Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಂಕರ ಜಯಂತಿ ಸರಣಿ ಕಾರ್ಯಕ್ರಮದ ಉದ್ಘಾಟನೆ
    ಊರ್ಮನೆ ಸಮಾಚಾರ

    ಶಂಕರ ಜಯಂತಿ ಸರಣಿ ಕಾರ್ಯಕ್ರಮದ ಉದ್ಘಾಟನೆ

    Updated:06/05/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಬೈಂದೂರು: ಶಂಕರ ಜಯಂತಿ ಆಚರಣೆಯು ಬಹಳ ಪವಿತ್ರವಾದ ಕಾರ್ಯ. ಮನುಕುಲದ ಉದ್ಧಾರಕ್ಕೆ ಧಾರ್ಮಿಕ, ಸಂಸ್ಕೃತಿಯನ್ನು ಎತ್ತಿ ಹಿಡಿದು ಹೊಸ ಚರಿತ್ರೆ ಬರೆದ ಪುಣ್ಯತಮ ವ್ಯಕ್ತಿಯ ಕಾರ್ಯ, ಅಳಿವಿನಂಚಿನಲ್ಲಿದ್ದ ಹಿಂದೂ ಸನಾತನ ಧರ್ಮದ ಉಳಿವಿಗಾಗಿ ಯಾವುದೇ ಯುದ್ಧಗಳನ್ನು ಮಾಡದೇ ತರ್ಕಗಳ ಮೂಲಕ ಅನ್ಯ ಧರ್ಮದ ಲೋಪ ದೋಷಗಳ ತಿಳಿಸಿ ತರ್ಕಗಳಲ್ಲಿ ಗೆಲ್ಲುದರ ಜೊತೆ ಮನ ಪರಿವರ್ತನೆ ಮಾಡಿ ಹಿಂದೂ ಧರ್ಮದ ಪುನರುತ್ಥಾನಕ್ಕೆ ಶ್ರೀ ಶಂಕರರು ಕಾರಣರು, ಶ್ರೀ ಶಂಕರರು ಸಾಕ್ಷತ್ ದೇವರ ಅವತಾರವಾಗಿದ್ದು, ಮನುಕುಲದ ಉದ್ಧಾರಕ್ಕೆ ಶ್ರೀ ಶಂಕರರ ಕೊಡುಗೆ ಅಪಾರವಾದುದ್ದು ಎಂದು ಶೃಂಗೇರಿ ಶ್ರೀ ಶಾರದಾ ಪೀಠದ ದಕ್ಷಿಣಾಮ್ನಾಯ ಇವರ ಪ್ರಾಂತೀಯ ಧರ್ಮಧಿಕಾರಿಗಳಾದ ವೇದಮೂರ್ತಿ ಬಡಾಕೆರೆ ಲೋಕೇಶ ಅಡಿಗ ಹೇಳಿದರು.

    Click Here

    Call us

    Click Here

    ಅವರು ಶಾಂಕರ ತತ್ವ ಪ್ರಸರಣಾ ಸಮಿತಿ ಬೈಂದೂರು ತಾಲೂಕು ಇವರ ವತಿಯಿಂದ ಉಪ್ಪುಂದ ಸುವಿಚಾರ ಬಳಗ ಟ್ರಸ್ಟ್‌ನ ಸಹಯೋಗದಲ್ಲಿ ಉಪ್ಪುಂದ ಶ್ರೀ ಶಂಕರ ಕಲಾ ಮಂದಿರದ ಸಮೃದ್ಧ ಸಭಾ ಭವನದಲ್ಲಿ ಭಾನುವಾರ ಸಂಜೆ ನಡೆದ ಶಂಕರ ಜಯಂತಿ ಆಚರಣೆಯ ಸರಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಅಜ್ಞಾನದಿಂದ ದೇವರನ್ನು ಕಾಣಲಿಕ್ಕೆ ಸಾಧ್ಯವಿಲ್ಲ, ಜ್ಞಾನದಿಂದ ದೇವರನ್ನು ಕಾಣಲು ಸಾಧ್ಯ. ಮೋಕ್ಷ ಸಾಧನೆಗೂ ಜ್ಞಾನವು ಬಹಳ ಪ್ರಧಾನವಾಗಿದೆ ಎಂದು ಹೇಳಿದರು.

    ಉಪ್ಪುಂದ ಸುವಿಚಾರ ಬಳಗ ಟ್ರಸ್ಟ್‌ನ ಅಧ್ಯಕ್ಷ ಬಿ. ರಾಮಕೃಷ್ಣ ಶೇರೆಗಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ದ್ರಾವಿಡ ಬ್ರಾಹ್ಮಣ ಪರಿಷತ್ತು ಉಪ್ಪುಂದ ವಲಯ ಇದರ ಅಧ್ಯಕ್ಷ ಬಿ. ವಿಶ್ವೇಶ್ವರ ಅಡಿಗ, ಹವ್ಯಕ ಸಭಾ ಕುಂದಾಪರ ತಾಲೂಕು ಇದರ ಅಧ್ಯಕ್ಷ ಎಮ್. ನಾಗರಾಜ್ ಭಟ್ ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವೇದಮೂರ್ತಿ ತಿರುಮಲೇಶ್ವರ ಭಟ್ ಮಕ್ಕಿ ದೇವಸ್ಥಾನ ಇವರು ಶಂಕರ ಭಗವತ್ಪಾದರ ಭಾವಚಿತ್ರಕ್ಕೆ ಪೂಜೆ, ನೈವೇದ್ಯ, ಮಂಗಳಾರತಿ ನೆರವೇರಿಸಿದರು. ಉಪ್ಪುಂದ ವಿಪ್ರ ರಂಜಿನಿ ತಂಡದಿಂದ ಶಂಕರಾಚಾರ್ಯರರು ರಚಿಸಿದ ಸ್ತ್ರೋತ್ರಗಳನ್ನು ಪ್ರಸ್ತುತಪಡಿಸಿದರು. ಈ ಸಂಧರ್ಭದಲ್ಲಿ ದ್ವೀತಿಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ೬೦೦ ಕ್ಕೆ ೫೯೦ ಅಂಕ ಗಳಿಸಿ ರಾಜ್ಯಕ್ಕೆ ೫ ನೇ ರ‍್ಯಾಂಕ್ ಗಳಿಸಿದ ರೋಹನ್ ರಾವ್ ಜೆ.ಎಚ್. ಅವರನ್ನು ಟ್ರಸ್ಟ್‌ನ ಪರವಾಗಿ ಹಾಗೂ ಶೃಂಗೇರಿ ಶ್ರೀ ಮಠದ ಪರವಾಗಿ ಅಭಿನಂದಿಸಿ, ಗೌರವಿಸಲಾಯಿತು. ಯು. ಸಂದೇಶ್ ಭಟ್ ಪ್ರಾಸ್ತಾವಿಕ ಭಾಷಣ ಮಾಡಿ ಸ್ವಾಗತಿಸಿದರು. ಕುಮಾರಿ ವೈಷ್ಣವಿ ಮಯ್ಯ ಪ್ರಾರ್ಥಿಸಿದರು. ಸಂಚಾಲಕ ವಿ.ಹೆಚ್. ನಾಯಕ್ ವಂದಿಸಿದರು. ಸಹಸಂಚಾಲಕ ಯು. ಗಣೇಶ್ ಪ್ರಸನ್ನ ಮಯ್ಯ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025

    ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.