Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ನುಡಿಸಿರಿ 2018: ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಮಲ್ಲಿಕಾ ಎಸ್. ಘಂಟಿ
    alvas nudisiri

    ಆಳ್ವಾಸ್ ನುಡಿಸಿರಿ 2018: ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಮಲ್ಲಿಕಾ ಎಸ್. ಘಂಟಿ

    Updated:20/09/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ 15ನೇ ವರ್ಷದ ನಾಡು-ನುಡಿ-ಸಂಸ್ಕೃತಿಯ ಸಮ್ಮೇಳನ ‘ಆಳ್ವಾಸ್ ನುಡಿಸಿರಿ’ಯ ಸರ್ವಾಧ್ಯಕ್ಷರಾಗಿ ಸಾಹಿತಿ ಡಾ.ಮಲ್ಲಿಕಾ ಎಸ್‌ಘಂಟಿ ಅವರನ್ನು ಮತ್ತು ಉದ್ಘಾಟಕರಾಗಿ ಡಾ.ಷ.ಶೆಟ್ಟರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

    Click Here

    Call us

    Click Here

    ಈ ಬಾರಿ ‘ಕರ್ನಾಟಕ ದರ್ಶನ – ಬಹುರೂಪಿ ಆಯಾಮಗಳು’ ಎಂಬ ಪ್ರಧಾನ ಪರಿಕಲ್ಪನೆಯೊಂದಿಗೆ ಆಳ್ವಾಸ್ ನುಡಿಸಿರಿ-2018 ಸಮ್ಮೇಳನವು ನವೆಂಬರ್ 16, 17 ಮತ್ತು 18ರಂದು ಮೂಡುಬಿದಿರೆಯ ವಿದ್ಯಾಗಿರಿಯ ಶ್ರೀಮತಿ ಸುಂದರಿ ಆನಂದ ಆಳ್ವ ಆವರಣದಲ್ಲಿರುವ ಕವಿ ರತ್ನಾಕರವರ್ಣಿ ವೇದಿಕೆ, ಆಳ್ವಾಸ್ ನುಡಿಸಿರಿ ಸಭಾಂಗಣದಲ್ಲಿ ಜರುಗಲಿ

    ನಾಡು ನುಡಿಯ ಸಮ್ಮೇಳನಕ್ಕೊಂದು ಆಹ್ವಾನ: ಆಳ್ವಾಸ್ ನುಡಿಸಿರಿ 2018ರ ಸಮ್ಮೇಳನದಲ್ಲಿ ವಿದ್ಯಾರ್ಥಿಗಳು ಪ್ರತಿನಿಧಿ ಶುಲ್ಕವಿಲ್ಲದೆ ಸಂಪೂರ್ಣಉಚಿತವಾಗಿ ಭಾಗವಹಿಸಬಹುದು.ಭಾಗವಹಿಸುವ ವಿದ್ಯಾರ್ಥಿಗಳು ಆಯಾ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರದೃಢೀಕರಣಪತ್ರವನ್ನು ಹೊಂದಿರಬೇಕು.ಇತರರಿಗೆ ಮೂರು ದಿನಗಳ ಊಟ, ವಸತಿಗಳು ಉಚಿತವಾಗಿದ್ದು ರೂ.೧೦೦ ಪ್ರತಿನಿಧಿ ಶುಲ್ಕದೊಂದಿಗೆ ಸಮ್ಮೇಳನವನ್ನು ಕಣ್ತುಂಬಿಸಿಕೊಳ್ಳಬಹುದು.ಖ್ಯಾತ ಸಾಹಿತಿಗಳು, ವಿಮರ್ಶಕರು, ಸಂಶೋಧಕರು, ಕಲಾವಿದರು ಹಾಗೂ ಕನ್ನಡ ಬಾಂಧವರುಒಟ್ಟು ಸೇರುವ ಈ ಸಮ್ಮೇಳನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಮೂಲಕ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದರು.

    ಸಂಪರ್ಕಕ್ಕಾಗಿ: 08258-261229, Email : nudisiri@alvas.org nudisiri@alvas.org

    ಆಳ್ವಾಸ್ ನುಡಿಸಿರಿಯ ಕಾರ್ಯದರ್ಶಿ ವೇಣುಗೋಪಾಲ ಶೆಟ್ಟಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಪಿ.ಆರ್.ಒ ಡಾ.ಪದ್ಮನಾಭ ಶೆಣೈ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಡಾ.ಮಲ್ಲಿಕಾಎಸ್.ಘಂಟಿ ಪರಿಚಯ:
    ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಅಗಸಬಾಳು ಇವರ ಹುಟ್ಟೂರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಪದವಿ, ಸ್ನಾತಕೋತ್ತರ ಪದವಿ ಹಾಗೂ ’ಕನ್ನಡದಲ್ಲಿ ಮಹಿಳಾ ಕಥಾ ಸಾಹಿತ್ಯ’ವೆಂಬ ವಿಷಯಕ್ಕೆ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಗುಲ್ಬರ್ಗಾ ವಿಶ್ವವಿದ್ಯಾನಿಲಯ, ಸ್ನಾತಕೋತ್ತರ ಕೇಂದ್ರ ನಂದಿಹಳ್ಳಿಗಳಲ್ಲಿ ಪ್ರಾಧ್ಯಾಪಕಿಯಾಗಿ ಸುದೀರ್ಘ ಸೇವೆ ಸಲ್ಲಿಸಿದ ಇವರು ಡೀನ್ ಆಗಿ, ಕುವೆಂಪು ವಿಶ್ವವಿದ್ಯಾನಿಲಯದ ಕುಲಸಚಿವರಾಗಿ ಆಡಳಿತಾನುಭವವನ್ನು ಪಡೆದುಕೊಂಡವರು. ಕನ್ನಡ ವಿಶ್ವವಿದ್ಯಾನಿಲಯ, ಹಂಪಿಯ ಕುಲಪತಿಗಳಾಗಿ 2015ರಲ್ಲಿ ಅಧಿಕಾರ ವಹಿಸಿಕೊಂಡ ಇವರು ಈಗ ಎರಡನೆಯಅವಧಿಗೆ ಕುಲಪತಿಗಳಾಗಿ ಮುಂದುವರಿದಿದ್ದಾರೆ. ಪ್ರಾಧ್ಯಾಪಕಿ, ಸಾಹಿತಿ, ವಿಮರ್ಶಕಿ, ಸಂಶೋಧಕಿ, ಸಂಪಾದಕಿಯಾಗಿ ಬಹುಮುಖ ಪ್ರತಿಭೆಯ ಡಾ. ಮಲ್ಲಿಕಾ ಎಸ್. ಘಂಟಿಯವರು ಸಮರ್ಥ ಆಡಳಿತಗಾರರಾಗಿಯೂ ಸಂಘಟಕರಾಗಿಯೂ ಕನ್ನಡಪರ ಹೋರಾಟಗಾರರಾಗಿಯೂ ಹೆಸರುವಾಸಿಯಾದವರು. ’ತುಳಿಯದಿರಿ ನನ್ನ’, ’ಈ ಹೆಣ್ಣುಗಳೆ ಹೀಗೆ’, ’ರೊಟ್ಟಿ ಮತ್ತು ಹುಡುಗಿ’, ’ಬೆಲ್ಲದಚ್ಚು ಇರುವೆದಂಡು’ ಇವರ ಕವನ ಸಂಕಲನಗಳು.’ಚಾಜ’, ’ಒಂದು ಬಾವಿಯ ಸುತ್ತ’ಗಳೆಂಬ ನಾಟಕಗಳನ್ನು ರಚಿಸಿದ ಇವರು’ಅಹಲ್ಯಾ ಬಾಯಿ ಹೋಳ್ಕರ್”ಇಟಗಿ ಭೀಮಾಂಬಿಕೆ’, ’ಸಂಗೊಳ್ಳಿ ರಾಯಣ್ಣ’ರಜೀವನ ಚರಿತ್ರೆಗಳನ್ನು ಬರೆದಿದ್ದಾರೆ. ’ಕನ್ನಡಕಥೆಗಾರ್ತಿಯರು’, ’ತನು ಕರಗದವರಲ್ಲಿ’,’ಧರಣಿಯ ಮೇಲೊಂದು’, ’ಭುವನಕ್ಕೆ ಬೆಲೆಯಿಲ್ಲ’, ’ಒಳಗೆ ಸತ್ತು ಹೊರಗೆ’ಗಳೆಂಬ ವಿಮರ್ಶಾಸಂಕಲನಗಳನ್ನು ಪ್ರಕಟಿಸಿದ್ದಾರೆ. ಹಲವು ಕೃತಿಗಳನ್ನು ಸಂಪಾದಿಸಿದ ಇವರು ಸ್ತ್ರೀನಿಷ್ಠ ವಿಮರ್ಶಕಿಯಾಗಿಯೂ ಪ್ರಸಿದ್ಧರು. ಇವರ ಸಾಧನೆಗಳನ್ನು ಗುರುತಿಸಿ ಕನ್ನಡ ಸಾಹಿತ್ಯ ಪರಿಷತ್ತಿನ ಸಿಂಧೂರ ದತ್ತಿನಿಧಿ ಪ್ರಶಸ್ತಿ, ಸುಧಾಮೂರ್ತಿ ಪ್ರಶಸ್ತಿ, ಕಾವ್ಯಾನಂದ ಪ್ರಶಸ್ತಿ, ವಿಶ್ವೇಶ್ವರಯ್ಯ ಪ್ರಶಸ್ತಿಯೇ ಮೊದಲಾದ ಅಸಂಖ್ಯ ಪ್ರಶಸ್ತಿಗಳು ಸಂದಿವೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಡಾ. ಷ.ಶೆಟ್ಟರ್ ಪರಿಚಯ:
    ಬಳ್ಳಾರಿಜಿಲ್ಲೆಯ ಹಡಗಲಿ ತಾಲೂಕಿನ ಹಂಪಸಾಗರದಲ್ಲಿ ಜನಿಸಿದ ಡಾ.ಷ.ಶೆಟ್ಟರ್ ಮೈಸೂರು ವಿಶ್ವವಿದ್ಯಾನಿಲಯದಿಂದ ಇತಿಹಾಸದಲ್ಲಿ ಐದು ಚಿನ್ನದ ಪದಕಗಳೊಂದಿಗೆ ಸ್ನಾತಕೋತ್ತರ ಪದವಿಯನ್ನು ಪಡೆದವರು. ಧಾರವಾಡದಕರ್ನಾಟಕ ವಿಶ್ವವಿದ್ಯಾನಿಲಯಮತ್ತುಇಂಗ್ಲೇಂಡಿನಕೇಂಬ್ರಿಡ್ಜ್‌ವಿಶ್ವವಿದ್ಯಾನಿಲಯಗಳಿಂದ ಡಾಕ್ಟರೇಟ್ ಪದವಿಗಳನ್ನು ಇವರು ಪಡೆದಿದ್ದಾರೆ. ಭಾರತೀಯ ಪುರಾತತ್ತ್ವ, ಕಲೆ-ಇತಿಹಾಸ, ಸಮುದಾಯಗಳ ಇತಿಹಾಸ, ತತ್ತ್ವಶಾಸ್ತ್ರ ಮತ್ತು ಶಾಸ್ತ್ರೀಯ ಭಾಷೆಗಳ ಸಾಹಿತ್ಯದಲ್ಲಿ ಕಳೆದ ನಾಲ್ಕು ದಶಕಗಳಿಂದ ಅಧ್ಯಯನ ನಿರತರು. ಅವರಅವಿರತಅಧ್ಯಯನದ ಫಲವಾಗಿ ಮೈಸೂರುಅರ್ಕಿಯಾಲಜಿ, ಇಂಡಿಯನ್‌ಅರ್ಕಿಯಾಲಜಿ, ಮೋನೋಗ್ರಾಫ್ಸ್‌ಆನ್ ಹಿಸ್ಟರಿಯಾಗ್ರಫಿ, ವರ್ಲ್ಡ್‌ಸಿವಿಲೈಜೇಶನ್, ಇಂಡಿಯನ್‌ಆರ್ಟ್ ಹಿಸ್ಟರಿ, ಫಿಲಾಸಫಿಯೇ ಮೊದಲಾದ ವಿಷಯಗಳಲ್ಲಿ ಅಸಂಖ್ಯಕೃತಿಸಂಪುಟಗಳು ಪ್ರಕಟವಾಗಿವೆ.

    ಇತಿಹಾಸ ಮತ್ತು ಸಾಹಿತ್ಯಗಳಲ್ಲಿ ಸಮಾನಆಸಕ್ತಿಯನ್ನು ಹೊಂದಿರುವ ಶೆಟ್ಟರ್‌ಚರಿತ್ರೆ ಮತ್ತು ಸಾಹಿತ್ಯ ಚರಿತ್ರೆಗಳನ್ನು ಮುರಿದುಕಟ್ಟುವ ಕೆಲಸದಲ್ಲಿ ಅವಿಶ್ರಾಂತರಾಗಿ ನಿರತರು.ಭಾಷಾಶಾಸ್ತ್ರ, ಪ್ರಾಚೀನಕನ್ನಡದ ಕ್ಷೇತ್ರಗಳಲ್ಲಿ ಅವರಕೊಡುಗೆಅಪಾರ. ಸಿದ್ಧ ಪಾಶ್ಚಾತ್ಯ ಮಾದರಿಯ ಸಂಶೋಧನಾ ವಿಧಾನಗಳನ್ನು ಬದಿಗಿರಿಸಿಭಾವನಾತ್ಮಕ-ಕಾಲ್ಪನಿಕ ಕಥೆಗಳಲ್ಲಿ ಅಡಕವಾಗಿರಬಹುದಾದಚರಿತ್ರೆಯ ಸಂಗತಿಗಳನ್ನು ಹೆಕ್ಕಿ ತೆಗೆಯುವ ವಿಶಿಷ್ಟ ವಿಧಾನದ ಸಂಶೋಧನೆಅವರದು. ಪ್ರಾಧ್ಯಾಪಕರಾಗಿ, ಇನ್‌ಸ್ಟಿಟ್ಯೂಟ್ ಆಫ್‌ಇಂಡಿಯನ್‌ಆರ್ಟ್ ಹಿಸ್ಟರಿಯ ನಿರ್ದೇಶಕರಾಗಿ, ಇಂಡಿಯನ್‌ಕೌನ್ಸಿಲ್‌ಆಫ್ ಹಿಸ್ಟಾರಿಕಲ್‌ರಿಸರ್ಚ್, ನವದೆಹಲಿಯಗೌರವಾಧ್ಯಕ್ಷರಾಗಿ, ಸೇವೆ ಸಲ್ಲಿಸಿದ ಪ್ರೊ.ಷ.ಶೆಟ್ಟರ್ ಪ್ರಸ್ತುತ ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್‌ಎಡ್ವಾನ್ಸ್‌ಡ್ ಸ್ಟಡೀಸ್‌ನಎಮಿರೆಟಸ್ ಫ್ರೊಫೆಸರ್ ಆಗಿ, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸಯನ್ಸ್,ಬೆಂಗಳೂರುಹಾಗೂಇಂದಿರಾಗಾಂಧಿ ನ್ಯಾಶನಲ್ ಸೆಂಟರ್ ಫಾರ್‌ದಆರ್ಟ್ಸ್,ಸೌತ್‌ರೀಜನಿನ ಗೌರವ ನಿರ್ದೇಶಕರಾಗಿದ್ದಾರೆ. ಸಾಹಿತ್ಯಅಕಾಡೆಮಿಯ ಭಾಷಾಭೂಷಣ ಸಮ್ಮಾನ್,ಚಾವುಂಡರಾಯ ಪ್ರಶಸ್ತಿ, ಶಂಭಾ-ಜೋಶಿ ಪ್ರಶಸ್ತಿ, ಲಲಿತಕಲಾ ವಾರ್ಷಿಕ ಪ್ರಶಸ್ತಿ, ಆಚಾರ್ಯಕುಂದಕುಂದ ಪ್ರಶಸ್ತಿಯೇ ಮೊದಲಾದಹಲವಾರುಪ್ರಶಸ್ತಿಗಳಿಗೆ ಶ್ರೀಯುತರು ಭಾಜನರಾಗಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ► ನವೆಂಬರ್ 16ರಿಂದ ಆಳ್ವಾಸ್ ನುಡಿಸಿರಿ 2018  – https://kundapraa.com/?p=29646 .

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    06/12/2025

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d