Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎಳಜಿತ: ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿಯವರ ಶ್ರೀ ರಾಮಕೃಷ್ಣ ಕುಟೀರ ಲೋಕಾರ್ಪಣೆ
    Uncategorized

    ಎಳಜಿತ: ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿಯವರ ಶ್ರೀ ರಾಮಕೃಷ್ಣ ಕುಟೀರ ಲೋಕಾರ್ಪಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಸಮಾಜ ಸುಧಾರಣೆಗಾಗಿ, ಹಿಂದೂ ತತ್ವದ ಜಾಗೃತಿಗಾಗಿ ಸರ್ವವನ್ನು ಪರಿತ್ಯಜಿಸಿ ಸಂನ್ಯಾಸ ಸ್ವೀಕರಿಸಿರುವುದು ಬದುಕಿನ ದೊಡ್ಡ ನಿರ್ಧಾರವೇ ಸರಿ. ರಾಜಕೀಯ ಕಾರಣದಿಂದಾಗಿ ಮುಸುಕಾಗಿ ಕಾಣುತ್ತಿರುವ ಹಿಂದೂ ಧರ್ಮ ಸದಾ ಪ್ರಜ್ವಲಿಸುತ್ತಿರಬೇಕಾದರೆ ಭಗವದ್ಗೀತೆ ಹಾಗೂ ಧಾರ್ಮಿಕ ಗ್ರಂಥಗಳ ಪಠಣ ನಿರಂತರ ನಡೆಯುದವರ ಜೊತೆಗೆ ಸಂತರ ಧರ್ಮ ಜಾಗೃತಿಗಾಗಿ ಕಾರ್ಯವೂ ಅಗತ್ಯವಾಗಿದೆ ಎಂದು ಗೋಕರ್ಣ ಮಾದನಗಿರಿ ಶ್ರೀ ಸಿದ್ಧಿವಿನಾಯಕ ಮಹಾಲಸ ನಾರಾಯಣ ದೇವಸ್ಥಾನದ ಮೊಕ್ತೇಸರರಾದ ಸುನಿಲ್ ಪೈ ಹೇಳಿದರು.

    Click Here

    Call us

    Click Here

    ಅವರು ಏಳಜಿತದಲ್ಲಿ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರ ಶ್ರೀ ರಾಮಕೃಷ್ಣ ಕುಟೀರವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿದರು. ಬದುಕಿನಲ್ಲಾಗುವ ಘಟನೆಗಳೇ ನಮ್ಮನ್ನು ಬದಲಿಸಿ ಸಾಕ್ಷಾತ್ಕಾರದೆಡೆಗೆ ಕರೆದೊಯ್ಯುತ್ತದೆ. ಮನುಷ್ಯನ ಅಂತಸ್ತಿನ ಆಧಾರದಲ್ಲಿ ಸ್ನೇಹವನ್ನು ಸರಿದೂಗಿಸಲು ಸಾಧ್ಯವಿಲ್ಲ. ಅಂತಸ್ತು ಇದ್ದಾಗಲೂ ಇಲ್ಲದಾಗಲೂ ಇರುವ ಪ್ರೀತಿ, ವಿಶ್ವಾಸವೇ ಬದುಕಿನಲ್ಲಿ ಮುಖ್ಯವಾದದ್ದು ಎಂದರು.

    ಶ್ರೀ ಭಗವದ್ಗೀತಾ ಅಭಿಯಾನದ ಜಿಲ್ಲಾ ಸಂಚಾಲಕ ಬಿ. ರಾಮಕೃಷ್ಣ ಶೇರುಗಾರ್ ಮಾತನಾಡಿ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿವರು ತಮ್ಮ ಪೂರ್ವಾಶ್ರಮದಲ್ಲಿ ಸಾಂಸ್ಕೃತಿಕ ಸಂಘದ ಮೂಲಕ ಸಂಗೀತ ಮಾತ್ರವಲ್ಲದೇ ಶೈಕ್ಷಣಿಕವಾಗಿಯೂ ಹಲವಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿದ್ದಾರೆ. ಭಗವದ್ಗೀತೆ ಅಭಿಯಾನ, ಪುಸ್ತಕ ಪ್ರಕಟಣೆಯ ಮೂಲಕ ಧಾರ್ಮಿಕ ಜಾಗೃತಿ ಮೂಡಿಸುತ್ತಲೇ ಬಂದಿದ್ದಾರೆ. ಅವರು ಸಂನ್ಯಾಸ ಸ್ವೀಕರಿಸಿರುವುದು ಸಮಾಜದ ಉನ್ನತಿಯ ಬಗೆಗೆ ಅವರಲ್ಲಿನ ಕಳಕಳಿ ಸೂಚಿಸುತ್ತದೆ ಎಂದರು.

    ನಿವೃತ್ತ ಮುಖ್ಯೋಪಧ್ಯಾಯ ವಿಶ್ವೇಶ್ವರ ಮಯ್ಯ ಉಪಸ್ಥಿತರಿದ್ದರು. ಶ್ರೀ ಸಿದ್ಧಿವಿನಾಯಕ ಸಾಂಸ್ಕೃತಿಕ ಕೇಂದ್ರದ ವಿದ್ಯಾರ್ಥಿಗಳು ಶ್ರೀ ಭಗವದ್ಗೀತಾ ಸ್ತೋತ್ರ ಪಠಣ, ಭಜನಾ ಕಾಯಕ್ರಮಗಳನ್ನು ನಡೆಸಿದರು. ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.

    ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎಳಜಿತ ಶ್ರೀ ಸಿದ್ಧಿವಿನಾಯಕ ಸಾಂಸ್ಕೃತಿಕ ಕೇಂದ್ರದ ಕಾರ್ಯದರ್ಶಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    04/06/2026

    ಉಡುಪಿ: ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

    30/05/2026

    ಕೊಲ್ಲೂರು ಅಪಘಾತದಲ್ಲಿ ಮೃತ ಮಹಿಳೆಯ ಚಿನ್ನ ಕದ್ದ ಪ್ರಕರಣ: ಆರೋಪಿ ಹೇಮಂತ್ ಬಂಧನ

    26/05/2026
    Leave A Reply Cancel Reply

    five × two =

    Call us

    Click Here

    Call us

    Call us

    Call us
    Highest Viewed Recently
    • ಪ್ರಕೃತಿಗೆ ಮರಳಿ ನೀಡದೆ ಪ್ರತಿಕ್ಷಣ ಬಳಸುತ್ತಿದ್ದೇವೆ: ಆರ್.ಕೆ. ನಾಯರ್
    • ಕೋಟೇಶ್ವರ: ಕಂಟೇನ‌ರ್ ಲಾರಿ ಹಾಗೂ ಬೈಕ್‌ ನಡುವೆ ಭೀಕರ ಅಪಘಾತ – ಬೈಕ್‌ ಸವಾರ ಸಾವು
    • ಸಾಸ್ತಾನ: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ನೋಟ್ ಬುಕ್ ವಿತರಣೆ, ಪ್ರತಿಭಾ ಪುರಸ್ಕಾರ ಸಮಾರಂಭ
    • ಕುಂದಾಪುರ ಶಾಸಕರ ಅಧಿಕಾರ ವೀಕೆಂದ್ರಿಕರಣ ವಿರೋಧಿ ಮನಸ್ಥಿತಿ: ಕೆ. ವಿಕಾಸ್ ಹೆಗ್ಡೆ
    • ಬೆಳ್ವೆ: ಕುಂದಾಪುರ ಶಾಸಕ ಹಾಗೂ ಸಂಸದರಿಂದ ಮಲ್ಟಿ ಪರ್ಪಸ್ ಸೆಂಟರ್ ವೀಕ್ಷಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.