Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕನ್ನಡ ಕಲಿತು ಡಿಸ್ಟಿಂಕ್ಷನಲ್ಲಿ ಪಾಸಾದ ಮಣಿಪುರ ವಿದ್ಯಾರ್ಥಿ ಬಿದ್ಯಾಸುನ್ ಸಿಂಗ್
    ವಿಶೇಷ ವರದಿ

    ಕನ್ನಡ ಕಲಿತು ಡಿಸ್ಟಿಂಕ್ಷನಲ್ಲಿ ಪಾಸಾದ ಮಣಿಪುರ ವಿದ್ಯಾರ್ಥಿ ಬಿದ್ಯಾಸುನ್ ಸಿಂಗ್

    Updated:05/06/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಶಿಕ್ಷಣ ವಂಚಿತ ಮಕ್ಕಳ ಭವಿಷ್ಯ ರೂಪಿಸುತ್ತಿರುವ ಆರ್‌ಎಸ್‌ಎಸ್ ಉದ್ದೇಶ ಸಾಕಾರ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ವರದಿ
    ಬೈಂದೂರು: ದೂರದ ಮಣಿಪುರದಿಂದ ಬೈಂದೂರು ತಾಲೂಕಿನ ಗಂಟಿಹೊಳೆಗೆ ಬಂದು, ಕನ್ನಡ ಕಲಿತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 83.04 ಅಂಕ ಗಳಿಸುವ ಮೂಲಕ ಬಾಲಕನೊಬ್ಬ ಗಮನಸೆಳೆದಿದ್ದಾನೆ. ರಾಜ್ಯಕ್ಕೆ ಬಂದಾಗ ಕನ್ನಡದಲ್ಲಿ ವ್ಯವಹರಿಸಲು ಪರದಾಡುತ್ತಿದ್ದ ಈ ಬಾಲಕ ಕನ್ನಡ ಪರೀಕ್ಷೆಯಲ್ಲೇ 108 ಅಂಕ ಗಳಿಸಿದ್ದಾನೆ.

    ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ರಾಜ್ಯದಲ್ಲೇ ಅಗ್ರ ಫಲಿತಾಂಶ ಪಡೆಯುವ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಡಿಸ್ಟಿಂಕ್ಷನಲ್ಲಿ ತೇರ್ಗಡೆ ಹೊಂದುವುದು ಅಚ್ಚರಿ ವಿಷಯವೇನಲ್ಲ. ಆದರೆ ಮಣಿಪುರ ವಿದ್ಯಾರ್ಥಿಯ ಸಾಧನೆ ಕಡಿಮೆ ಇಲ್ಲ.

    ಮಣಿಪುರ ರಾಜ್ಯದ ಹೈರೋಕ್ ಎಂಬ ಪುಟ್ಟ ಹಳ್ಳಿಯಲ್ಲಿ ಬಡ ಕೃಷಿ ಕೂಲಿ ಕಾರ್ಮಿಕರ ಮನೆಯಲ್ಲಿ ಹುಟ್ಟಿದ ಕುಂದ್ರಕ್ಟಮ್ ಬಿದ್ಯಾಸುನ್ ಸಿಂಗ್ ಈ ಸಾದನೆ ಮಾಡಿದ ಬಾಲಕ. ಹತ್ತಾರು ವರ್ಷಗಳಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್)ವು ಈಶಾನ್ಯ ರಾಜ್ಯಗಳಲ್ಲಿ ನಾನಾ ಕಾರಣಗಳಿಂದ ಶಿಕ್ಷಣ ವಂಚಿತರಾದ ಸಾವಿರಾರು ವಿದ್ಯಾರ್ಥಿಗಳನ್ನು ಕರ್ನಾಟಕ, ಆಂಧ್ರಪ್ರದೇಶ, ಕೇರಳ ರಾಜ್ಯಗಳಿಗೆ ಕರೆ ತಂದು ಅವರಿಗೆ ಸೂಕ್ತ ಶಿಕ್ಷಣದ ವ್ಯವಸ್ಥೆ ಮಾಡಿಕೊಡುತ್ತಿದೆ. ಇದೇ ರೀತಿ ಆರ್‌ಎಸ್‌ಎಸ್ ಮೂಲಕ 5ನೇ ವಯಸ್ಸಿನಲ್ಲಿದ್ದಾಗ ಕರ್ನಾಟಕಕ್ಕೆ ಬಂದ ಬಿದ್ಯಾಸುನ್, ಬೈಂದೂರು ತಾಲೂಕಿನ ಉಪ್ಪುಂದದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 1ನೇ ತರಗತಿಗೆ ಸೇರಿದ. ಸಂಘದ ಸ್ಥಳೀಯ ಕಾರ್ಯಕರ್ತ ಗುರುರಾಜ್ ಗಂಟಿಹೊಳೆ ಅವರ ಮನೆಯಲ್ಲಿ ತನ್ನಂತೆಯೇ ಬಂದಿದ್ದ 17 ಮಂದಿ ಮಣಿಪುರಿ ವಿದ್ಯಾರ್ಥಿಗಳೊಂದಿಗೆ ಆಶ್ರಯ ಪಡೆದು ಶಿಕ್ಷಣ ಮುಂದುವರೆಸಿದ್ದಾನೆ.

    ವ್ಯಾಸಂಗದಲ್ಲಿ ಆಸಕ್ತಿ ಹೊಂದಿದ್ದ ಬಿದ್ಯಾಸುನ್, ಆರಂಭದಲ್ಲಿ ಕನ್ನಡ ಭಾಷೆ ಬಾರದೇ ಸಾಕಷ್ಟು ಕಷ್ಟಪಟ್ಟ. ಆದರೆ, ಬಹುಬೇಗ ಕನ್ನಡ ಕಲಿತ. ಹಿಂದಿ ಮಾತನಾಡುತ್ತಿದ್ದ ಈತ ಇತರ ಮಣಿಪುರಿ ವಿದ್ಯಾರ್ಥಿಗಳಿಗೂ ಕನ್ನಡ ಕಲಿಸಿಕೊಟ್ಟ. ಇದನ್ನು ಗಮನಿಸಿದ ಆತನ ಶಾಲೆಯ ಶಿಕ್ಷಕರು, ಮಣಿಪುರ ವಿದ್ಯಾರ್ಥಿಗಳೊಂದಿಗೆ ಕನ್ನಡದಲ್ಲಿ ವ್ಯವಹರಿಸಲು ಬಿದ್ಯಾಸುನ್ಗೆ ಸೂಚಿಸಿದರು. ಇದರಿಂದಾಗಿ ಇತರ ಮಣಿಪುರಿ ವಿದ್ಯಾರ್ಥಿಗಳು ಕನ್ನಡ ಕಲಿಯಲು ಸುಲಭವಾಯಿತು.

    Click here

    Click here

    Click here

    Click Here

    Call us

    Call us

    ಕನ್ನಡ ಭಾಷೆಯನ್ನಷ್ಟೇ ಅಲ್ಲ. ಇಲ್ಲಿನ ಆಹಾರ, ಬಟ್ಟೆ, ಜೀವನಪದ್ಧತಿ, ಹವಾಮಾನ , ಸಂಸ್ಕ್ರತಿಗಳಿಗೆ ಈತ ಹೊಂದಿಸಿಕೊಂಡ. ಹೆತ್ತವರನ್ನು ಬಿಟ್ಟು ದೂರವಿರುವ ನೋವಿನ ನಡುವೆಯೂ, ಬಿದ್ಯಾಸುನ್ ಊರಿನ ನಾಟಕ, ಯಕ್ಷಗಾನ, ಹಬ್ಬ, ಜಾತ್ರೆ, ಸಾಂಸ್ಕ್ರತಿಕ ಕಾರ್ಯಕ್ರಮಗಳಲ್ಲಿ ತನ್ನನ್ನು ತೊಡಗಿಸಿಕೊಳ್ಳುತ್ತಿದ್ದ. ಒಮ್ಮೆ ಅಯ್ಯಪ್ಪ ವ್ರತಧಾರಿಯಾಗಿ, ಶಬರಮಲೆಗೂ ಹೋಗಿ ಬಂದ. 10 ವರ್ಷ ಕರ್ನಾಟಕದಲ್ಲೇ ಕಳೆದ ಬಿದ್ಯಾಸುನ್, ಇದೀಗ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.83.04 ಅಂಕ ಗಳಿಸಿ ಸಾಧನೆ ಮಾಡಿದ್ದಾನೆ.

    ಇಲ್ಲಿನಷ್ಟು ಒಳ್ಳೆಯ ಶಿಕ್ಷಣ ನಮ್ಮಲ್ಲಿಲ್ಲ- ಬಿದ್ಯಾಸುನ್
    ಡಿಸ್ಟಿಂಕ್ಷನ್ ಸಾಧನೆ ಬಗ್ಗೆ ಪ್ರತಿಕ್ರಿಯಿಸಿರುವ ಬಿದ್ಯಾಸುನ್ , ನಮ್ಮದು ಗುಡ್ಡಗಾಡು ಪ್ರದೇಶ. ಕೃಷಿಯೇ ಅಲ್ಲಿನ ಮುಖ್ಯ ಕಸುಬು. ಶಾಲೆಗಳಿಗೆ ಹೊಗಬೇಕಾದರೆ ನಗರಗಳಿಗೆ ಹೋಗಬೇಕು. ಆದರೂ , ಅಲ್ಲಿ ಇಲ್ಲಿನಷ್ಟು ಒಳ್ಳೆಯ ಶಾಲೆ, ಶಿಕ್ಷಕರು, ಗುಣಮಟ್ಟ ಇರುವುದಿಲ್ಲ. ಹಾಗಾಗಿ , ಆರ್ಎಸ್ಎಸ್ ಮೂಲಕ ಮಣಿಪುರ, ಮೇಘಾಲಯ, ಮಿಜೋರಾಂ, ಅಸ್ಸಾಂ, ತ್ರಿಪುರಗಳಿಂದ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಇಲ್ಲಿಗೆ ಬರುತ್ತಾರೆ. ತುಂಬಾ ಜನರು ಇಲ್ಲಿ ಕಲಿತು ಪುನಃ ಅಲ್ಲಿಗೆ ಹೋಗಿ ಒಳ್ಳೆಉ ಉದ್ಯೋಗಕ್ಕೆ ಸೇರಿದ್ದಾರೆ ಎಂದು ತಿಳಿಸಿದ್ದಾನೆ

    ಈಶಾನ್ಯ ರಾಜ್ಯಗಳಲ್ಲಿ ಮತಾಂತರದ ಪಿಡುಗಿನ ಜೊತೆಗೆ ಪ್ರತ್ಯೇಕತಾವಾದವೂ ಬೆಳೆಯುತ್ತಿದೆ. ಇದರಿಂದಾಗಿ ಶಿಕ್ಷಣ ಇಲ್ಲದೇ ಯುವಕರು ಭಯೋತ್ಪಾದನಾ ಚಟುವಟಿಕೆಗಳಿಗೆ ಸೇರುತ್ತಿದ್ದಾರೆ. ಇದನ್ನು ತಪ್ಪಿಸಲು ಸಂಘವು ಅವರನ್ನು ಕರೆತಂದು ರಾಷ್ಟ್ರೀಯತೆ ಬಿತ್ತುವ ಕೆಲಸ ಮಾಡುತ್ತಿದೆ. ಬಿದ್ಯಾಸುನ್ನಂತೆ ಸಾವಿರಾರು ವಿದ್ಯಾರ್ಥಿಗಳು ಸಂಘದ ಉದ್ದೇಶ ಈಡೇರಿಸುತ್ತಿದ್ದಾರೆ.- ಗುರುರಾಜ್ ಗಂಟಿಹೊಳೆ ಆರ್‌ಎಸ್‌ಎಸ್ ಕಾರ್ಯಕರ್ತ

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024
    Leave A Reply Cancel Reply

    eighteen + five =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.