Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಾರತೀಯ ಸಂಸ್ಕ್ರತಿ ಮತ್ತು ನೈತಿಕ ಶಿಕ್ಷಣದಿಂದ ಮಕ್ಕಳಲ್ಲಿ ದೇಶಪ್ರೇಮ ಮೂಡುವುದು: ಶ್ರೀ ಸತ್ಯಸ್ವರೂಪಾನಂದಜೀ
    ಊರ್ಮನೆ ಸಮಾಚಾರ

    ಭಾರತೀಯ ಸಂಸ್ಕ್ರತಿ ಮತ್ತು ನೈತಿಕ ಶಿಕ್ಷಣದಿಂದ ಮಕ್ಕಳಲ್ಲಿ ದೇಶಪ್ರೇಮ ಮೂಡುವುದು: ಶ್ರೀ ಸತ್ಯಸ್ವರೂಪಾನಂದಜೀ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಬೈಂದೂರು:  ಶಿರೂರು ರಾಗತರಂಗ ಟ್ರಸ್ಟ್ ನೂತನವಾಗಿ ಆರಂಭಿಸಿದ ರಾಗತರಂಗ ಸೇವಾಸಂಗಮ ಶಿಶುಮಂದಿರವನ್ನು ಉದ್ಘಾಟಿಸಿ ಮಾತನಾಡಿದ ಯಳಜಿತ್ ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದಜೀ ಮಕ್ಕಳಿಗೆ ಬಾಲ್ಯದಲ್ಲಿ ಭಾರತೀಯ ಸಂಸ್ಕೃತಿ ಆಧಾರಿತ ಹಾಗೂ ನೈತಿಕ ಶಿಕ್ಷಣ ನೀಡುವ ಮೂಲಕ ಮಕ್ಕಳಲ್ಲಿ ದೇಶಪ್ರೇಮ ಬೆಳೆಸಲು ಪೋಷಕರು ಸಹಕರಿಸಬೇಕು. ಗುರುಹಿರಿಯರನ್ನು ಗೌರವಿಸುವ ಪ್ರವೃತಿಯನ್ನು ಮಕ್ಕಳಲ್ಲಿ ಬೆಳೆಸಬೇಕು ಎಂದು ಹೇಳಿದರು.

    Click Here

    Call us

    Click Here

    ಬಾಲ್ಯದಲ್ಲಿ ಮಕ್ಕಳ ಚಟುವಟಿಕೆಗಳ ಮೇಲೆ ನಿಗಾ ವಹಿಸಿ ಮಕ್ಕಳು ದಾರಿ ತಪ್ಪದಂತೆ ಎಚ್ಚರವಹಿಸಿ ಜತೆಗೆ ಮಕ್ಕಳಲ್ಲಿ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣದಂತಹ ಮಹತ್ಕಾರ್ಯವನ್ನು ಶಿಶು ಮಂದಿರಗಳು ನಿಸ್ವಾರ್ಥತೆಯಿಂದ ಮಾಡುತ್ತಿದೆ. ಸದಾ ಕ್ರಿಯಾಶೀಲವಾಗಿ ತನ್ನ ಚಟುವಟಿಕೆಗಳನ್ನು ನಡೆಸುತ್ತಾ ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ರೂಪಿಸುತ್ತಿರುವ ಶಿಶು ಮಂದಿರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಾತಾಜಿಯವರ ಸೇವೆ ಮತ್ತು ತ್ಯಾಗ ಹಾಗೂ ಶಿಶುಮಂದಿರದ ಕಾರ್ಯ ಅವಿಸ್ಮರಣೀಯ ಎಂದು ಸ್ವಾಮೀಜಿ ಶ್ಲಾಘಿಸಿದರು.

    ಕುಂದಾಪುರ ಸೇವಾಸಂಗಮ ಟ್ರಸ್ಟ್‌ನ ವಿಶ್ವಸ್ಥ ಸುಬ್ರಹ್ಮಣ್ಯ ಹೊಳ್ಳ, ಕಾರ್ಯದರ್ಶಿ ಚಂದ್ರಿಕಾ ಧನ್ಯ, ಗೋಪಾಲಕೃಷ್ಣ ಶಿರೂರು, ಕಟ್ಟಡ ಮಾಲೀಕ ರಮೇಶ ಮೇಸ್ತ ಉಪಸ್ಥಿತರಿದ್ದರು. ರಾಗತರಂಗ ಟ್ರಸ್ಟ್‌ನ ಅಧ್ಯಕ್ಷ ಉಮೇಶ ಮೇಸ್ತ ಪ್ರಾಸ್ತಾವಿಕ ಮಾತನಾಡಿದರು. ಸೇವಾಸಂಗಮದ ಸಂಚಾಲಕ ದೇವರಾಜ ಎಂ. ಮೇಸ್ತ ಸ್ವಾಗತಿಸಿದರು. ಶ್ರೀಕಾಂತ್ ಕಾಮತ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

    ನಮ್ಮ ದೇಶದ ಪ್ರತಿಯೊಬ್ಬರಲ್ಲೂ ದೇಶಪ್ರೇಮ ಗಟ್ಟಿಯಾಗಿದೆ. ಆದರೆ ಅದನ್ನು ಪ್ರಚುರಪಡಿಸಲು ಹಿಂದೇಟು ಹಾಕುತ್ತಿದ್ದಾರೆ. ದೇಶದಲ್ಲಿ ತಾಂಡವಾಡುತ್ತಿರುವ ಭ್ರಷ್ಟಾಚಾರ, ಭಯೋತ್ಪಾದನೆ ಮುಂತಾದವುಗಳು ಅಭಿವೃದ್ಧಿ ಮೇಲೆ ಬಹಳಷ್ಟು ಪರಿಣಾಮ ಬೀರುತ್ತಿದೆ. ಪ್ರೀತಿ, ವಿಶ್ವಾಸ ಹಾಗೂ ಮನುಷ್ಯತ್ವದ ದೃಢ ವಿಚಾರಗಳಿಂದ ಸದೃಢ ರಾಷ್ಟ್ರ ನಿರ್ಮಿಸಲು ಎಲ್ಲರನ್ನೂ ಒಟ್ಟುಗೂಡಿಸಲು ಸಾಧ್ಯವಿದೆ.- ಶ್ರೀ ಸತ್ಯಸ್ವರೂಪಾನಂದಜೀ, ಶ್ರೀ ರಾಮಕೃಷ್ಣ ಕುಟೀರ ಯಳಜಿತ್

     

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    four × 5 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.