Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ವಿವಿಧೆಡೆ ‘ವಾರಿಯರ್’ ಚಿತ್ರೀಕರಣ
    ವಿಶೇಷ ವರದಿ

    ಕುಂದಾಪುರ ವಿವಿಧೆಡೆ ‘ವಾರಿಯರ್’ ಚಿತ್ರೀಕರಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಕನ್ನಡ ಚಿತ್ರರಂಗದಲ್ಲಿ ಈಗ ಹೊಸಬರು ಹೆಚ್ಚು ಸದ್ದು ಮಾಡುತ್ತಿದ್ದಾರೆ. ಹೊಸಬರ ಚಿತ್ರಗಳು ಹೊಸ ಭರವಸೆಯನ್ನೂ ಮೂಡಿಸಿದೆ. ಅಂತಹದೇ ಒಂದು ಭರವಸೆಯನ್ನು ಮೂಡಿಸಲು ‘ವಾರಿಯರ್’ ಸಿನೆಮಾದ ಚಿತ್ರತಂಡ ಹೊರಟಿದೆ. ದೈನಂದಿನ ಬದುಕಿನ ಆಗುಹೋಗುಗಳನ್ನಾಧರಿಸಿದ ಚಿತ್ರಕಥೆಯ ಚಿತ್ರೀಕರಣ ಕುಂದಾಪುರ ತಾಲೂಕಿನ ವಿವಿಧೆಡೆ ಕಳೆದ ಮೂರು ದಿನಗಳಿಂದ ಭರದಿಂದ ಸಾಗುತ್ತಿದೆ.

    Click Here

    Call us

    Click Here

    ಈಗಾಗಲೇ ಕೆಲವಷ್ಟು ಸಿನೆಮಾಗಳಲ್ಲಿ ದುಡಿದು ಈಗ ತನ್ನದೇ ಕಥೆ, ಚಿತ್ರಗಥೆ ಹಾಗೂ ನಿರ್ದೇಶನದಲ್ಲಿ ಸಿನೆಮಾ ಮಾಡಲು ಹೊರಟಿರುವ ಆರ್ಯ ಅವರಿಗೆ ಆದಿಶಕ್ತಿ ಎಂಟರ್ಪ್ರೈಸಸ್ ನ ಪ್ರಕಾಶ್ ಎಸ್. ಬಂಡವಾಳ ಹೂಡಿ ಸಾಥ್ ನೀಡಿದ್ದರೇ, ವಿನ್ಯಾಸ್ ಮೂರ್ತಿ ಅವರ ಕ್ಯಾಮರಾ ಹಿಡಿದು, ಗಿರೀಶ್ ನೃತ್ಯ ನಿರ್ದೇಶನ ಮಾಡಿದ್ದಾರೆ.

    ಮೂವರು ನಾಯಕಿಯರು ಹಾಗೂ ಇಬ್ಬರು ನಾಯಕರುಗಳು ವಾರಿಯರ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ನಾಯಕಿಯರ ಕಾರಣದಿಂದಾಗಿ ನಡೆಯುವ ಘಟನೆಗಳು ಹಾಗೂ ನಾಯಕರು ಅದನ್ನು ನಿಭಾಯಿಸುವ ರೀತಿಯ ನಡುವೆ ಚಿತ್ರಕಥೆ ಸಾಗುತ್ತದೆ.

    ಚಿತ್ರದಲ್ಲಿ ನಾಯಕರಾಗಿ ಪ್ರಣವ್ ಹಾಗೂ ಪ್ರಶಾಂತ್ ಮುಖ್ಯಭೂಮಿಕೆಯಲ್ಲಿದ್ದರೇ, ನಾಯಕಿಯರಾಗಿ ಪಾವನ, ವೇದಿಕಾ ಶೆಟ್ಟಿ ಹಾಗೂ ಸೋನು ಕಾಣಿಸಿಕೊಂಡಿದ್ದಾರೆ. ಖಳನಾಯಕನಾಗಿ ರಂಗಭೂಮಿ ಹಿನ್ನೆಲೆಯ ಸಂಜಯ್ ಅಭಿನಯಿಸಿದ್ದಾರೆ.
    ಇನ್ನು ಹಿರಿಯ ನಟರಾದ ಭವ್ಯ, ಎಂ.ಕೆ. ಮಠ, ಹಾಸ್ಯ ನಟರಾದ ರಘು ಪಾಂಡೇಶ್ವರ್, ಶೋಭಾ ಮುಂತಾದವರು ಚಿತ್ರದಲ್ಲಿ ವಿವಿಧ ಪಾತ್ರಗಳನ್ನು ನಿರ್ವಹಿಸಲಿದ್ದಾರೆ.

    ಚಿತ್ರದಲ್ಲಿ ಒಟ್ಟು 5 ಹಾಡುಗಳಿಂದು ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್, ಅನುರಾಧ ಮುಂತಾದವರು ಹಾಡಿದ್ದಾರೆ. ರಾಮದೇವ್ ಅವರ ನಿರ್ದೇಶನದಲ್ಲಿ ಚಿತ್ರದ ಸಾಹಸ ದೃಶ್ಯಗಳು ಮೂಡಿಬಂದಿದೆ.

    Click here

    Click here

    Click here

    Call us

    Call us

    ಶಿವಮೊಗ್ಗ, ಹೊಸನಗರ, ನಗರ, ನಿಟ್ಟೂರು, ಕೊಲ್ಲೂರು ಹಾಗೂ ಕುಂದಾಪುರ ವಿವಿಧೆಡೆ ಒಟ್ಟು ನಲವತ್ತೈದು ದಿನಗಳ ಚಿತ್ರೀಕರಣ ನಡೆದಿದ್ದು, ಒಂದೇ ಹಂತದಲ್ಲಿ ಚಿತ್ರೀಕರಣವನ್ನು ಮುಗಿಸಿ ಜುಲೈ ಅಂತ್ಯದ ವೇಳೆಗೆ ಚಿತ್ರವನ್ನು ತೆರೆಯ ಮೇಲೆ ತರುವ ಇಂಗಿತವನ್ನು ನಿರ್ದೇಶಕ ಆರ್ಯ ಅವರದ್ದು. ಎಲ್ಲರಲ್ಲೂ ಒಂದು ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ಎತ್ತಿ ಹಿಡಿಯಬೇಕು. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕು ಎಂಬ ಉದ್ದೇಶದಿಂದ ಈ ಚಿತ್ರದ ನಿರ್ಮಾಣಕ್ಕೆ ಒಪ್ಪಿಕೊಂಡೆ ಎನ್ನುತ್ತಾರೆ ನಿರ್ಮಾಪಕ ಮೈಸೂರಿನ ಪ್ರಕಾಶ್ ಎಸ್.

    ಕಮಲಶಿಲೆಯಲ್ಲಿ ಚಿತ್ರೀಕರಣದ ನಡುವೆ ನಡೆದ ಪತ್ರಿಕಾಗೋಷ್ಠಿಯಲ್ಲಿ ವಾರಿಯರ್ ಚಿತ್ರತಂಡವನ್ನು ಮ್ಯಾನೇಜರ್ ಶಿವಮೊಗ್ಗ ರಾಮಣ್ಣ ಪರಿಚಯಿಸಿದರು. ಕ್ಯಾಷಿಯರ್ ದಿನೇಶ್ ಜೋಗಿ ಜೋತೆಗಿದ್ದರು.

    _MG_5556 _MG_5569 _MG_5584 _MG_5614 _MG_5626 _MG_5651 _MG_5673

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d