Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಜ್ಯ ಮಟ್ಟದ ಹಲಸಿನ ಹಬ್ಬ ಉದ್ಘಾಟನೆ
    ಕುಂದಾಪ್ರದ್ ಸುದ್ಧಿ

    ರಾಜ್ಯ ಮಟ್ಟದ ಹಲಸಿನ ಹಬ್ಬ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಗ್ರಾಮೀಣ ಭಾಗದ ಖಾದ್ಯಗಳು ಇಂದಿಗೂ ತನ್ನ ರುಚಿಯನ್ನು ಉಳಿಸಿಕೊಂಡಿರುವುದರಿಂದಾಗಿ ಹಲಸಿನ ಖಾದ್ಯ ಹಾಗೂ ಹಲಸಿನಿಂದ ಉತ್ಪಾದಿಸುವ ತಿಂಡಿ-ತಿನಿಸುಗಳು ಇಂದು ದೇಶವಲ್ಲದೆ ವಿದೇಶಗಳಲ್ಲಿಯೂ ಜನಪ್ರೀಯವಾಗಿದೆ ಎಂದು ಉಡುಪಿಯ ಭಾರತೀಯ ವಿಕಾಸ ಟ್ರಸ್ಟ್‌ನ ಆಡಳಿತ ಟ್ರಸ್ಟಿ ಕೆ.ಎಂ ಉಡುಪ ಹೇಳಿದರು.

    Click Here

    Call us

    Click Here

    ಇಲ್ಲಿನ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಕೃಷಿ ಮತ್ತು ತೋಟಗಾರಿಕಾ ವಿಶ್ವ ವಿದ್ಯಾಲಯ ಶಿವಮೊಗ್ಗ, ಭಾರತೀಯ ಕೃಷಿ ಅನುಸಂಧಾನ ಪರಿಷತ್, ನವದೆಹಲಿ,  ಕೃಷಿ ವಿಜ್ಞಾನ ಕೇಂದ್ರ, ಬ್ರಹ್ಮಾವರ, ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ, ಬ್ರಹ್ಮಾವರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೃಷಿ, ತೋಟಗಾರಿಕೆ ಮತ್ತು ಅರಣ್ಯ ಇಲಾಖೆ ಹಾಗೂ ಭಾರತೀಯ ಕಿಸಾನ್ ಸಂಘದ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ಕಾಲ ನಡೆಯುವ ’ರಾಜ್ಯ ಮಟ್ಟದ ಹಲಸಿನ ಹಬ್ಬ 2015’ ನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

    ಅರಣ್ಯ ಇಲಾಖೆ ಸಸಿಗಳನ್ನು ವಿತರಣೆ ಮಾಡುವ ಸಂದರ್ಭದಲ್ಲಿ ಹಣ್ಣು ಹಂಪಲುಗಳನ್ನು ಬೆಳೆಯುವ ಸಸಿಗಳನ್ನು ವಿತರಣೆ ಮಾಡಬೇಕು. ಹಲಸು, ಹೆಬ್ಬಲಸು ಹಾಗೂ ಮಾವಿನ ಸಸಿಗಳು ಹಣ್ಣುಗಳನ್ನು ಮಾತ್ರವಲ್ಲದೆ, ಬೆಳೆ ಬಾಳುವ ಮರಗಳನ್ನು ನೀಡುತ್ತದೆ. ಬಡವರ ಹಾಗೂ ಸಾಮಾನ್ಯ ಜನರ ಖಾದ್ಯಗಳಾಗಿರುವ ಹಲಸಿನ ಉತ್ಪನ್ನಗಳು ಇಂದು ಕೇವಲ ಗ್ರಾಮೀಣ ಖಾದ್ಯಗಳಾಗಿ ಉಳಿದಿಲ್ಲ, ನಗರದಲ್ಲಿಯೂ ಇದರ ಬೇಡಿಕೆ ಹೆಚ್ಚಾಗಿರುವುದರಿಂದಾಗಿ ಮಾರುಕಟ್ಟೆಯಲ್ಲಿ ದರವೂ ಏರಿಕೆಯಾಗುತ್ತಿದೆ. ಸರ್ಕಾರ ಗ್ರಾಮೀಣ ಉತ್ಪನ್ನಗಳಿಗೆ ಸೂಕ್ತ ಪ್ರೋತ್ಸಾಹ ನೀಡುವುದರಿಂದ ಹಲಸಿನ ಉತ್ಪನ್ನಗಳ ಜತೆಯಲ್ಲಿ ಇತರ ಗ್ರಾಮೀಣ ಖಾದ್ಯಗಳು ಮಾರುಕಟ್ಟೆಯನ್ನು ಪ್ರವೇಶಿಸಿ ಗ್ರಾಮೀಣ ಜನರ ಬದುಕಿನಲ್ಲಿ ಹಸನು ತರಲು ಸಾಧ್ಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

    ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ.ಅಪ್ಪಣ್ಣ ಹೆಗ್ಡೆ ಅವರು ಅಧ್ಯಕ್ಷತೆ ವಹಿಸಿದ್ದರು. ಪುರಸಭೆಯ ಅಧ್ಯಕ್ಷೆ ಕಲಾವತಿ ಯು.ಎಸ್ ಪ್ರದರ್ಶನ ಮಳಿಗೆಯನ್ನು ಉದ್ಘಾಟಿಸಿದರು. ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ. ಟಿ.ಹೆಚ್. ಗೌಡ ಹಲಸಿನ ಕೈಪಿಡಿಯನ್ನು ಬಿಡುಗಡೆಗೊಳಿಸಿದರು. ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಡಾ.ನಾರಾಯಣ ಸ್ವಾಮಿ, ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ.ಎಂ. ಹನುಮಂತಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯ ಗಣಪತಿ ಟಿ.ಶ್ರೀಯಾನ್, ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕಾ ಕೇಂದ್ರದ ಸಹ ವಿಸ್ತರಣಾ ನಿರ್ದೇಶಕ ಡಾ.ಎಸ್.ಯು.ಪಾಟೀಲ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ನಿರ್ದೇಶಕ ದುಗ್ಗೇಗೌಡ, ಕುಂದಾಪುರದ ಯೋಜನಾಧಿಕಾರಿ ಅಮರಪ್ರಸಾದ್ ಶೆಟ್ಟಿ ಇದ್ದರು

    ವಿವಿಧ ಜಿಲ್ಲೆಗಳಿಂದ ಬಂದಿದ್ದ ಹಲಸು ಬೆಳೆಗಾರರಿಂದ ಹಲಸಿನ ವಿವಿಧ ತಳಿಗಳ ಪ್ರದರ್ಶನ ಹಾಗೂ ಮಾರಾಟ ನಡೆಸಿದರು. ಗ್ರಾಮೀಣ ಹಲಸಿನ ಖಾದ್ಯ ತಯಾರಿಕೆಯ ಪ್ರಾತ್ಯಕ್ಷೀಕೆ, ಹಲಸಿನ ವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ನಡೆಯಿತು. ವಿವಿಧ ವಿಚಾರಗೋಷ್ಠಿ, ಹಲಸಿನ ವಿಡಿಯೋ ಚಿತ್ರ ಪ್ರದರ್ಶನ ಹಾಗೂ ಹಲಸು ಕೃಷಿಕರ ಸನ್ಮಾನ ಕಾರ್ಯಕ್ರಮ ನಡೆಯಿತು.

    Click here

    Click here

    Click here

    Call us

    Call us

    _MG_6960

    ಗಣ್ಯರ ಭೇಟಿ : ಕುಂದಾಪುರದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಹಲಸಿನ ಹಬ್ಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ ಸೊರಕೆ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಸೇರಿದಂತೆ ಪ್ರಮುಖ ಗಣ್ಯರು ಭೇಟಿ ನೀಡಿದ್ದರು.

    ಕಾರ್ಯಕ್ರಮ ಸಂಯೋಜಕಿ ಡಾ.ಜಯಲಕ್ಷ್ಮೀ ನಾರಾಯಣ ಹೆಗಡೆ ಸ್ವಾಗತಿಸಿದರು, ಬ್ರಹ್ಮಾವರ ಕೃಷಿ ಕೇಂದ್ರದ ಸಂಜೀವ ದ್ಯಾವತನಯ ಹಾಗೂ ಸುಶೀಲಾ ನಿರೂಪಿಸಿದರು

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d