Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉನ್ನತ ಜೀವನಧರ್ಮ, ಸರಳ ವ್ಯಾವಹಾರಿಕ ನೀತಿ ಸಾರುವ ವಚನಕ್ಕೆ ವಿಶ್ವ ಸಾಹಿತ್ಯದಲ್ಲಿ ಸ್ಥಾನ
    ಊರ್ಮನೆ ಸಮಾಚಾರ

    ಉನ್ನತ ಜೀವನಧರ್ಮ, ಸರಳ ವ್ಯಾವಹಾರಿಕ ನೀತಿ ಸಾರುವ ವಚನಕ್ಕೆ ವಿಶ್ವ ಸಾಹಿತ್ಯದಲ್ಲಿ ಸ್ಥಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ವಚನಗಳು ಸಾರುವ ಉನ್ನತ ಜೀವನಧರ್ಮ ಸರಳ ವ್ಯಾವಹಾರಿಕ ನೀತಿಯ ಕಾರಣದಿಂದ ವಿಶ್ವ ಸಾಹಿತ್ಯದಲ್ಲಿ ಸ್ಥಾನ ಪಡೆದಿವೆ. ಭಾರತದ ಎಲ್ಲ ಭಾಷೆಗಳಿಗೆ, ಹಲವು ವಿದೇಶಿ ಭಾಷೆಗಳಿಗೆ ಅನುವಾದಗೊಂಡು ಎಲ್ಲೆಡೆಯ ಪ್ರಜ್ಞಾವಂತರ ಗಮನ ಸೆಳೆದಿವೆ ಎಂದು ಬೈಂದೂರು ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಯು. ಚಂದ್ರಶೇಖರ ಹೊಳ್ಳ ಹೇಳಿದರು.

    Click Here

    Call us

    Click Here

    ಶರಣ ಸಾಹಿತ್ಯ ಪರಿಷತ್ತು ಮತ್ತು ನಾಗೂರಿನ ಸಂದೀಪನ್ ಶಾಲೆಯ ಕನ್ನಡ ಸಾಹಿತ್ಯ ಸಂಘದ ಜಂಟಿ ಆಶ್ರಯದಲ್ಲಿ ಗುರುವಾರ ನಡೆದ ವಚನ ದಿನಾಚರಣೆಯಲ್ಲಿ ಅವರು ’ವಚನ ಸಾಹಿತ್ಯದಲ್ಲಿ ವಿಶ್ವ ಮೌಲ್ಯಗಳು’ ಕುರಿತು ಉಪನ್ಯಾಸ ನೀಡಿದರು.

    ಬಸವಣ್ಣನವರು ಯಜ್ಞಯಾಗಗಳನ್ನು, ಜಾತಿ ವ್ಯವಸ್ಥೆ ಮತ್ತು ಅಂಧಾನುಕರಣೆಯನ್ನು ವಿರೋಧಿಸಿದರು. ಸ್ತ್ರೀಪುರುಷ ಸಮಾನತೆಯನ್ನು ಪ್ರತಿಪಾದಿಸಿದರು. ಕಾಯಕದ ಬದುಕಿಗೆ ಆದ್ಯತೆ ನೀಡಿದರು. ಎಲ್ಲರೂ ಅನುಸರಿಸಬಹುದಾದ ಬದುಕಿನ ಸರಳ ಮಾರ್ಗವನ್ನು ಜನರಿಗೆ ಬೋಧಿಸಿದರು. ಪ್ರಖರ ವೈಚಾರಿಕತೆಯನ್ನು ಮೆರೆದರು. ಇವೆಲ್ಲವೂ ಅವರ, ಅಕ್ಕ ಮಹಾದೇವಿಯ, ಅಲ್ಲಮರ ಮತ್ತು ನೂರಾರು ವಚನಕಾರರ ವಚನಗಳಲ್ಲಿ ಪ್ರಕಟಗೊಂಡಿವೆ. ಎಲ್ಲರಿಗೆ ಅರ್ಥವಾಗುವ ಸರಳ ಭಾಷೆಯಲ್ಲಿ ರಚನೆಯಾದ ವಚನಗಳು ಕನ್ನಡ ಸಾಹಿತ್ಯದ ಪ್ರಮುಖ ಪ್ರಕಾರವಾಗಿ ಗುರುತಿಸಲ್ಪಟ್ಟಿವೆ. ಕನ್ನಡ ಪದ ಸಂಪತ್ತಿಗೆ ವಚನಕಾರರಿಂದ ವಿಶೇಷ ಕೊಡುಗೆ ಸಂದಿದೆ ಎಂದು ಅವರು ಹೇಳಿದರು.

    ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಬಿ. ವಿಶ್ವೇಶ್ವರ ಅಡಿಗ ವಚನಗಳಲ್ಲಿ ಅಮೂಲ್ಯ ಸಂಪತ್ತು ಅಡಗಿದೆ. ಅವುಗಳನ್ನು ಓದುವುದರಿಂದ ಜ್ಞಾನ ಮತ್ತು ವೈಚಾರಿಕತೆ ನಮ್ಮದಾಗುತ್ತದೆ. ಸಾಹಿತ್ಯಾಭಿರುಚಿ ವೃದ್ಧಿಸುತ್ತದೆ. ಅನುಸರಿಸುವುದರಿಂದ ಸರಳ ಮತ್ತು ಅರ್ಥಪೂರ್ಣ ಜೀವನಮಾರ್ಗ ನಮ್ಮದಾಗುತ್ತದೆ ಎಂದರು.

    ಶಿಕ್ಷಕಿ ಶ್ರೀಲತಾ ಸ್ವಾಗತಿಸಿದರು. ರಶ್ಮಿ ವಂದಿಸಿದರು. ರಾಜೇಶ್ ಸಹಕರಿಸಿದರು. ವಿದ್ಯಾರ್ಥಿನಿ ನಿಸರ್ಗ ನಿರೂಪಿಸಿದರು. ಕಾರ್ಯಕ್ರಮದ ಅಂಗವಾಗಿ ನಡೆಸಿದ್ದ ವಚನ ಗಾಯನ ಸ್ಪರ್ಧೆಯಲ್ಲಿ ವಿಜೇತರಾದ, ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ, ಪುಸ್ತಕ ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು. ವಿದ್ಯಾರ್ಥಿಗಳು ವಚನ ಗಾಯನ ಪ್ರಸ್ತುತಪಡಿಸಿದರು. ಪರಿಷತ್ತಿನ ಕಾರ್ಯದರ್ಶಿ ಗಣೇಶಪ್ರಸನ್ನ ಮಯ್ಯ ಇದ್ದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.