Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ರೋಟರಿ ಸದಸ್ಯರಿಂದ ರಕ್ತದಾನ
    ಕುಂದಾಪ್ರದ್ ಸುದ್ಧಿ

    ಕುಂದಾಪುರ ರೋಟರಿ ಸದಸ್ಯರಿಂದ ರಕ್ತದಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಪದಾಧಿಕಾರಿಗಳು ಮತ್ತು ಸದಸ್ಯರು ಇತ್ತೀಚೆಗೆ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ಆರಂಭವಾಗಿರುವ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ರಕ್ತನಿಧಿ ಘಟಕಕ್ಕೆ ಭೇಟಿಕೊಟ್ಟು ರಕ್ತದಾನವನ್ನು ಮಾಡಿ ಪರಿಸರದ ಜನರು ರಕ್ತನಿಧಿ ಕೇಂದ್ರದ ಸಂಪೂರ್ಣ ಅನುಕೂಲತೆಯನ್ನು ಪಡೆಯಬೇಕು ಹಾಗೂ ಹೆಚ್ಚು ಹೆಚ್ಚು ರಕ್ತದಾನ ಮಾಡಿ ಸಮಾಜದ ಅವಶ್ಯಕತೆಯನ್ನು ಪೂರೈಸುವಂತೆ ಕರೆ ನೀಡಿದರು. ವಾರದ ಸಭೆಯನ್ನು ರೋಟರಿ ಮತ್ತು ಆನ್ಸ್ ಕ್ಲಬ್ ಜಂಟಿಯಾಗಿ ಆಯೋಜಿಸಲಾಯಿತು.

    Click Here

    Call us

    Click Here

    ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷ ಜಯಕರ್ ಶೆಟ್ಟಿ ಮಾತನಾಡುತ್ತಾ ರಾಜ್ಯದಲ್ಲಿಯೇ ಅತ್ಯುತ್ತಮವಾದ ಅತ್ಯಾಧುನಿಕ ರಕ್ತನಿಧಿ ಕೇಂದ್ರದ ರೂಪರೇಷೆ ಹಾಗೂ ಅದರ ಮುಂದೆ ಇರುವ ಸವಾಲುಗಳನ್ನು ವಿವರಿಸಿದರು. ಆನ್ಸ್ ಕ್ಲಬ್‌ನ ಛೇರ್‌ಮೆನ್ ಹಾಗೂ ಬ್ಲಡ್ ಬ್ಯಾಂಕಿನ ವೈದ್ಯಾಧಿಕಾರಿ ಡಾ| ಹೆಚ್.ಎಸ್ ಮಲ್ಲಿ ಮಾತನಾಡುತ್ತಾ ರಕ್ತದಾನದ ಪೂರ್ಣ ಮಾಹಿತಿಯನ್ನು ಸಭೆಗೆ ತಿಳಿಯಪಡಿಸಿದರು. ರೋಟರಿ ಅಧ್ಯಕ್ಷ ಮನೋಜ್ ನಾಯರ್ ಅಧ್ಯಕ್ಷತೆ ವಹಿಸಿದ್ದರು. ರೋಟರಿ ನಿಯೋಜಿತ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ರಕ್ತದಾನ ಮಾಡಿದ ಎಲ್ಲಾ ಸದಸ್ಯರನ್ನು ಅಭಿನಂದಿಸಿ ಕ್ಲಬ್ಬಿನ ಅರ್ಹ ಸದಸ್ಯರೆಲ್ಲರೂ ಕೇಂದ್ರಕ್ಕೆ ಬಂದು ರಕ್ತದಾನ ಮಾಡಲಿದ್ದಾರೆ ಎಂದು ತಿಳಿಸಿದರು. ರಕ್ತದಾನ ಮಾಡಿದವರಲ್ಲಿ ಸಂಸ್ಥೆಯ ಖಜಾಂಚಿ ಪ್ರದೀಪ್ ವಾಜ್, ನಿಯೋಜಿತ ದಂಡಪಾಣಿ ನೂಜಾಡಿ ಸಂತೋಷ್ ಶೆಟ್ಟಿ ಹಾಗೂ ಹಿರಿಯ ಸದಸ್ಯ ಡಾ| ಎಂ.ಎನ್. ಅಡಿಗ ತಮ್ಮ ಅನುಭವವನ್ನು ಹಂಚಿಕೊಂಡರು. ಆನ್ಸ್ ಕ್ಲಬ್ಬಿನ ಅಧ್ಯಕ್ಷೆ ಬಿಂದು ನಾಯರ್ ಆನ್ಸ್ ಕ್ಲಬ್ಬಿನ ನಿಯೋಜಿತ ಅಧ್ಯಕ್ಷೆ ಭಾರತಿ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ ಸ್ಮಿತಾ ವೆಂಕಟೇಶ್ ಹಾಗೂ ಖಜಾಂಚಿ ರತ್ನಮ್ಮ ಹೊಳ್ಳ ಸಹಕರಿಸಿದರು.
    ಈ ಸಂದರ್ಭದಲ್ಲಿ ಪ್ರಶಾಂತ್ ತೋಳಾರ್, ಡಾ| ಉಮೇಶ್ ಪುತ್ರನ್, ವಿ.ಆರ್.ಕೆ ಹೊಳ್ಳ, ಮುತ್ತಯ್ಯ ಶೆಟ್ಟಿ, ಡಾ| ಛಾಯಾ ಹೆಬ್ಬಾರ್, ಗೋಪಾಲ ಕೃಷ್ಣ ಶೆಟ್ಟಿ ಶಿರಿಯಾರ, ಕಾರ್ಯದರ್ಶಿ ಕೆ.ವಿ.ನಾಯಕ್, ಕೃಷ್ಣ ಕಾರಂತ್, ಚಂದ್ರ ಪೂಜಾರಿ, ನಿಯೋಜಿತ ಕಾರ್ಯದರ್ಶಿ ಸಂತೋಷ ಕೋಣಿ ಹಾಗೂ ರೆಡ್ ಕ್ರಾಸ್‌ನ ಸದಸ್ಯರು ಉಪಸ್ಥಿತರಿದ್ದರು.
    ಫೋಟೋ ಇದೆ

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025
    Leave A Reply Cancel Reply

    3 × three =

    Call us

    Click Here

    Call us

    Call us

    Call us
    Highest Viewed Recently
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.