Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಪಘಾತದಲ್ಲಿ ಮೃತರಾದ ಪೊಲೀಸ್ ಹೆಚ್‌ಸಿ ಚಂದ್ರಶೇಖರ್‌ಗೆ ಅಂತಿಮ ನಮನ
    ಊರ್ಮನೆ ಸಮಾಚಾರ

    ಅಪಘಾತದಲ್ಲಿ ಮೃತರಾದ ಪೊಲೀಸ್ ಹೆಚ್‌ಸಿ ಚಂದ್ರಶೇಖರ್‌ಗೆ ಅಂತಿಮ ನಮನ

    Updated:16/04/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ : ಅಪಘಾತದಲ್ಲಿ ತೀವೃವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತ ಪಟ್ಟ ಕುಂದಾಪುರ ಪೊಲೀಸ್‌ ಠಾಣೆಯ ಹೆಡ್‌ ಕಾನ್‌ಸ್ಟೇಬಲ್‌ ಬಿ.ಚಂದ್ರಶೇಖರ (42) ಅವರ ಪಾರ್ಥಿವ ಶರೀರಕ್ಕೆ ಮಂಗಳವಾರ ಬೆಳಿಗ್ಗೆ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ಅಂತಿಮ ನಮನಗಳನ್ನು ಸಲ್ಲಿಸಲಾಯಿತು.

    Click Here

    Call us

    Click Here

    ಭಾನುವಾರ ರಾತ್ರಿ ಬ್ರಹ್ಮಾವರದಿಂದ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಮಾಬುಕೊಳ ಸೇತುವೆ ಬಳಿ ಸಂಭವಿಸಿದ ಅಪಘಾತದಿಂದ ಚಂದ್ರಶೇಖರ್ ಮೃತರಾಗಿದ್ದರು. ಉಡುಪಿಯ ಜಿಲ್ಲಾ ಸಶಸ್ತ್ರ ಪಡೆಯ ಕೇಂದ್ರ ಸ್ಥಾನದಲ್ಲಿ ಇಲಾಖಾ ಅಂತಿಮ ಗೌರವ ವಂದನೆಯ ಬಳಿಕ ಪಾರ್ಥಿವ ಶರೀರವನ್ನು ಕುಂದಾಪುರಕ್ಕೆ ತರಲಾಗಿತ್ತು. ಈ ವೇಳೆ ಪೊಲೀಸ್‌, ಗ್ರಹ ರಕ್ಷಕ ದಳದ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದರು.

    ಕರ್ತವ್ಯ ನಿಮಿತ್ತ ಬ್ರಹ್ಮಾವರ ಕಡೆಗೆ ತಮ್ಮ ಬೈಕ್‌ನಲ್ಲಿ ತೆರಳಿ ಹಿಂತಿರುಗುತ್ತಿದ್ದ ವೇಳೆ ಮಾಬುಕೊಳದ ಸೇತುವೆ ಬಳಿ ಅವರ ಬೈಕ್‌ಗೆ ವಾಹನವೊಂದು ಡಿಕ್ಕಿ ಹೊಡೆದಿತ್ತು. ಅಪಘಾತದಿಂದಾಗಿ ಕುತ್ತಿಗೆಗೆ ಗಂಭೀರವಾಗಿ ಗಾಯಗೊಂಡಿದ್ದ ಅವರಿಗೆ ತಕ್ಷಣ ವೈದ್ಯಕೀಯ ನೆರವು ದೊರಕಿರಲಿಲ್ಲ.

    ಕರ್ತವ್ಯ ನಿಮಿತ್ತ ಉಡುಪಿ ಕಡೆಗೆ ಹೋಗಿ ಹಿಂತಿರುಗುತ್ತಿದ್ದ ಕುಂದಾಪುರ ಠಾಣೆಯ ಸಹಾಯಕ ಉಪನಿರೀಕ್ಷಕರುಗಳಾದ ಅಶೋಕ ಹಾಗೂ ಪಾಂಡುರಂಗ ರಸ್ತೆಯ ಬದಿಯಲ್ಲಿ ಬಿದ್ದಿದ್ದ ಬೈಕ್‌ನ್ನು ಗುರುತಿಸಿ ಸಹಾಯಕ್ಕೆ ಮುಂದಾಗಿದ್ದಾರೆ. ಅದೇ ದಾರಿಯಲ್ಲಿ ಬರುತ್ತಿದ್ದ ಕುಂದಾಪುರದ ಎಸ್‌.ಐ ಹರೀಶ್‌ ನಾಯಕ್‌ ಅವರನ್ನು ದೂರವಾಣಿಯಲ್ಲಿ ಸಂಪರ್ಕಿಸಿ ಪರಿಸ್ಥಿತಿಯನ್ನು ವಿವರಿಸಿದ್ದಾರೆ. ದೂರವಾಣಿ ಕರೆಗೆ ಸ್ಪಂದಿಸಿದ ಅವರು ಚಂದ್ರಶೇಖರ ಅವರನ್ನು ತಕ್ಷಣ ಕೆಎಂಸಿ ಆಸ್ಪತ್ರೆಗೆ ಕೊಂಡೊಯ್ಯುವ ವ್ಯವಸ್ಥೆ ಮಾಡಿದ್ದಾರೆ. ಚಿಕಿತ್ಸೆಗೆ ಸ್ಪಂದಿಸದೆ ಅವರು ಸೋಮವಾರ ಮೃತ ಪಟ್ಟಿದ್ದಾರೆ.

    24 ವರ್ಷಗಳಿಂದ ಪೊಲೀಸ್‌ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಕಳೆದ 3–4 ವರ್ಷಗಳಿಂದ ಕುಂದಾಪುರ ಪೊಲೀಸ್‌ ಠಾಣೆಯ ಅಪರಾಧ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿರುವ ಅವರ ಪಾರ್ಥಿವ ಶರೀರದ ಅಂತಿಮ ಕ್ರೀಯೆಯನ್ನು ಉಪ್ಪಿನಕುದ್ರುವಿನ ಅವರ ಸ್ವಗ್ರಹದ ಬಳಿಯಲ್ಲಿ ನೆರವೇರಿಸಲಾಯಿತು. ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಕುಂದಾಪುರ ಉಪವಿಭಾಗದ ಡಿವೈಎಸ್‌ಪಿ ಬಿ.ಪಿ.ದಿನೇಶ್‌ಕುಮಾರ, ಸರ್ಕಲ್‌ ಇನ್ಸ್‌ಪೆಕ್ಟರ್‌ ಮಂಜಪ್ಪ ಡಿ.ಆರ್‌, ಉಪನಿರೀಕ್ಷಕರುಗಳಾದ ಹರೀಶ್‌ ಆರ್‌ ನಾಯಕ್‌, ಶ್ರೀಧರ ನಾಯಕ್‌ ಇದ್ದರು.

    Click here

    Click here

    Click here

    Click Here

    Call us

    Call us

    Also Read:
    ► ಕುಂದಾಪುರ: ಅಫಘಾತದಲ್ಲಿ ಗಾಯಗೊಂಡಿದ್ದ ಹೆಡ್ ಕಾನ್ಸ್ಟೇಬಲ್ ಚಂದ್ರಶೇಖರ್ ನಿಧನ – https://kundapraa.com/?p=31780 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    eleven − five =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.