Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಿ.25-29: ಕುಂದಾಪುರದಲ್ಲಿ ಕುವೆಂಪು ನಾಟಕೋತ್ಸವ
    ಊರ್ಮನೆ ಸಮಾಚಾರ

    ಡಿ.25-29: ಕುಂದಾಪುರದಲ್ಲಿ ಕುವೆಂಪು ನಾಟಕೋತ್ಸವ

    Updated:25/12/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ವಿಶ್ವ ಮಾನವತೆ ಸಂದೇಶ ಸಾರಿದ ಮಹಾನ್ ದಾರ್ಶನಿಕ ಕವಿ ಕುವೆಂಪು ಅವರ ಜನ್ಮ ದಿನೋತ್ಸವದ ನೆನಪಿಗಾಗಿ ಪ್ರತಿವರ್ಷ ರಂಗಕಹಳೆ ರಿ. ಮಕ್ಕಳ ರಂಗಶಾಲೆ ಆಯೋಜಿಸುತ್ತಿರುವ ’ಕುವೆಂಪು ನಾಟಕೋತ್ಸವ’ ಉಡುಪಿ ಜಿಲ್ಲೆಯಲ್ಲಿ ಪ್ರಥಮ ಭಾರಿಗೆ ಆಯೋಜನೆಗೊಂಡಿದ್ದು ಡಿ. 25ರ ಮಂಗಳವಾರದಿಂದ ಡಿ.29ರ ಶನಿವಾರದ ತನಕ ಕುಂದಾಪುರ ಭಂಡಾರ್‌ಕಾರ‍್ಸ್ ಕಾಲೇಜಿನ ಡಾ. ಹೆಚ್. ಶಾಂತಾರಾಮ್ ಬಯಲು ರಂಗ ಮಂಟಪದಲ್ಲಿ ಜರುಗಲಿದೆ.

    Click Here

    Call us

    Click Here

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗ ಹಾಗೂ ಭಂಡಾರ್ಕಾರ್ಸ್ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗುತ್ತಿರುವ 18ನೇ ಕುವೆಂಪು ನಾಟಕೋತ್ಸವದಲ್ಲಿ ಪ್ರತಿ ದಿನ ಸಂಜೆ 6 ರಿಂದ ಎರಡು ನಾಟಕಗಳು ಪ್ರದರ್ಶನಗೊಳ್ಳಲಿದೆ. ಈ ನಡುವೆ ಕುವೆಂಪು ಜನ್ಮದಿನೋತ್ಸವ, ವಿಚಾರ ಸಂಕಿರಣ, ಸಾಧಕರಿಗೆ ಗೌರವಾರ್ಪಣೆ, ಚಲನಚಿತ್ರ ಪ್ರದರ್ಶನ, ಕುವೆಂಪು ಗೀತ ಗಾಯನ ನಡೆಯಲಿದೆ.

    ನಾಟಕ , ಚಲನಚಿತ್ರ ಪ್ರದರ್ಶನ:
    ಡಿ.25ರಂದು ಸಿ. ಲಕ್ಷ್ಮಣ ನಿರ್ದೇಶನದ ರಂಗಕಹಳೆ ತಂಡದ ಪ್ರಸ್ತುತಿಯ ಬೊಮ್ಮನಹಳ್ಳಿಯ ಕಿಂದರಿಜೋಗಿ ನಾಟಕ, ಬಳಿಕ ಓಹಿಲೇಶ್ ಎಲ್. ನಿರ್ದೇಶನದ ಬೆಂಗಳೂರು ಗೌರಿಶಂಕರ ಸಾಂಸ್ಕೃತಿಕ ಕ್ರೀಡಾದತ್ತಿ ತಂಡ ಪ್ರಸ್ತುತಿಯ ಮೋಡಣ್ಣನ ತಮ್ಮ ನಾಟಕ, ಡಿ.26ರಂದು ಸಿ. ಲಕ್ಷ್ಮಣ ನಿದೇಶನದ ಧನಲಕ್ಷ್ಮಿ ನಾಟಕ ಮಂಡಳಿ ಪ್ರಸ್ತುತಿಯ ನನ್ನ ಗೋಪಾಲ ನಾಟಕ, ಬಳಿಕ ಡಾ. ಕೆ. ರಾಮಕೃಷ್ಣಯ್ಯ ನಿರ್ದೇಶನದ ಬೆಂಗಳೂರು ವಿಶ್ವನಿದ್ಯಾನಿಯದ ತಂಡ ಪ್ರಸ್ತುತಿಯ ಜಲಗಾರ ನಾಟಕ, ಡಿ.27ರಂದು ಟಿ.ಎಂ ಬಾಲಕೃಷ್ಣ ನಿರ್ದೇಶನ, ಬಿ.ಎಂ.ಟಿ.ಸಿ ಸಾಂಸ್ಕೃತಿಕ ಕಲಾ ಕಠೀರದ ಪ್ರಸ್ತುತಿಯ ಯಮನ ಸೋಲು ನಾಟಕ, ಬಳಿಕ ಸಿ. ಲಕ್ಷ್ಮಣ ನಿರ್ದೇಶನದ, ರಂಗಕಹಳೆ ಕ್ರೀಯೆಶನ್ಸ್ ಅವರ ರಾಜ್ಯ ಪ್ರಶಸ್ತಿ ಪುರಸ್ಕೃತ ಮಕ್ಕಳ ಕನ್ನಡ ಚಲನಚಿತ್ರ ನನ್ನ ಗೋಪಾಲ ಪ್ರದರ್ಶನ, ಡಿ. 28ರಂದು ಚಂದ್ರಮೌಳೇಶ್ವರ ಕ್ರಿಯೇಷನ್ಸ್ ಬೆಂಗಳೂರು ಅವರ ಕಿರುಚಿತ್ರ ಬಾಲಕ ಕುವೆಂಪು ಪ್ರದರ್ಶನ, ಬಳಿಕ ಛಾಯಾ ಭಾರ್ಗವಿ ಎಸ್. ಎಚ್ ನಿರ್ದೇಶನದ, ಅದಮ್ಯ ರಂಗ ಸಂಸ್ಕೃತಿ ಟ್ರಸ್ಟ್ ಪ್ರಸ್ತುತಿಯ ಶೂದ್ರತಪಸ್ವಿ ನಾಟಕ, ಡಿ.29ರಂದು ಮಾಲತೇಶ್ ಬಡಿಗೇರ ನಿರ್ದೇಶನದ ಬಹುರೂಪಿ ಬೆಂಗಳೂರು ಪ್ರಸ್ತುತಿಯ ಸ್ಮಶಾನ ಕುರುಕ್ಷೇತ್ರ ನಾಟಕ, ಬಳಿಕ ಮಂಜುನಾಥ ಎಲ್ ಬಡಿಗೇರ ಪ್ರಸ್ತುತಿಯ, ನಮ್ಮ ತುಳುವೆರ್ ಕಲಾ ಸಂಘಟನೆ ಮುದ್ರಾಡಿ ಪ್ರಸ್ತುತಿಯ ದಶಾನನ ಸ್ವಪ್ನಸಿದ್ಧಿ ನಾಟಕ ಪ್ರದರ್ಶನಗೊಳ್ಳಲಿದೆ.

    ರಂಗಕಹಳೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಭಾರತದಾದ್ಯಂತ ನಡೆಸಿಕೊಂಡು ಬರುತ್ತಿದೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ, ಮಕ್ಕಳ ರಂಗಕರ್ಮಿ ದಿವಂಗತ ಸಿ. ಲಕ್ಷ್ಮಣ ಅವರು ರಂಗಕಹಳೆ ಸಂಸ್ಥೆಯನ್ನು ಹುಟ್ಟು ಹಾಕಿ ರಂಗಚಟುವಟಿಕೆಗಳನ್ನು ನಡೆಸುತ್ತಾ ಬಂದಿದ್ದರು. ಈಗ ಅವರ ಪುತ್ರ ಓಹಿಲೇಶ್ ಲಕ್ಷ್ಮಣ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ. ಪ್ರತಿ ವರ್ಷ ಬೇರೆ ಬೇರೆ ಜಿಲ್ಲೆಗಳಲ್ಲಿ ಕುವೆಂಪು ನಾಟಕೋತ್ಸವವನ್ನು ಆಯೋಜಿಸಲಾಗುತ್ತಿದೆ. ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಕುವೆಂಪು ನಾಟಕೋತ್ಸವ ಆಯೋಜಿಸಿದೆ.

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಕುವೆಂಪು ನಾಟಕೋತ್ಸವದ ಸಂಚಾಲಕ ಓಹಿಲೇಶ್ ಲಕ್ಷ್ಮಣ ಮಾಹಿತಿ ನೀಡಿದರು. ನಾಟಕೋತ್ಸವ ಸಮಿತಿ ಅಧ್ಯಕ್ಷ ಡಾ. ಹೆಚ್. ಶಾಂತಾರಾಮ್, ಪ್ರಾಂಶುಪಾಲ ಡಾ. ಎನ್. ಪಿ. ನಾರಾಯಣ ಶೆಟ್ಟಿ, ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥೆ ಸುಮಲತಾ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    thirteen − eleven =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.