Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » 5,000 ಖರ್ಚಿನಲ್ಲಿ 5 ಅಭ್ಯರ್ಥಿಗಳು ಚುನಾವಣಾ ಕಣಕ್ಕೆ!
    ವಿಶೇಷ ವರದಿ

    5,000 ಖರ್ಚಿನಲ್ಲಿ 5 ಅಭ್ಯರ್ಥಿಗಳು ಚುನಾವಣಾ ಕಣಕ್ಕೆ!

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಹಣ ಹೆಂಡದ ಹಂಗಿಲ್ಲ. ಅನವಶ್ಯ ವ್ಯಯಿಸುವ ಜನರಲ್ಲ. ಇಂತವರು ಆಗಬೇಕಿದೆ ನಮಗೆ ಮಾದರಿ

    Click Here

    Call us

    Click Here

    ಕುಂದಾಪುರ: ಚುನಾವಣೆ ಬಂತೆಂದರೆ ಸಾಕು. ಹಣ ಹೆಂಡದ ಸುಗ್ಗಿಯೋ ಸುಗ್ಗಿ. ಲೋಕಸಭಾ ಚುನಾವಣೆಯಿಂದ ಹಿಡಿದು ಗ್ರಾಮ ಪಂಚಾಯತ್ ಚುನಾವಣೆಯ ತನಕ ಪಕ್ಷ ಹಾಗೂ ಅಭ್ಯರ್ಥಿಗಳು ಪ್ರಚಾರ ಕ್ಯಾನ್ವಾಸ್ ಮುಂತಾದವುಗಳಿಗೆ ಲಕ್ಷಾಂತರ ರೂಪಾಯಿ ಹಣ ವ್ಯಯಿಸುವುದು ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಪ್ರತಿ ಅಭ್ಯರ್ಥಿಯೂ ಲಕ್ಷಾಂತರ ರೂಪಾಯಿ ಖರ್ಚು ಮಾಡುತ್ತಾನೆ ಮತ್ತು ಖರ್ಚುಮಾಡಿದ ಹಣವನ್ನು ವಾಪಾಸು ಪಡೆಯಲು ಗೆದ್ದನಂತರ ಮತ್ತೆ ಭ್ರಷ್ಟಾಚಾರಕ್ಕಿಳಿಯುತ್ತಾನೆ ಎಂಬುದು ಗುಟ್ಟಾಗಿ ಉಳಿದಿಲ್ಲ. ಆದರೆ ಜನಪರ ಕೆಲಸ ಮಾಡುವವರಿಗೆ ಹಣದ ಅವಶ್ಯಕತೆಯೇ ಇಲ್ಲ. ಅತ್ಯಂತ ಕಡಿಮೆ ಖರ್ಚಿನಯೂ ಚುನಾವಣೆಗೆ ಸ್ವರ್ಧಿಸಬಹುದುದೆಂಬುದನ್ನು ತೋರಿಸಿಕೊಟ್ಟಿದ್ದಾರೆ ಕಾಳಾವಾರ ಗ್ರಾ.ಪಂ ಎರಡು ವಾರ್ಡುಗಳ ಸಿಪಿಎಂ ಬೆಂಬಲಿತ ಎಸ್. ರಾಮಚಂದ್ರ ನಾವಡ ಹಾಗೂ ಅವರದೇ ಬಣದ ಇನ್ನಿತರ ನಾಲ್ವರು ಅಭ್ಯರ್ಥಿಗಳು.

    ಈ ಪೈಕಿ ರಾಮಚಂದ್ರ ನಾವಡರ ಜನಪರ ಕಾಳಜಿ ವಿಶೇಷವಾದುದು. ಕಾಳಾವರ ಗ್ರಾಮ ಪಂಚಾಯತ್ ನ ಎರಡನೇ ವಾರ್ಡಿನಿಂದ ಸ್ವರ್ಧಿಸುತ್ತಿರುವ ನಾವಡರು ಭ್ರಷ್ಟ ವ್ಯವಸ್ಥೆಯ ವಿರುದ್ಧ 20 ವರ್ಷಗಳಿಂದ ಹೋರಾಡುತ್ತಲೇ ಬಂದವರು. ಕಳೆದ ಸಾಲಿನ ಗ್ರಾ.ಪಂ. ಚುನಾವಣೆಯಲ್ಲಿಯೂ ಸ್ವರ್ಧಿಸಿ ಅತ್ಯಧಿಕ ಮತಗಳಿಂದ ಗೆದ್ದು ಬಡ ಜನರ ಪರವಾಗಿ ನಿಂತವರು. ಈ ಭಾರಿ ಮತ್ತೆ ಅಖಾಡಕ್ಕೆ ಇಳಿದಿದ್ದಾರೆ. ಆದರೆ ಚುನಾವಣೆಗಾಗಿ ಎಲ್ಲಿಯೂ ಬೇಕಾಬಿಟ್ಟಿ ಹಣ ಖರ್ಚು ಮಾಡುತ್ತಿಲ್ಲ.

    ಕಳೆದ ಭಾರಿ ಗ್ರಾ.ಪಂ ಚುನಾವಣೆಯಲ್ಲಿ ಸ್ವರ್ಧಿಸಿದ್ದಾಗ ಇವರು ವ್ಯಯಿಸಿದ್ದು ಕೇವಲ 3,250 ರೂಪಾಯಿ. ಅದು ಕೂಡ ಸಾರ್ವಜನಿಕರು ಸಂಗ್ರಹಿಸಿದ ನಿಧಿಯಾಗಿತ್ತು. ಅತ್ಯಂತ ಕಡಿಮೆ ಖರ್ಚಿನಲ್ಲಿ ಅಭ್ಯರ್ಥಿಯಾಗಿ ನಿಂತರೂ ಕೂಡ 630 ಓಟುಗಳಲ್ಲಿ 484 ಓಟುಗಳನ್ನು ತನ್ನದಾಗಿಸಿಕೊಂಡಿದ್ದರು. ಇದು ಕಾಳವಾರ ಕ್ಷೇತ್ರದ 24 ಅಭ್ಯರ್ಥಿಗಳಿಗಿಂತ ಪಡೆದ ಅತ್ಯಧಿಕ ಮತವಾಗಿತ್ತು.

    ಗ್ರಾಮ ಪಂಚಾಯತ್ ಸದಸ್ಯನಾಗಿ ಆಯ್ಕೆಯಾದ ಮೇಲೆ ಪ್ರತಿ ಗ್ರಾಮ ಸಭೆ, ಸಾಮಾನ್ಯ ಹಾಗೂ ವಿಶೇಷ ಸಭೆಗಳಲ್ಲಿ ಭಾಗವಹಿಸಿದ ಏಕೈಕ ಸದಸ್ಯ ಎಂಬುದು ಕೂಡ ಗಮನಾರ್ಹ. ಜನಪರ ಕಾಳಜಿ ಹೊಂದಿದ್ದ ನಾವಡರು ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಗಳ ಸಮರ್ಪಕ ಅನುಷ್ಠಾನ, ಕುಡಿಯುವ ನೀರು, ರಸ್ತೆ, ನೀರಿನ ತೋಡು, ಬೀದಿದೀಪ ಮುಂತಾದ ಮೂಲಭೂತ ಸೌಕರ್ಯಗಳನ್ನು ಗ್ರಾಮದ ಜನತೆಗೆ ಒದಗಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

    Click here

    Click here

    Click here

    Call us

    Call us

    ಈ ಭಾರಿಯೂ ಚುನಾವಣೆಯಲ್ಲಿ ಸ್ವರ್ಧಿಸಿರುವ ರಾಮಚಂದ್ರ ನಾವಡ ಮತ್ತು ಇತರ ಅಭ್ಯರ್ಥಿಗಳು ಖರ್ಚಿನ ಬಗ್ಗೆ ಸಾಕಷ್ಟು ಎಚ್ಚರ ವಹಿಸಿದ್ದಾರೆ. ಸಾರ್ವಜನಿಕರಿಂದ ಸಂಗ್ರಹಿಸಲಾಗಿರುವ 5000 ರೂಪಾಯಿ ನಿಧಿಯಲ್ಲಿ 4,700 (1,800 ಐವರು ಕರಪತ್ರ ಮುದ್ರಣದ ಖರ್ಚು, 700-ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯ ಖರ್ಚು, 2,000-ಕ್ಯಾನ್ವಾಸ್ ಖರ್ಚು, 200-ಜೆರಾಕ್ಸ್ ಖರ್ಚು ಹಾಗೂ 200 ಚುನಾವಣಾ ದಿನದ ಖರ್ಚು) ರೂಪಾಯಿಗಳನ್ನಷ್ಟೇ ವ್ಯಯಿಸಿ (ತಲಾ 1,000ರೂ.) ಉಡುಪಿ ಜಿಲ್ಲೆಯಲ್ಲಿಯೇ ಚುನಾವಣೆಗಾಗಿ ಅತೀ ಕಡಿಮೆ ಹಣ ವ್ಯಯಿಸಿದ ಮಾದರಿ ಅಭ್ಯರ್ಥಿಯೆನಿಸಿಕೊಂಡಿದ್ದಾರೆ.

    ಈ ಭಾರಿ ಕೋರ್ಗಿ ಹಾಗೂ ಹೆಸ್ಕೂತ್ತೂರು ಗ್ರಾಮ ಪಂಚಾಯತ್ ಪ್ರತ್ಯೇಕವಾಗಿರುವುದರಿಂದ ಕಾಳಾವಾರ, ವಕ್ವಾಡಿ ಹಾಗೂ ಆಸೋಡು ಗ್ರಾಮಗಳು ಮಾತ್ರ ಕಾಳಾವಾರ ಪಂಚಾಯತ್ ವ್ಯಾಪ್ತಿಗೆ ಸೇರುತ್ತಿದೆ. ಈ ಭಾರಿ ರಾಮಚಂದ್ರ ನಾವಡರು ತಮ್ಮೊಂದಿಗೆ 1 ಮತ್ತು 2ನೇ ವಾರ್ಡುಗಳಲ್ಲಿ ನಾರಾಯಣ ಪೂಜಾರಿ, ಗಿರಿಜಾ, ವಿನಯ ಶೆಟ್ಟಿ, ಪ್ರೇಮಾ ಆಚಾರ್ಯ ಅವರನ್ನೂ ಚುನಾವಣಾ ಕಣಕ್ಕೆ ಇಳಿಸಿದ್ದು ಪಾರದರ್ಶಕ ಹಾಗೂ ಭಷ್ಟಚಾರ ರಹಿತವಾದ ಆಡಳಿತ ನೀಡಬೇಕೆಂಬ ಇಂಗಿತ ವ್ಯಕ್ತಪಡಿಸಿದ್ದಾರೆ.

    ಒಟ್ಟಿನಲ್ಲಿ ಚುನಾವಣೆಯಲ್ಲಿ ಸ್ವರ್ಧಿಸಬೇಕೆಂದರೆ ಹಣ ಹೆಂಡದ ಹೊಳೆಯನ್ನು ಹರಿಸಬೇಕೆಂಬುದರ ಹೊರತಾಗಿ ಇದ್ಯಾವುದ ಹಂಗಿಲ್ಲದೇ ಅತ್ಯಂತ ಕಡಿಮೆ ಖರ್ಚಿನಲ್ಲಿಯೂ ಚುನಾವಣೆಯಲ್ಲಿ ಸ್ವರ್ಧಿಸಬಹುದು ಎಂದು ತೋರಿಸಿಕೊಟ್ಟು ಮಾದರಿ ಅಭ್ಯರ್ಥಿಗಳೆನಿಸಿಕೊಂಡಿದ್ದಾರೆ ರಾಮಚಂದ್ರ ನಾವಡ ಹಾಗೂ ಅವರ ಬೆಂಗಲಿರು ಅಭ್ಯರ್ಥಿಗಳು.

    -ಸುನಿಲ್ ಬೈಂದೂರು

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌
    • ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d