Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾಂಗ್ರೆಸ್ ಸರ್ಕಾರದ ಯೋಜನೆಗಳಿಗೆ ಬಣ್ಣ ಬಳಿದು ಬಿಜೆಪಿ ತಮ್ಮದೆನ್ನುತ್ತಿದೆ
    ಕುಂದಾಪ್ರದ್ ಸುದ್ಧಿ

    ಕಾಂಗ್ರೆಸ್ ಸರ್ಕಾರದ ಯೋಜನೆಗಳಿಗೆ ಬಣ್ಣ ಬಳಿದು ಬಿಜೆಪಿ ತಮ್ಮದೆನ್ನುತ್ತಿದೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಸುದ್ದಿಗೋಷ್ಠಿಯಲ್ಲಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಮಂಜುನಾಥ ಭಂಡಾರಿ

    Click Here

    Call us

    Click Here

    ಕುಂದಾಪುರ: ಹಿಂದೆ ವಿರೋಧ ಪಕ್ಷದಲ್ಲಿ ಇದ್ದ ಬಿಜೆಪಿ, ಕಾಂಗ್ರೆಸ್ ಸರ್ಕಾರವನ್ನು ವಿರೋಧಿಸಬೇಕು ಎನ್ನುವ ಏಕೈಕ ಉದ್ದೇಶಕ್ಕಾಗಿ ಯುಪಿಐ ಸರ್ಕಾರದ ಕಾರ್ಯಕ್ರಮಗಳನ್ನು ವಿರೋಧ ಮಾಡುತ್ತಿದ್ದರು. ಇದೀಗ ಅಧಿಕಾರಕ್ಕೆ ಬಂದ ಬಳಿಕ ಈ ಹಿಂದಿನ ಕಾರ್ಯಕ್ರಗಳನ್ನೆ ಹೆಸರು ಬದಲಾವಣೆ ಮಾಡಿ ನಮ್ಮದು ಎಂದು ಹೆಗಲು ತಟ್ಟಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಎಐಸಿಸಿ ಸದಸ್ಯ ಮಂಜುನಾಥ ಭಂಡಾರಿ ಲೇವಡಿ ಮಾಡಿದ್ದಾರೆ. ಹೆಮ್ಮಾಡಿಯ ಖಾಸಗಿ ಹೋಟೇಲ್‌ನಲ್ಲಿ ನಡೆಸಿದ ಸುದ್ದಿ ಗೋಷ್ಠಿಯಲ್ಲಿ ಅವರು ಮಾತನಾಡಿದರು.

    ಯುಪಿಐ ಸರ್ಕಾರದ ಉದ್ಯೋಗ ಭರವಸೆ, ಆಧಾರ್ ಕಾರ್ಡ್, ಬಳಕೆದಾರರ ಖಾತೆಗೆ ನೆರವಾಗಿ ಗ್ಯಾಸ್ ಸಬ್ಸಿಡಿ ನೀಡಿಕೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಿದ್ದಾರೆ. ಕೇಂದ್ರದಲ್ಲಿ ವಿತ್ತ ಸಚಿವರಾಗಿದ್ದ ಬಿ.ಜನಾರ್ಧನ್ ಪೂಜಾರಿಯವರು ಬ್ಯಾಂಕಿನ ಬಾಗಿಲಿಗೆ ಬಡವರನ್ನು ತರುವ ಪ್ರಯತ್ನವಾಗಿ ಯೋಜಿಸಿದ್ದ ಸಾಲ ಮೇಳದ ಕಾರ್ಯಕ್ರಮವನ್ನೆ ಅಲ್ಪ-ಸ್ವಲ್ಪ ಬದಲಾವಣೆಯೊಂದಿಗೆ ಜನ್ ಧನ್ ಎಂದು ಹೇಳಿಕೊಳ್ಳುತ್ತಿದ್ದಾರೆ. ಯುಪಿಐ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಅಂತರಾಷ್ಟ್ರೀಯ ಮಟ್ಟದಲ್ಲಿ ಪೇಟ್ರೋಲ್ ಬ್ಯಾರೆಲ್ ಗೆ ೧೫೦ ಡಾಲರ್ ಇದ್ದಿತ್ತು. ಇದೀಗ ಬ್ಯಾರೆಲ್‌ಗೆ ೫೦ ಡಾಲರ್ ಇದ್ದರೂ ತೈಲ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಲೆ ಇದೆ. ಪೆಟ್ರೋಲ್ ಲೀಟರ್‌ಗೆ ೨೦ ರೂಪಾಯಿಗೆ ನೀಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಲೀಟರ್‌ಗೆ ೨೦ ರೂಪಾಯಿ ಏರಿಕೆ ಮಾಡಲು ಹುನ್ನಾರ ನಡೆಸುತ್ತಿದೆ. ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬರ ಖಾತೆಗೆ ೧೫ ಲಕ್ಷ ಹಾಕುತ್ತೇವೆ ಎಂದು ಭರವಸೆಯ ಮಹಾಪೂರವನ್ನೆ ಹರಿಸಿದ್ದ ಮೋದಿ ಟೀಂ ಇದೀಗ ಮೌನಕ್ಕೆ ಶರಣಾಗಿದ್ದಾರೆ ಎಂದರು.

    ಹಿಂದಿನ ಎನ್‌ಡಿಎ ಸರ್ಕಾರದಲ್ಲಿ ಮಂತ್ರಿಯಾಗಿದ್ದ ಅನಂತಕುಮಾರ ಬೆಂಗಳೂರಿನ ಅಶೋಕ ಸೇರಿದಂತೆ ಐಟಿಡಿಸಿ ಹೋಟೇಲ್‌ಗಳನ್ನು ಖಾಸಗಿಯವರಿಗೆ ನೀಡಿದ್ದರು. ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಒಂದೆ ಒಂದು ಉದ್ದಿಮೆಗಳನ್ನು ಖಾಸಗಿಯವರಿಗೆ ನೀಡುವ ಕುರಿತು ಚಿಂತನೆಯನ್ನು ಮಾಡಿರಲಿಲ್ಲ, ಆದರೆ ಇದೀಗ ಮತ್ತೆ ಅದೇ ಹಳೆ ಚಾಳಿ ಮುಂದುವರೆಸಲು ಪ್ರಯತ್ನ ಸಾಗುತ್ತಿದೆ. ಮೈಸೂರಿನ ಲಲಿತ್ ಮಹಲ್ ಖಾಸಗಿಯವರ ಪಾಲಾಗುವ ದಿನಗಳು ದೂರವಿಲ್ಲ ಎಂದು ಹೇಳಿದ ಭಂಡಾರಿ ವ್ಯಾಪಾರ ಮನೋಭಾವದ ಬಿಜೆಪಿ ಯವರಿಂದ ಮಾರಾಟವಲ್ಲದೆ ಬೇರೇನೂ ನಿರೀಕ್ಷಿಸಲು ಸಾಧ್ಯವಲ್ಲ ಎಂದು ಹೇಳಿದರು.

    ಮುಂದುವರೆದು ಮಾತನಾಡಿದ ಅವರು ಬಿಜೆಪಿ ಯವರು ಕಾಂಗ್ರೆಸ್ ಮುಕ್ತ ಭಾರತದ ಚಿಂತನೆಯಾದರೆ, ಕಾಂಗ್ರೆಸ್‌ನದ್ದು, ಹಸಿವು ಮುಕ್ತ ಭಾರತದ ಚಿಂತನೆ. ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ಈ ದಿಸೆಯಲ್ಲಿ ಆಲೋಚನೆ ನಡೆಸಿ ದೇಶದಲ್ಲಿ ಮೊದಲ ಬಾರಿಗೆ ಅನ್ನ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದೆ. ಪಡಿತರ ಚೀಟಿಯ ಸಮಸ್ಯೆಯ ಪರಿಹಾರಕ್ಕೆ ಆದ್ಯತೆ ನೀಡಿದೆ. ಸಾರ್ವಜನಿಕ ಆರೋಪಗಳು ಕಂಡು ಬಂದಾಗ ಯಾವುದೆ ಹಿಂಜರಿಕೆ ಇಲ್ಲದೆ ಸೂಕ್ತ ತನಿಖಾ ಸಂಸ್ಥೆಗಳಿಗೆ ಪ್ರಕರಣದ ತನಿಖೆಯ ಜವಾಬ್ದಾರಿ ವಹಿಸುವ ಇಚ್ಚಾ ಶಕ್ತಿ ತೋರಿದೆ.

    Click here

    Click here

    Click here

    Call us

    Call us

    ಪಂಚಾಯತ್ ರಾಜ್ ಕಾಯಿದೆಯ ಮೂಲಕ ಅಧಿಕಾರ ವಿಕೇಂದ್ರಿಕರಣದ ಇಚ್ಚಾ ಶಕ್ತಿ ತೋರಿದ್ದು ಕಾಂಗ್ರೆಸ್ ಸರ್ಕಾರ. ಸರ್ಕಾರ ಸವಲತ್ತುಗಳು ಸಮಾಜದ ತಳ ಮಟ್ಟದ ವ್ಯಕ್ತಿಗೂ ದೊರಕಬೇಕು ಎಂದಾದರೆ ಗ್ರಾಮ ಪಂಚಾಯಿತಿಯ ಪ್ರತಿನಿಧಿಗಳು ಸಮರ್ಥರಾಗಿರಬೇಕು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಮಾಡುವುದರಿಂದ ರಾಜ್ಯ ಸರ್ಕಾರದ ಜನಪರ ಯೋಜನೆಗಳು ಜನರಿಗೆ ತಲುಪಲು ಸಹಕಾರಿಯಾಗುತ್ತದೆ ಎಂದು ನುಡಿದರು. ಶಿವಮೊಗ್ಗ ಜಿಲ್ಲಾ ಎನ್‌ಎಸ್‌ಯುಐ ಉಪಾಧ್ಯಕ್ಷ ಸಿದ್ದಾರ್ಥ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d