Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ್ರತಿಷ್ಠಿತ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಜೋಗಿ ಆಯ್ಕೆ
    ಉಡುಪಿ ಜಿಲ್ಲೆ

    ಪ್ರತಿಷ್ಠಿತ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಜೋಗಿ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ (ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನ ಸಂಸ್ಥೆ) ವತಿಯಿಂದ ಕೊಡಮಾಡುವ ಪ್ರತಿಷ್ಠಿತ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರತಿಕೋದ್ಯಮ ಪ್ರಶಸ್ತಿಗೆ ಈ ಬಾರಿ ಖ್ಯಾತ ಸಾಹಿತಿ, ಪತ್ರಕರ್ತ ಜೋಗಿ ಆಯ್ಕೆಯಾಗಿದ್ದಾರೆ. ಆ.೫ರಂದು ಬ್ರಹ್ಮಾವರ ಬಂಟರ ಭವನದಲ್ಲಿ ಗಣ್ಯರ ಸಮ್ಮುಖದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ‍್ಯ ಕೋಟದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    Click Here

    Call us

    Click Here

    ವಡ್ಡರ್ಸೆ ರಘುರಾಮ ಶೆಟ್ಟಿಯವರು ಪತ್ರಿಕೋದ್ಯಮವನ್ನು ಸಮಾಜಶಾಸ್ತ್ರೀಯ ದೃಷ್ಠಿಕೋನದೊಂದಿಗೆ ಕಂಡವರು ಹಾಗೂ ‘ಮುಂಗಾರು’ ಪತ್ರಿಕೆಯನ್ನ ಮುನ್ನೆಡೆಸಿ ನೂರಾರು ಯುವ ಪತ್ರಕರ್ತರನ್ನ ರೂಪುಗೊಳಿಸಿದವರು. ಡೆಕ್ಕನ್ ಹೆರಾಲ್ಡ್, ಪ್ರಜಾವಾಣಿ ಪತ್ರಿಕೆಯಲ್ಲಿ ಸುಧೀರ್ಘ ಕಾಲ ಪತ್ರಕರ್ತರಾಗಿ ದುಡಿದಿದ್ದಾರೆ. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಿಕರ್ತರ ಸಂಘದ ರಾಜ್ಯಾಧ್ಯಕ್ಷರಾಗಿ ಕೂಡ ಕಾರ‍್ಯ ನಿರ್ವಹಿಸಿದ್ದಾರೆ. ಆದ್ದರಿಂದ ಕಳೆದ ಎರಡು ವರ್ಷದಿಂದ ಇವರ ಹೆಸರಿನಲ್ಲಿ ಬ್ರಹ್ಮಾವರ ಪತ್ರಕರ್ತರ ಸಂಘ ಪತ್ರಿಕೋದ್ಯಮ ಕ್ಷೇತ್ರದಲ್ಲಿ ದುಡಿದವರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಈ ಹಿಂದೆ ಸುವರ್ಣ ನ್ಯೂಸ್‌ನ ಕವರ್ ಸ್ಟೋರಿ ಖ್ಯಾತಿಯ ವಿಜಯಲಕ್ಷ್ಮಿ ಶಿಬರೂರ್, ಹಾಯ್ ಬೆಂಗಳೂರ್ ಸಂಪಾದಕ ಪ್ರಖ್ಯಾತ ಸಾಹಿತಿ ರವಿ ಬೆಳಗೆರೆ ಈ ಪ್ರಶಸ್ತಿಗೆ ಭಾಜನರಾಗಿದ್ದರು ಎಂದರು.

    ಈ ಬಾರಿ ಪ್ರಶಸ್ತಿಗೆ ಆಯ್ಕೆಯಾಗಿರುವ ಜೋಗಿ ಅವರ ಮೂಲ ಹೆಸರು ಗಿರೀಶ್ ರಾವ್ ಹತ್ವಾರ್. ಇವರು ಜಾನಕಿ ಕಾಲಂ ಅಂಕಣದ ವಿಭಿನ್ನಶೈಲಿಯ ಕಥನ, ಕಾದಂಬರಿಗಳ ಮೂಲಕ ಹಾಗೂ ಪತ್ರಕರ್ತರಾಗಿ ಪ್ರಖ್ಯಾತರಾದವರು ಎಂದು ಕಾರ್ಯಕ್ರಮದ ಸಂಚಾಲಕ ವಸಂತ್ ಗಿಳಿಯಾರ್ ತಿಳಿಸಿದರು. ಸಂಘದ ಕಾರ್ಯದರ್ಶಿ ರಾಜೇಶ ಗಾಣಿಗ ಅಚ್ಲಾಡಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    1 × 4 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.