿದ್ಯುತ್ ಸಂಪರ್ಕ ಕೊಡಿಸುವ ಬಗ್ಗೆ ಆರಂಭದಲ್ಲಿ ಪ್ರಯತ್ನಿಸಿದ್ದರು. ಬಳಿಕ ಶಾಸಕರಾಗಿ ಬಂದ ಕೆ. ಗೋಪಾಲ ಪೂಜಾರಿಯವರು ನಿರಂತರವಾಗಿ ವಿದ್ಯುತ್ ಸಂಪರ್ಕದ ಪ್ರಸ್ತಾಪವನ್ನಿರಿಸಿಕೊಂಡು ಎಲ್ಲಾ ಇಲಾಖೆಗಳೊಂದಿಗೂ ಸಮನ್ವಯ ಸಾಧಿಸಿ ವಿದ್ಯುತ್ ಸಂಪರ್ಕ ಕೊಡಿಸುವಲ್ಲಿ ಯಶಸ್ವಿಯಾಗಿದ್ದರು.

    ಸುಮಾರು 35 ಲಕ್ಷ ರೂ. ವೆಚ್ಚದಲ್ಲಿ ಅರಣ್ಯ ಭಾಗದಲ್ಲಿ ಕೇಬಲ್ ಹಾಗೂ ಉಳಿದ ಭಾಗಗಳಲ್ಲಿ ಲೈನ್ ಎಳೆದು ಪ್ರತಿ ಮನೆಗೂ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಕಾಮಗಾರಿ ಭರದಿಂದ ನಡೆಸಿ ಇಲ್ಲಿನ ಮನೆಗಳು ವಿದ್ಯುತ್ ಬೆಳಕು ಕಂಡಿವೆ.

    ಗ್ರಾಮದ ರಸ್ತೆ ಅಭಿವೃದ್ಧಿ:
    ಚಾರ್ಸಾಲುವಿಗೆ ತೆರಳುವ ರಸ್ತೆಯನ್ನು ಕಾಂಕ್ರೀಟಿಕರಣಗೊಳಿಸಲಾಗಿದ್ದು, ಗ್ರಾಮಸ್ಥರಿಗೆ ಸರ್ವಋತು ರಸ್ತೆ ಆಗಿದೆ. ಇನ್ನೂ ಸ್ವಲ್ಪ ಭಾಗ ಬಾಕಿ ಉಳಿದಿದ್ದು, ನೂತನ ಶಾಸಕರು ಗ್ರಾಮದ ಬೇಡಿಕೆಯನ್ನು ಈಡೆರಿಸುವರೆಂಬ ಭರವಸೆಯಲ್ಲಿ ಗ್ರಾಮಸ್ಥರಿದ್ದಾರೆ.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    sixteen + 18 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.