Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮನುಷ್ಯನಲ್ಲಿ ಉತ್ತಮ ಗುಣವಿದ್ದರೆ ಕಲಿತ ವಿದ್ಯೆಗೂ ಬೆಲೆ ಬರುತ್ತದೆ
    ಊರ್ಮನೆ ಸಮಾಚಾರ

    ಮನುಷ್ಯನಲ್ಲಿ ಉತ್ತಮ ಗುಣವಿದ್ದರೆ ಕಲಿತ ವಿದ್ಯೆಗೂ ಬೆಲೆ ಬರುತ್ತದೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ: ಮಹಿಳೆಯರಿಗೆ ಅವಕಾಶ ದೊರೆತರೆ, ಎಲ್ಲರಿಂದ ಉತ್ತಮ ಸಹಕಾರ ದೊರೆತರೆ ಕೈಹಿಡಿದ ಕಾರ್ಯ ಯಶಸ್ವಿಯಾಗುತ್ತದೆ. ಮಕ್ಕಳಿಗೆ ಬಾಲ್ಯದಲ್ಲಿ ಉತ್ತಮ ಸಂಸ್ಕಾರ ನೀಡುವ ಕಾರ್ಯ ನಡೆಯಬೇಕು. ಉತ್ತಮ ಗುಣಗಳನ್ನು ಬೆಳೆಸಬೇಕು. ಸಂಜೆ ಮನೆ ಮನೆಗಳಲ್ಲಿ ಭಜನೆ, ಪ್ರಾರ್ಥನೆ ನಡೆದರೆ ಯುವಪೀಳಿಗೆಯಲ್ಲಿ ಧಾರ್ಮಿಕ ಚಿಂತನೆ ಬೆಳೆಯುತ್ತದೆ. ಮನುಷ್ಯನಲ್ಲಿ ಉತ್ತಮ ಗುಣವಿದ್ದರೆ ಆದ ಕಲಿತ ವಿದ್ಯೆಗೆ ಬೆಲೆ ಬರುತ್ತದೆ. ಸ್ವಸಹಾಯ ಸಂಘದ ಸದಸ್ಯರು ತಮ್ಮಲ್ಲಿನ ಭಿನ್ನಾಭಿಪ್ರಾಯ ಮರೆತು ತಮ್ಮ ಜೀವನದ ಯಶಸ್ಸಿಗಾಗಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಗಂಗೊಳ್ಳಿ ಶ್ರೀ ಪಂಜುರ್ಲಿ ದೈವಸ್ಥಾನದ ಮೊಕ್ತೇಸರ ಜಿ.ಪುರುಷೋತ್ತಮ ಆರ್ಕಾಟಿ ಹೇಳಿದರು.

    Click Here

    Call us

    Click Here

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೈಂದೂರು, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಗಂಗೊಳ್ಳಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತ್ರಾಸಿ ವಲಯ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿ ಶ್ರೀ ಶಾರದಾ ಮಂಟಪದಲ್ಲಿ ಭಾನುವಾರ ಜರಗಿದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟ ಪದಗ್ರಹಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

    ಕುಂದಾಪುರ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ನ ಕಾರ್ಯದರ್ಶಿ ಶಿವಾನಂದ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೈಂದೂರು ತಾಲೂಕು ಯೋಜನಾಧಿಕಾರಿ ಶಶಿರೇಖಾ ಪಿ. ಒಕ್ಕೂಟದ ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿ ಹಸ್ತಾಂತರಿಸಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಎಸ್. ಪೂಜಾರಿ, ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಮಂಜು ಬಿಲ್ಲವ, ತ್ರಾಸಿ ವಲಯ ಜನಜಾಗೃತಿ ವೇದಿಕೆ ಸದಸ್ಯ ಬಿ.ರಾಘವೇಂದ್ರ ಪೈ ಶುಭ ಹಾರೈಸಿದರು. ಗಂಗೊಳ್ಳಿ ಕೊಂಕಣಿ ಖಾರ್ವಿ ಸಮಾಜ ಅಧ್ಯಕ್ಷ ದಿವಾಕರ ಖಾರ್ವಿ, ಗಂಗೊಳ್ಳಿ ಎ, ಗಂಗೊಳ್ಳಿ ಬಿ, ಗಂಗೊಳ್ಳಿ ಬಂದರು ಹಾಗೂ ಎಂ.ಜಿ. ಬಂದರು ಒಕ್ಕೂಟದ ನೂತನ ಹಾಗೂ ನಿರ್ಗಮಿತ ಪದಾಧಿಕಾರಿಗಳು ಉಪಸ್ಥಿತರಿದ್ದರು.

    ಯೋಜನೆಯ ತ್ರಾಸಿ ವಲಯ ಮೇಲ್ವಿಚಾರಕ ವೆಂಕಟೇಶ ನಾಯ್ಕ್ ಸ್ವಾಗತಿಸಿದರು. ಸೇವಾ ಪ್ರತಿನಿಧಿ ರಾಧಾ ವರದಿ ವಾಚಿಸಿದರು. ಸೇವಾ ಪ್ರತಿನಿಧಿ ರತ್ನಿ ಒಕ್ಕೂಟದ ನೂತನ ಪದಾಧಿಕಾರಿಗಳನ್ನು ಪರಿಚಯಿಸಿದರು. ಸುಂದರ ಜಿ. ಕಾರ್ಯಕ್ರಮ ನಿರೂಪಿಸಿದರು. ಸ್ವಸಹಾಯ ಸಂಘಗಳ ಒಕ್ಕೂಟದ ಕೇಂದ್ರ ಸಮಿತಿ ಅಧ್ಯಕ್ಷ ಕೃಷ್ಣ ಪೂಜಾರಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    13 − 1 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.