Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಮಿಷಕ್ಕೊಳಗಾಗದೇ ಮತದಾನ ಮಾಡುವ ಬದ್ಧತೆ ಅಗತ್ಯ: ಎಸ್. ಜನಾರ್ದನ
    ಊರ್ಮನೆ ಸಮಾಚಾರ

    ಆಮಿಷಕ್ಕೊಳಗಾಗದೇ ಮತದಾನ ಮಾಡುವ ಬದ್ಧತೆ ಅಗತ್ಯ: ಎಸ್. ಜನಾರ್ದನ

    Updated:12/03/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನರಿಂದ ಆಯ್ಕೆಯಾಗುವ ಸಂಸದರು ಪ್ರಭುಗಳಲ್ಲ. ಅವರು ಎಂದಿಗೂ ಜನರ ಪ್ರತಿನಿಧಿ ಹಾಗೂ ಉತ್ತರದಾಯಿಗಳು ಎಂಬ ಪ್ರಜ್ಞೆ ಜಾಗೃತಗೊಳ್ಳುವ ಜೊತೆಗೆ ಮತದಾನ ಮಾಡುವ ವಿಧಾನ ಹಾಗೂ ಮತದಾನ ಮಾಡದೇ ಇರುವ ಪ್ರವೃತ್ತಿಯಲ್ಲಿಯೂ ಬದಲಾವಣೆಯಾಗಬೇಕಿದೆ ಎಂದು ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್. ಜನಾರ್ದನ ಮರವಂತೆ ಹೇಳಿದರು.

    Click Here

    Call us

    Click Here

    ಅವರು ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನದ ನೇತೃತ್ವದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಜ್ಯಶಾಸ್ತ್ರ ವಿಭಾಗ ಹಾಗೂ ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಆಯೋಜಿಸಲಾದ ’ನಾನು ಮತ್ತು ನನ್ನ ಮತ ಮಾರಾಟಕ್ಕಿಲ್ಲ’ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

    ಸಂಬಂಧ, ಜಾತಿ, ಧರ್ಮ, ಆಮಿಷಗಳಿಗೆ ಒಳಗಾಗದೇ ಮತದಾನ ಮಾಡುತ್ತೇನೆ ಎಂಬ ಬದ್ದತೆ ಇದ್ದರೇ, ಮತದಾರ ಸ್ಪಂದನೀಯ ಹಾಗೂ ವಿವೇಚನೀಯನೂ ಆದರೆ ಮತ ಮಾರಾಟಕ್ಕಿಲ್ಲ ಎಂಬುದು ಅರ್ಥ ಕಂಡುಕೊಳ್ಳಲಿದೆ ಎಂದರು.

    ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನ ಸಂಚಾಲಕ ದಾಮೋದರ ಆಚಾರ್ಯ ಮಾತನಾಡಿ ರಾಜಕೀಯ ಪ್ರಜ್ಞೆ ಇಲ್ಲದಿದ್ದರೇ ಪ್ರಜಾಪ್ರಭುತ್ವ ಸವಾಲನ್ನು ಎದುರಿಸುತ್ತದೆ. ಹಣ, ಆಮಿಷಗಳ ಮೂಲಕ ಚುನಾವಣೆ ಎಂಬುದು ನಾಚಿಕೆಯ ಸಂಗತಿಯಾಗಿತ್ತು. ಆದರೆ ಇಂದು ಆ ಚೌಕಟ್ಟು ಕಳಚಿ ಮಾಮೂಲಿ ವಿಷಯದಂತಾಗಿದೆ. ದೇಶದ ಪ್ರತಿ ಪ್ರಜೆಯೂ ಅಭಿವೃದ್ಧಿಯಲ್ಲಿ ಪಾಲುದಾರರಾಗಬೇಕೆಂಬ ಪ್ರಜಾಪ್ರಭುತ್ವದ ಮೂಲ ಆಶಯವನ್ನು ಅರ್ಥ ಮಾಡಿಕೊಳ್ಳುವುದರ ಜೊತೆಗೆ ಆಮಿಷಗಳಿಂದ ದೂರವಾಗಿ, ನಮ್ಮ ಸುತ್ತಲಿನವರನ್ನು ಎಚ್ಚರಿಸಲು ಸಾಧ್ಯವಾದರೆ ಪ್ರಜಾತಂತ್ರಕ್ಕೆ ಗೆಲುವಿದೆ ಎಂದರು.

    Click here

    Click here

    Click here

    Click Here

    Call us

    Call us

    ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋದಿಸಲಾಯಿತು. ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಬಿ. ಎ. ಮೇಳಿ ಅಧ್ಯಕ್ಷತೆ ವಹಿಸಿದ್ದರು.

    ರಾಜ್ಯಶಾಸ್ತ್ರ ಉಪನ್ಯಾಸಕ ಪಿ. ವಿ ಶಿವಕುಮಾರ್ ಪ್ರಸ್ತಾವನೆಗೈದರು. ಪ್ರಾಧ್ಯಾಪಕ ನವೀನ್ ಕಾರ್ಯಕ್ರಮ ನಿರೂಪಿಸಿದರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    17 − sixteen =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.