Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾವು ಬೆಳೆದು ಜಗತ್ತನ್ನು ಬೆಳಗಲು ಜೆಸಿಐ: ಎಎಸ್‌ಎನ್ ಹೆಬ್ಬಾರ್
    ಊರ್ಮನೆ ಸಮಾಚಾರ

    ನಾವು ಬೆಳೆದು ಜಗತ್ತನ್ನು ಬೆಳಗಲು ಜೆಸಿಐ: ಎಎಸ್‌ಎನ್ ಹೆಬ್ಬಾರ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು : ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಪ್ರತಿಭೆ ಇದೆ. ಆದರೆ ಅದರ ವಿಕಾಸಕ್ಕೆ ವೇದಿಕೆ ಬೇಕು. ಜೇಸಿಐ ಅಂತಹ ವೇದಿಕೆ ಎಂದು ಕುಂದಾಪುರ ಜೇಸಿಐ ಸ್ಥಾಪಕಾಧ್ಯಕ್ಷ ಎ. ಎಸ್. ಎನ್. ಹೆಬ್ಬಾರ್ ಹೇಳಿದರು.

    Click Here

    Call us

    Click Here

    ಶನಿವಾರ ಬೈಂದೂರು ರೋಟರಿ ಸಮುದಾಯ ಭವನದಲ್ಲಿ ನಡೆದ ಬೈಂದೂರು ಜೇಸಿಐ ಉದ್ಘಾಟನೆ ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಅವರು ಮಾತನಾಡಿದರು.
    ಜೇಸಿ ಧ್ಯೇಯವಾಕ್ಯವು ದೇವರಲ್ಲಿ ನಂಬಿಕೆ ಇರಿಸಿಕೊಳ್ಳಬೇಕು ಎನ್ನುತ್ತದೆ. ಆದರೆ ವ್ಯಕ್ತಿಯ ಉದ್ದಾರಕ್ಕೆ ಅದಷ್ಟೇ ಸಾಲದು. ಅದರೊಂದಿಗೆ ಸ್ವಪ್ರಯತ್ನವೂ ಅಗತ್ಯ. ಜೇಸಿ ವ್ಯಕ್ತಿಯ ವಿಕಾಸಕ್ಕೆ ಆದ್ಯತೆ ನೀಡುತ್ತದೆ. ಆ ಮೂಲಕ ಜೇಸಿ ಸದಸ್ಯ ತನ್ನ ಸಾಮಾಜಿಕ ಹೊಣೆ ನಿಭಾಯಿಸುದರ ಜತೆಗೆ ಕೈಗೊಳ್ಳುವ ಉದ್ಯೋಗದಲ್ಲಿ ಯಶಸ್ಸು ಪಡೆಯುವುದೂ ಸಾಧ್ಯವಾಗಬೇಕು ಎನ್ನುವ ಗುರಿ ಹೊಂದಿದೆ ಎಂದು ಅವರು ಹೇಳಿದರು.

    ಶಿರೂರು ಜೇಸಿಐ ಪ್ರವರ್ತಿಸಿದ ಬೈಂದೂರು ಸಿಟಿ ಘಟಕವನ್ನು ಉದ್ಘಾಟಿಸಿದ ವಲಯಾಧ್ಯಕ್ಷ ರಾಕೇಶ್ ಕುಂಜೂರ್ ಮಾತನಾಡಿ ಜೇಸಿಐ ವಿಶಾಲ ಸಮುದ್ರ. ಸಮುದ್ರದಲ್ಲಿ ಇರುವ ಮುತ್ತುರತ್ನಗಳು ತೀರದಲ್ಲಿ ನಿಂತು ನೋಡುವವರಿಗೆ ಸಿಗದು. ಅವುಗಳನ್ನು ಪಡೆಯಲು ಸಮುದ್ರದ ಆಳಕ್ಕೆ ಇಳಿಯಬೇಕು. ಜೇಸಿಯಲ್ಲಿ ಹಾಗೆ ತೊಡಗಿಕೊಂಡರೆ ಮಾತ್ರ ಅದು ನೀಡುವ ಫಲಗಳನ್ನು ಪಡೆಯಬಹುದು ಎಂದರು.

    ವಲಯ ಉಪಾಧ್ಯಕ್ಷ ರಾಘವೇಂದ್ರ ಪ್ರಭು ಘಟಕಾಧ್ಯಕ್ಷ ಮಣಿಕಂಠ ದೇವಾಡಿಗ ಮತ್ತು ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಯಶಸ್ಸು ಕೋರಿದರು. ಅತಿಥಿಗಳಾಗಿದ್ದ ಜೇಸಿರೇಟ್ ವಿಭಾಗದ ಮಾಜಿ ಸಂಯೋಜಕಿ ರೋಪಶ್ರೀ ರತ್ನಾಕರ್, ವಲಯ ನಿರ್ದೇಶಕ ಕಾರ್ತಿಕೇಯ ಮಧ್ಯಸ್ಥ, ಮಣಿಪಾಲ ಹಿಲ್ ಸಿಟಿ ಘಟಕದ ಮಾಜಿ ಅಧ್ಯಕ್ಷ ಲಕ್ಷ್ಮೀಕಾಂತ ಬೆಸ್ಕೂರ್ ಶುಭ ಹಾರೈಸಿದರು.

    ಶಂಕರ ದೇವಾಡಿಗ ಜೇಸಿ ವಾಣಿ ಪಠಿಸಿದರು. ಶಿರೂರು ಘಟಕಾಧ್ಯಕ್ಷ ಪಾಂಡುರಂಗ ಅಳ್ವೆಗದ್ದೆ ಸ್ವಾಗತಿಸಿದರು. ಬೈಂದೂರು ಘಟಕದ ಕಾರ್ಯದರ್ಶಿ ಎಚ್. ಸುಶಾಂತ್ ವಂದಿಸಿದರು. ಶಿರೂರು ಘಟಕದ ಕಾರ್ಯದರ್ಶಿ ಸುರೇಶ ಮಾಕೋಡಿ, ಜೇಸಿರೇಟ್ ಅಧ್ಯಕ್ಷೆ ವೀರಮ್ಮ, ಜೂನಿಯರ್ ಜೇಸಿ ಅಧ್ಯಕ್ಷ ಆದರ್ಶ ಶೇಟ್, ನಿಕಟಪೂರ್ವ ಅಧ್ಯಕ್ಷ ಅರುಣಕುಮಾರ್, ಬೈಂದೂರು ಜೇಸಿರೇಟ್ ಅಧ್ಯಕ್ಷೆ ಪ್ರಿಯದರ್ಶಿನಿ ಬೆಸ್ಕೂರ್, ಜೂನಿಯರ್ ಜೇಸಿ ಅಧ್ಯಕ್ಷ ಅಖಿಲೇಶ್ ಇದ್ದರು.

    Click here

    Click here

    Click here

    Call us

    Call us

     

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025

    ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು

    19/12/2025

    ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.