Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ್ರೇಮ ಪ್ರಸಂಗದಿಂದ ಇಬ್ಬರು ಮಕ್ಕಳನ್ನು ಕೊಂದ ತಂದೆಗೆ ಗಲ್ಲು
    ಅಪಘಾತ-ಅಪರಾಧ ಸುದ್ದಿ

    ಪ್ರೇಮ ಪ್ರಸಂಗದಿಂದ ಇಬ್ಬರು ಮಕ್ಕಳನ್ನು ಕೊಂದ ತಂದೆಗೆ ಗಲ್ಲು

    Updated:20/01/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಪರಸ್ತ್ರೀಯೊಂದಿಗಿನ ಪ್ರೇಮ ಪ್ರಸಂಗದಿಂದ ತನ್ನದೇ ಮಕ್ಕಳಿಬ್ಬರಿಗೆ ವಿಷವುಣಿಸಿ ಕೊಂದ ತಂದೆ, ಬೈಂದೂರು ಗಂಗನಾಡುಗೋಳಿ ಕಕ್ಕಾರಿನ ಶಂಕರನಾರಾಯಣ ಹೆಬ್ಟಾರ್‌ (48)ಗೆ ಗಲ್ಲು ಶಿಕ್ಷೆ ವಿಧಿಸಿ ಕುಂದಾಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ನ್ಯಾ| ಪ್ರಕಾಶ್‌ ಖಂಡೇರಿ ಶನಿವಾರ ಮಹತ್ವದ ತೀರ್ಪು ನೀಡಿದ್ದಾರೆ.

    Click Here

    Call us

    Click Here

    ಜ. 3ರಂದು ಆರೋಪ ಸಾಬೀತಾಗಿದ್ದು, ಜ. 7ಕ್ಕೆ ತೀರ್ಪನ್ನು ಮುಂದೂಡಿದ್ದರು. ಬಳಿಕ ಮತ್ತೆ ನ್ಯಾಯಾಧೀಶರು ಅದನ್ನು ಜ. 19ಕ್ಕೆ ಮುಂದೂಡಿದ್ದರು. ಹಿರಿಯಡಕದ ಜಿಲ್ಲಾ ಕಾರಾಗೃಹದಲ್ಲಿದ್ದ ಅಪರಾಧಿಯನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಇದು ಕುಂದಾಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಧಿಸುತ್ತಿರುವ 3ನೇ ಮರಣದಂಡನೆ ತೀರ್ಪಾಗಿದೆ.

    ಪ್ರಕರಣದ ಹಿನ್ನೆಲೆ
    2016ರ ಅ. 16ರಂದು ಪರಸ್ತ್ರೀ ವ್ಯಾಮೋಹದಿಂದ ಶಂಕರನಾರಾಯಣನು ತನ್ನಿಬ್ಬರು ಮಕ್ಕಳು ಮತ್ತು ಪತ್ನಿಗೆ ವಿಷ ನೀಡಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ. ಪರಿಣಾಮ ಮಕ್ಕಳಾದ ಅಶ್ವಿ‌ನ್‌ ಕುಮಾರ್‌ ಹೆಬ್ಟಾರ್‌ (15) ಹಾಗೂ ಐಶ್ವರ್ಯಾ ಲಕ್ಷ್ಮೀ ಹೆಬ್ಟಾರ್‌ (13) ಸಾವಿಗೀಡಾಗಿದ್ದು, ಪತ್ನಿ ಮಹಾ ಲಕ್ಷಿ ಹಾಗೂ ಶಂಕರ ನಾರಾಯಣ ಹೆಬ್ಟಾರ್‌ ಪಾರಾಗಿದ್ದರು.

    ಈ ಕೃತ್ಯಕ್ಕೆ ಶಂಕರನಾರಾಯಣನ ಪ್ರೇಮ ಪ್ರಕರಣವೇ ಕಾರಣ ಎಂಬುದು ಡೆತ್‌ನೋಟ್‌ನಿಂದ ಬಹಿರಂಗಗೊಂಡಿತ್ತು. ಆತ ಘಟನೆಗೆ ಆರು ತಿಂಗಳ ಹಿಂದೆ ಪತ್ನಿ, ಮಕ್ಕಳನ್ನು ತೊರೆದು ಪ್ರಿಯತಮೆಯ ಜತೆಗೆ ವಾಸಿಸುತ್ತಿದ್ದ. ಘಟನೆ ನಡೆಯುವ ಎರಡು ದಿನಗಳ ಹಿಂದೆ ಆಕೆಗೆ ನಿಶ್ಚಿತಾರ್ಥವಾಗಿದ್ದು, ಇದರಿಂದ ನೊಂದು ಮನೆಗೆ ಬಂದಿದ್ದ. “ನಾನು, ನನ್ನ ಹೆಂಡತಿ ಹಾಗೂ ಮಕ್ಕಳು ವಿಷ ಕುಡಿದು ಸಾಯಲು ತೀರ್ಮಾನಿಸಿದ್ದೇವೆ. ನನ್ನ ಸಾವಿಗೆ ಪ್ರಿಯತಮೆಯೇ ಕಾರಣ. ಆಕೆ ಬಂದು ನೋಡುವವರೆಗೆ ನಮ್ಮ ಶವಗಳನ್ನು ತೆಗೆಯಬಾರದು’ ಎಂದು 18 ಪುಟಗಳ ಡೆತ್‌ನೋಟ್‌ ಬರೆದಿದ್ದ. ಇದನ್ನು ಬಲವಾದ ಸಾಕ್ಷಿಯಾಗಿ ಪರಿಗಣಿಸಲಾಗಿತ್ತು. ಪ್ರಾಸಿಕ್ಯೂಶನ್‌ ಪರ ಜಿಲ್ಲಾ ಸರಕಾರಿ ಅಭಿಯೋಜಕ ಬೇಳೂರು ಪ್ರಕಾಶ್‌ಚಂದ್ರ ಶೆಟ್ಟಿ ವಾದಿಸಿದ್ದರು.

    Click here

    Click here

    Click here

    Call us

    Call us

    ಮಕ್ಕಳ ಕೊಲೆಗೆ ಸೆಕ್ಷನ್‌ 302ರಡಿ ಗಲ್ಲು, ಪತ್ನಿಯ ಕೊಲೆ ಯತ್ನಕ್ಕೆ ಸೆಕ್ಷನ್‌ 307ರಡಿ 7 ವರ್ಷ ಕಠಿನ ಸಜೆ ಹಾಗೂ 10 ಸಾ. ರೂ. ದಂಡ, ವಿಷವುಣಿಸಿದ್ದಕ್ಕೆ ಸೆಕ್ಷನ್‌ 328ರಡಿ 10 ವರ್ಷ ಕಠಿನ ಸಜೆ ಹಾಗೂ 10 ಸಾ.ರೂ. ದಂಡ, ವಿಷದ ಬಾಟಲಿ ಎಸೆದು ಸಾಕ್ಷ ನಾಶ ಯತ್ನಕ್ಕೆ ಸೆಕ್ಷನ್‌ 201ರಡಿ 7 ವರ್ಷ ಕಠಿನ ಸಜೆ ಹಾಗೂ 10 ಸಾ.ರೂ. ದಂಡ, ಆತ ಆತ್ಮಹತ್ಯೆಗೆ ಯತ್ನಿಸಿದ್ದಕ್ಕೆ 6 ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ. ಸಾವಿಗೀಡಾದ ಮಕ್ಕಳ ತಾಯಿಯು ಕಾನೂನು ಸೇವಾ ಪ್ರಾಧಿಕಾರದಲ್ಲಿ ಪರಿಹಾರ ಪಡೆದುಕೊಳ್ಳಬಹುದು ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ತಿಳಿಸಿದ್ದಾರೆ.

    ಉಡುಪಿ ಜಿಲ್ಲೆಯ ಇತಿಹಾಸಲ್ಲಿ ಇದು 3ನೇ ಮರಣದಂಡನೆ ಶಿಕ್ಷೆಯಾಗಿದ್ದು, ಅವೆಲ್ಲವನ್ನೂ ಕುಂದಾಪುರದ ನ್ಯಾಯಾಲಯವೇ ವಿಧಿಸಿರುವುದು ವಿಶೇಷ. 2016ರಲ್ಲಿ ಯುವತಿಯನ್ನು ಕೊಲೆ ಮಾಡಿದ ಆರೋಪದಲ್ಲಿ ಸತೀಶ್‌ ಹೆಮ್ಮಾಡಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದ್ದು, ಬಳಿಕ 2017ರಲ್ಲಿ ಹೈಕೋರ್ಟ್‌ ಅದನ್ನು ರದ್ದುಪಡಿಸಿತ್ತು. ಗರ್ಭಿಣಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು.

    2010ರ ಜೂ. 16ರಂದು ಪುತ್ತೂರಿನ ನಿವಾಸಿ, ಪಂಜಾಬ್‌ ನ್ಯಾಶನಲ್‌ ಬ್ಯಾಂಕಿನ ಮಹಾರಾಷ್ಟ್ರದ ಸೋಲಾಪುರ ಶಾಖೆಯ ಸಹಾಯಕ ಮ್ಯಾನೇಜರ್‌ ರಮೇಶ್‌ ನಾಯ್ಕ ತನ್ನ ಇಬ್ಬರು ಮಕ್ಕಳು, ಅತ್ತೆ ಹಾಗೂ ನಾದಿನಿಯನ್ನು ಕೊಲೆ ಮಾಡಿದ ಪ್ರಕರಣ ಹಾಗೂ ಸುಪ್ರೀಂ ಕೋರ್ಟೊಂದರ ಪ್ರಕರಣವನ್ನು ಪಬ್ಲಿಕ್‌ ಪ್ರಾಸಿಕ್ಯೂಟರ್‌ ವಿಚಾರಣೆ ವೇಳೆ ಉಲ್ಲೇಖೀಸಿದ್ದರು. ಅವುಗಳಿಗೂ ಈ ಪ್ರಕರಣಕ್ಕೂ ಸಾಮ್ಯತೆ ಇದ್ದು, ಅಲ್ಲಿ ನೀಡಿದ್ದ ಮರಣದಂಡನೆಯನ್ನೇ ಇಲ್ಲೂ ನೀಡಬೇಕು ಎಂದು ಮನವಿ ಮಾಡಿದ್ದರು.

    ಈ ಪ್ರಕರಣದಲ್ಲಿ ಒಟ್ಟು 43 ಸಾಕ್ಷಿಗಳ ಪೈಕಿ 17ನ್ನು ವಿಚಾರಣೆ ನಡೆಸಲಾಗಿತ್ತು. ಮಕ್ಕಳ ತಾಯಿ ಹಾಗೂ ಅಪರಾಧಿಯ ಪತ್ನಿಯೇ ಪ್ರಕರಣದ ಪ್ರತ್ಯಕ್ಷ ಸಾಕ್ಷಿಯಾಗಿದ್ದರು. ಅಪರಾಧಿಯು ಈ ಕೃತ್ಯ ಎಸಗುವ ಮುನ್ನ ಪತ್ರಕರ್ತರೊಬ್ಬರಿಗೆ ಕರೆ ಮಾಡಿ, “ಮರುದಿನ ಮನೆಗೆ ಬನ್ನಿ, ಹಾಟ್‌ ನ್ಯೂಸ್‌ ಇದೆ’ ಎಂದು ಹೇಳಿದರು. ಹಾಗಾಗಿ ಆ ಪತ್ರಕರ್ತ ಕೂಡ ಸಾಕ್ಷಿಧಾರರಾಗಿದ್ದರು. ಅಂದಿನ ಬೈಂದೂರು ವೃತ್ತ ನಿರೀಕ್ಷಕ ರಾಘವ ಪಡೀಲ್‌ ಚಾರ್ಜ್‌ಶೀಟ್‌ ಸಲ್ಲಿಸಿದ್ದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಚಾಂಪಿಯನ್‌ಶಿಪ್ ರೆಕಾರ್ಡ್ ಕ್ರಿಯೇಟ್‌ಗೈದ ಮಂಜುನಾಥ ಅವರಿಗೆ ಪ್ರಶಸ್ತಿ ಪ್ರದಾನ

    08/12/2025

    ಕುಂದಾಪುರದ ರಚಿತಾಗೆ ಕರ್ನಾಟಕ 19 ವರ್ಷದೊಳಗಿನ ಮಹಿಳಾ ಏಕದಿನ ಕ್ರಿಕೆಟ್ ಟೂರ್ನಿ ನಾಯಕತ್ವ

    08/12/2025

    ಕುಂದಾಪುರ: ಡಿ.15ರಿಂದ ಅಣಬೆ ಮತ್ತು ಜೇನು ಕೃಷಿ ತರಬೇತಿ

    08/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಚಾಂಪಿಯನ್‌ಶಿಪ್ ರೆಕಾರ್ಡ್ ಕ್ರಿಯೇಟ್‌ಗೈದ ಮಂಜುನಾಥ ಅವರಿಗೆ ಪ್ರಶಸ್ತಿ ಪ್ರದಾನ
    • ಕುಂದಾಪುರದ ರಚಿತಾಗೆ ಕರ್ನಾಟಕ 19 ವರ್ಷದೊಳಗಿನ ಮಹಿಳಾ ಏಕದಿನ ಕ್ರಿಕೆಟ್ ಟೂರ್ನಿ ನಾಯಕತ್ವ
    • ಕುಂದಾಪುರ: ಡಿ.15ರಿಂದ ಅಣಬೆ ಮತ್ತು ಜೇನು ಕೃಷಿ ತರಬೇತಿ
    • ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ವರ್ಷದ ಪರಿನಿರ್ವಾಣ ದಿನ
    • ಸ್ವಚ್ಛತೆ ಎಂಬುವುದು ಮನೆಮನಗಳನ್ನು ತಲುಪಲಿ: ಸಂಸದ ಕೋಟ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d