Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಲೋಕಸಭಾ ಟಿಕೆಟ್: ಜೆ. ಪಿ ಹೆಗ್ಡೆ ಪರ ಮೊಳಗಿದ ಟ್ವಿಟಿಗರ ಧ್ವನಿ
    ಊರ್ಮನೆ ಸಮಾಚಾರ

    ಲೋಕಸಭಾ ಟಿಕೆಟ್: ಜೆ. ಪಿ ಹೆಗ್ಡೆ ಪರ ಮೊಳಗಿದ ಟ್ವಿಟಿಗರ ಧ್ವನಿ

    Updated:06/01/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿಸುವಂತೆ ಆಗ್ರಹ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಅವರ ಪರ ಟ್ವೀಟರನಲ್ಲಿ ಬಿಜೆಪಿ ಕಾರ್ಯಕರ್ತರು ಧ್ವನಿಯೆತ್ತಿದ್ದು, ಈ ಭಾರಿ ಲೋಕಸಭಾ ಚುನಾವಣೆಯಲ್ಲಿ ಅವರಿಗೆ ಟಿಕೇಟ್ ನೀಡಿ ಎಂಬ ಆಗ್ರಹವನ್ನು ಪ್ರಕಟಿಸಿದ್ದಾರೆ. ಇದು ಜ.5ರಂದು ಟ್ವಿಟರಿನಲ್ಲಿ ಟ್ರೆಂಡ್ ಆಗಿತ್ತು.

    ಜಯಪ್ರಕಾಶ್ ಹೆಗ್ಡೆ ಅವರಿಗೆ ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೆ ಬಿಜೆಪಿ ಟಿಕೇಟ್ ನೀಡಬೇಕು ಎಂಬ ಬೇಡಿಕೆಯನ್ನು ಬಿಜೆಪಿ ಕಾರ್ಯಕರ್ತರು ತಮ್ಮ ಪಕ್ಷದ ನಾಯಕರಿಗೆ ಮುಟ್ಟಿಸುವ ಪ್ರಯತ್ನ ಮಾಡಿದ್ದಾರೆ. ಜೆಪಿ ಹೆಗ್ಡೆಯವರಿಗೆ ಟಿಕೇಟು ನೀಡಬೇಕು ಮೋದಿಜಿ ಆಡಳಿತದಲ್ಲಿ ಜೆಪಿ ಹೆಗ್ಡೆಯವರಂತಹ ಸಮರ್ಥ ದಕ್ಷ ಆಡಳಿತ ಚತುರರು ಸಂಸದರಾಗಬೇಕು ಹಾಗಾದಾಗ ಮಾತ್ರ ಸಮಗ್ರ ಕ್ಷೇತ್ರದ ಅಭಿವೃದ್ದಿ ಸಾಧ್ಯ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಜಯಪ್ರಕಾಶ್ ಹೆಗ್ಡೆಯವರು ಸಂಸದರಾಗಿ ಸಚಿವರಾಗಿ ಶಾಸಕರಾಗಿ ಹಿರಿಯ ರಾಜಕೀಯ ಅನುಭವಿಗಳು ಹಾಗೂ ಕ್ಷೇತ್ರದ ಬಗ್ಗೆ ಸಮಗ್ರ ಪರಿಚಯ ಹೊಂದಿರುತ್ತಾರೆ, ತಳಮಟ್ಟದ ಕಾರ್ಯಕರ್ತರೊಂದಿಗೆ ಸಂಪರ್ಕ ಹೊಂದಿರುವ ಅವರ ಆಡಳಿತವನ್ನು ಹಿಂದೊಮ್ಮೆ ಜನತೆ ನೋಡಿದ್ದಾರೆ. ಅಂತಹ ಜನಸ್ಪಂದನೆಯ ನಾಯಕರು ನಮಗೆ ಇನ್ನೊಮ್ಮೆ ಬೇಕು ಎಂಬಂತೆ ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕಾರ್ಯಕರ್ತರು ಧ್ವನಿಸಿದ್ದಾರೆ. ಅವರಿಗೆ ನೀವು ಟೀಕೆಟ್ ನೀಡಿ, ಜಯಗೊಳಿಸುವುದು ನಮ್ಮ ಕರ್ತವ್ಯ ಎಂಬಂತೆ ಬಿಜೆಪಿ ಕಾರ್ಯಕರ್ತರು ಟ್ವೀಟ್ ಮಾಡಿದ್ದಾರೆ. #JPH4UdupiChikmagalur2019 ಹ್ಯಾಷ್ ಟ್ಯಾಗ್’ನಲ್ಲಿ ಒಟ್ಟು ಮೂರು ಸಾವಿರಕ್ಕೂ ಹೆಚ್ಚು ಟ್ವೀಟ್ಗಳೂ ಬಂದಿವೆ ಇನ್ನೂ ಹೆಚ್ಚುತ್ತಲೆ ಇದೆ. ಅದು ರಾಷ್ಟ್ರಮಟ್ಟದಲ್ಲಿ ಎಂಟನೇ ಸ್ಥಾನ ಮತ್ತು ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದು ಟ್ರೆಂಡ್ ಆಗಿದ್ದು ಬಹು ಮೆಚ್ಚುಗೆಯಾಗಿತ್ತು.

    Click here

    Click here

    Click here

    Click Here

    Call us

    Call us

    ಬಿಜೆಪಿ ಪಕ್ಷದ ನಾಯಕರುಗಳು ಪಕ್ಷದ ಕಾರ್ಯಕರ್ತರ ಧ್ವನಿಗೆ ಸ್ಪಂದಿಸಿ ಟಿಕೇಟು ನೀಡಿದರೆ ಜೆಪಿ ಹೆಗ್ಡೆಯವರು ಈ ಬಾರಿ ಎರಡು ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆದ್ದು ದಾಖಲೆ ನಿರ್ಮಿಸಲಿದ್ದಾರೆ ಎನ್ನುತ್ತಾರೆ ಜೆ.ಪಿ ಹೆಗ್ಡೆ ಅವರ ಅಭಿಮಾನಿ ನಾಗರಾಜ ಶೆಟ್ಟಿ ನೈಕಂಬ್ಳಿ

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    5 × 5 =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.